ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಅರ್ಜಿ ಸಲ್ಲಿಕೆಗೆ ಯಾವುದೇ ಕಾಲಮಿತಿ ನೀಡಿಲ್ಲ ; ಈ ತಿಂಗಳ ಉಚಿತ ವಿದ್ಯುತ್ತಿಗೆ ಜುಲೈ 25 ರ ಒಳಗೆ ಅರ್ಜಿ ಸಲ್ಲಿಸಬೇಕು - ಕೆ. ಜೆ ಜಾರ್ಜ್ ಸ್ಪಷ್ಟನೆ

Twitter
Facebook
LinkedIn
WhatsApp
Electricity Tariff 2 710053 850x460 711010 850x460 1

ಬೆಂಗಳೂರು: ‘ಗೃಹಜ್ಯೋತಿ’ ಯೋಜನೆ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಯಾವುದೇ ಕಾಲಮಿತಿ ನಿಗದಿಪಡಿಸಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ ಸ್ಪಷ್ಟಪಡಿಸಿದರು. ವಿಧಾನಸಭೆಯಲ್ಲಿ ಬುಧವಾರ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಪ್ರಸ್ತಾಪಿಸಿದ ವಿಚಾರಕ್ಕೆ ಉತ್ತರಿಸಿದ ಇಂಧನ ಸಚಿವರು ”ಅರ್ಜಿ ಸಲ್ಲಿಕೆಗೆ ಯಾವುದೇ ಕಾಲಮಿತಿ ನೀಡಿಲ್ಲ,” ಎಂದು ಸ್ಪಷ್ಟಪಡಿಸಿದರು. ” ಜುಲೈ ತಿಂಗಳ ಸೌಲಭ್ಯ ಪಡೆಯಲು ಇದೇ ಜುಲೈ 25, 26 ರವರೆಗೆ ಅರ್ಜಿ ಸಲ್ಲಿಸಬಹುದು. ಆಗಸ್ಟ್‌ ಮೊದಲ ವಾರದಲ್ಲಿ ಬಿಲ್‌ ಸೃಜನೆಯಾಗಲಿದೆ. ಎರಡು ತಿಂಗಳ ಬಳಿಕ ಎಲ್ಲ ವಿದ್ಯುತ್‌ ಕಚೇರಿಗಳಲ್ಲಿಅದಾಲತ್‌ ಆಯೋಜಿಸಿ ಎಲ್ಲಅರ್ಹರಿಗೂ ಸೌಲಭ್ಯ ಕಲ್ಪಿಸುವ ಕೆಲಸ ಮಾಡಲಾಗುವುದು,” ಎಂದು ತಿಳಿಸಿದರು.

”ಈ ನಡುವೆ, ಕುಟೀರ ಜ್ಯೋತಿ, ಭಾಗ್ಯಜ್ಯೋತಿ ಯೋಜನೆಯಡಿ ಮಾಸಿಕ 40 ಯೂನಿಟ್‌ ಹಾಗೂ ‘ಅಮೃತಜ್ಯೋತಿ’ ಯೋಜನೆಯಡಿ ಪರಿಶಿಷ್ಟ ಬಿಪಿಎಲ್‌ ಕುಟುಂಬಕ್ಕೆ ಮಾಸಿಕ 75 ಯೂನಿಟ್‌ ಉಚಿತ ವಿದ್ಯುತ್‌ ಸೌಲಭ್ಯವಿದೆ. ಇವುಗಳ ಫಲಾನುಭವಿಗಳಿಗೂ ಗೃಹಜ್ಯೋತಿ ಸೌಲಭ್ಯ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ. ಇದರಿಂದ ಯೋಜನೆ ವ್ಯಾಪ್ತಿಗೆ ಇನ್ನೂ 40 ಲಕ್ಷ ಫಲಾನುಭವಿಗಳು ಸೇರ್ಪಡೆಯಾಗಲಿದ್ದಾರೆ,” ಎಂದು ವಿವರಿಸಿದರು.

ಆಕ್ಷೇಪಗಳಿಗೆ ಸದನದಲ್ಲೇ ಸಚಿವರ ಸ್ಪಷ್ಟನೆ
‘ಗೃಹಜ್ಯೋತಿ’ ಯೋಜನೆ ಸೌಲಭ್ಯ ವಿಚಾರವಾಗಿ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಕೆಲ ಆಕ್ಷೇಪಗಳಿಗೆ ಸರಕಾರ ಸದನದಲ್ಲೇ ಸ್ಪಷ್ಟನೆ ನೀಡಿತು.

” ಮುಖ್ಯವಾಗಿ ‘ಗೃಹಜ್ಯೋತಿ’ಗೆ 2.16 ಕೋಟಿ ಫಲಾನುಭವಿಗಳಿದ್ದು, ಈವರೆಗೆ 2.16 ಕೋಟಿ ಗ್ರಾಹಕರಿದ್ದು, ಅವರಿಗೆ 200 ಯೂನಿಟ್‌ ಉಚಿತ ವಿದ್ಯುತ್‌ ಘೋಷಿಸಲಾಗಿತ್ತು. ಈಗ ವಾರ್ಷಿಕ ಸರಾಸರಿ ಬಳಕೆ ಪ್ರಮಾಣದ ಮೇಲೆ ಶೇ. 10ರಷ್ಟು ಉಚಿತ ಎನ್ನುವುದು ಎಷ್ಟು ಸರಿ,” ಎಂದು ಎಚ್‌ಡಿಕೆ ಪ್ರಶ್ನಿಸಿದರು.

ಅದಕ್ಕೆ ಸಿಎಂ ಸಿದ್ದರಾಮಯ್ಯ, ” 200 ಯೂನಿಟ್‌ವರೆಗೆ ಉಚಿತ ವಿದ್ಯುತ್‌ ಎಂದಿದ್ದೇವೆ. ವರ್ಷವಿಡೀ ಸರಾಸರಿ 120 ಯೂನಿಟ್‌ ಬಳಸುತ್ತಿದ್ದರೆ ಅವರಿಗೆ 200 ಯೂನಿಟ್‌ವರೆಗೆ ಉಚಿತ ಏಕೆ, ” ಎಂದು ಪ್ರಶ್ನೆ ಮಾಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist