ಮಂಗಳವಾರ, ಅಕ್ಟೋಬರ್ 3, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಅಕ್ರಮ ಸಂಬಂಧ ಆರೋಪ: ಕೆಳಮನೆಯಲ್ಲಿದ್ದ ಪತ್ನಿ, ಮೇಲಿನ ಮನೆಯಲ್ಲಿದ್ದ ಪತಿ ಕಾಣ್ತಿಲ್ಲವೆಂದು ಪ್ರತ್ಯೇಕ ದೂರು ದಾಖಲು

Twitter
Facebook
LinkedIn
WhatsApp
PTI1 7 2017 000189A 1

ಬೆಂಗಳೂರು: ಹೆಂಡತಿ (Wife) ಕಾಣುತ್ತಿಲ್ಲವೆಂದು ಗಂಡ (Husband), ಪತಿ ಕಾಣುತ್ತಿಲ್ಲವೆಂದು ಪತ್ನಿ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ‌ ದೂರು ದಾಖಲಿಸಿದ್ದಾರೆ. ಜ್ಞಾನಭಾರತಿ ಪೊಲೀಸ್ ಠಾಣೆಯ ವ್ಯಾಪ್ತಿಯ ಮಾರುತಿ ನಗರ​​ನ ಕಟ್ಟಡವೊಂದರಲ್ಲಿ ಎರಡು ಕುಟುಂಬ ವಾಸವಿದ್ದವು. 12 ವರ್ಷದ ಹಿಂದೆ ವಿವಾಹವಾಗಿದ್ದ ನವೀದ್ ಮತ್ತು ಝೀನತ್ ದಂಪತಿ ಕೆಳ ಮಹಡಿಯಲ್ಲಿ ವಾಸವಾಗಿದ್ದರು. 8 ವರ್ಷದ ಹಿಂದೆ ವಿವಾಹವಾಗಿದ್ದ ಮುಬಾರಕ್ ಮತ್ತು ಶಾಜಿಯಾ ದಂಪತಿ ಎರಡನೇ ಮಹಡಿಯಲ್ಲಿ ವಾಸವಾಗಿದ್ದರು.

ಹೀಗೆ ವಾಸವಿದ್ದ ಕುಟುಂಬಗಳ ನಡುವೆ ಅಕ್ರಮ ಸಂಬಂಧದ ಆರೋಪ ಕೇಳಿಬಂದಿದೆ. ಮುಬಾರಕ್ ಪತ್ನಿ ಶಾಜಿಯಾ, ಝೀನತ್ ​​ಪತಿ ನವೀದ್ ಜೊತೆ​ ಸಂಬಂಧ ಹೊಂದಿದ್ದಾರೆಂದು ಆರೋಪವಿದೆ. ಈ ಹಿನ್ನೆಲೆ ಡಿಸೆಂಬರ್ 9 ,2022 ರಂದು ಶಾಜಿಯಾ ಮತ್ತು ನವೀದ್ ಇಬ್ಬರು ಮನೆಯಿಂದ ಹೊರಹೋದವರು ವಾಪಸ್ ಬರಲೇ ಇಲ್ಲ, ಪರಾರಿಯಾಗಿದ್ದಾರೆ ಆರೋಪ ಕೇಳಿಬಂದಿದ್ದು, ಇಬ್ಬರು ಒಟ್ಟಿಗೆ ಹೋಗಿದ್ದಾರೆಂದು ಝೀನತ್ ಮತ್ತು ಮುಬಾರಕ್ ಆರೋಪಿಸುತ್ತಿದ್ದಾರೆ.

ಈ ಸಂಬಂಧ ತಿಂಗಳ ಹಿಂದೆ ಝೀನತ್ ಮತ್ತು ಮುಬಾರಕ್ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ‌ ದೂರು ದಾಖಲಿಸಿದ್ದಾರೆ. ಆದರೆ ದೂರು ನೀಡಿ ಒಂದು ತಿಂಗಳು ಕಳೆದರು ಪೊಲೀಸರು ಕ್ರಮ ಕೈಗೊಂಡಿಲ್ಲವೆಂದು ಝೀನತ್ ಮತ್ತು ಮುಬಾರಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆ ಝೀನತ್ ಮತ್ತು ಮುಬಾರಕ್ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ ನಿಂಬರಗಿ ಭೇಟಿ ಮಾಡಿ ಜ್ಞಾನಭಾರತಿ ಪೊಲೀಸ್ ಠಾಣೆ ಇನ್ಸ್​ಪೆಕ್ಟರ್ ವಿರುದ್ಧ ಮೌಖಿಕ ದೂರು ನೀಡಿದ್ದಾರೆ. ಇನ್ನು ಶಾಜಿಯಾ ಪುಟ್ಟ ಮಗುವನ್ನು ಕರೆದೊಯ್ದಿದ್ದಾಳೆ ಎಂದು ಮುಬಾರಕ್ ಭಾವುಕರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ