
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ನವದೆಹಲಿ : ಕೊರೊನಾ 2ನೇ ಅಲೆ ಇಳಿಯುತ್ತಿದೆ. ಜನರು ನಿರಾಳರಾಗುತ್ತಿದ್ದಾರೆ. ಲಾಕ್ಡೌನ್, ಕರ್ಫ್ಯೂಗಳು ಸಡಿಲಗೊಳ್ಳುತ್ತಿವೆ ಎನ್ನುವಾಗಲೇ, ಆಗಸ್ಟ್ ತಿಂಗಳಿನಿಂದ ಕೊರೊನಾ 3ನೇ ಅಲೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಹೆಚ್ಚಾಗಿದ್ದು, ಯಥಾಸ್ಥಿತಿಗೆ ಮರಳುತ್ತಿರುವ ಜನರು ಎಚ್ಚರಿಕೆಯನ್ನು ವಹಿಸಬೇಕು ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ.
ದೇಶದಲ್ಲಿ ಆಗಸ್ಟ್ನಿಂದ 3ನೇ ಅಲೆ ಆರಂಭವಾಗಲಿದೆ. ಇದು ಸೆಪ್ಟೆಂಬರ್ ತಿಂಗಳಿನಲ್ಲಿ ಗಂಭೀರ ಸ್ವರೂಪವನ್ನು ಪಡೆದುಕೊಳ್ಳಲಿದೆ. ಅಲ್ಲದೆ, ಜುಲೈ 2ನೇ ವಾರದಲ್ಲಿ ಅತೀ ಕಡಿಮೆ ಪ್ರಕರಣಗಳು ದಾಖಲಾಗಲಿವೆ. ಈ ತಿಂಗಳಿನಲ್ಲಿ ದೈನಂದಿನ ಪ್ರಕರಣಗಳ ವರದಿಯು 10,000ಕ್ಕೆ ಇಳಿಯುವ ಸಾಧ್ಯತೆಯಿದೆ. ಆದರೆ, ಆಗಸ್ಟ್ ತಿಂಗಳಿನಲ್ಲಿ ಕೊರೊನಾದ ಆಕ್ರಮಣ ಹೆಚ್ಚಾಗಲಿದೆ ಎಂದು ಎಸ್ಬಿಐ ರಿಸರ್ಚ್ ವರದಿಯನ್ನು ಪ್ರಕಟಿಸಿದೆ.
3ನೇ ಅಲೆಯನ್ನು ಎದುರಿಸಲು ಅತೀ ಹೆಚ್ಚು ಪ್ರಮಾಣದಲ್ಲಿ ಕೊರೊನಾ ಲಸಿಕೆಯನ್ನು ನೀಡುವುದು ಬಹುಮುಖ್ಯವಾಗಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಲಸಿಕೆ ಮಾತ್ರವಲ್ಲದೆ, ವಿದೇಶಿ ಲಸಿಕೆಗಳನ್ನು ಜನರಿಗೆ ವಿತರಿಸಲು ಸರ್ಕಾರ ಮುಂದಾಗಿದೆ. ಹೀಗಾಗಿ ರಷ್ಯಾದ ಸ್ಪುಟ್ನಿಕ್ ವಿ ಲಸಿಕೆ ತಯಾರಿಕೆಗೆ ಪನೇಸಿಯಾ ಬಯೋಟೆಕ್ ಸಂಸ್ಥೆಗೆ ಭಾರತದ ಔಷಧ ಮಹಾನಿರ್ದೇಶನಾಲಯ ಪರವಾನಿಗೆ ನೀಡಿದೆ.
ಸ್ಪುಟ್ನಿಕ್ ವಿ ಲಸಿಕೆಯು ಹಿಮಾಚಲ ಪ್ರದೇಶದ ಘಟಕದಲ್ಲಿ ಉತ್ಪಾದನೆಯಾಗಲಿದೆ.
ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ – ಸುನಿಲ್ ಕುಮಾರ್
ವಾಟ್ಸ್ಆ್ಯಪ್ನಿಂದ ಹೊಸ ಅಪ್ಡೇಟ್: ಇನ್ಮುಂದೆ ಸ್ಕ್ರೀನ್ ಶೇರ್ ಮಾಡಬಹುದು