ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಆಘಾತಕಾರಿ ಘಟನೆ : 2 ತಿಂಗಳಲ್ಲಿ ಬಾಲಕನಿಗೆ 9 ಬಾರಿ ಕಡಿದ ಹಾವು!

Twitter
Facebook
LinkedIn
WhatsApp
ಆಘಾತಕಾರಿ ಘಟನೆ : 2 ತಿಂಗಳಲ್ಲಿ ಬಾಲಕನಿಗೆ 9 ಬಾರಿ ಕಡಿದ ಹಾವು!

ಹಾವಿನ ದ್ವೇಷ ಹನ್ನೆರೆಡು ವರ್ಷ ಅಂತಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಹಲಕರ್ಟಿ ಗ್ರಾಮದ ಓರ್ವ ಬಾಲಕನಿಗೆ ಹಾವೊಂದು ಬೆಂಬಿಡದೆ ಕಾಡುತ್ತಿದೆ.ಹಲಕರ್ಟಿ ಗ್ರಾಮದ ವಿಜಯಕುಮಾರ್ ಮತ್ತು ಉಷಾ ದಂಪತಿಯ ಪುತ್ರ ಪ್ರಜ್ವಲ್ (15) ಒಂಬತ್ತನೇ ತರಗತಿಯಲ್ಲಿ ಓದುತ್ತಿದ್ದಾನೆ. ಈತನಿಗೆ ಎರಡು ತಿಂಗಳಲ್ಲಿ ಒಂದಲ್ಲ ಎರಡಲ್ಲ ಬರೊಬ್ಬರಿ ಒಂಬತ್ತು ಬಾರಿ ತನಗೆ ಹಾವು ಕಚ್ಚಿದೆ ಎಂದು ಪ್ರಜ್ವಲ್​ ಹೇಳಿದ್ದಾನೆ.

ಪ್ರಜ್ವಲ್​ಗೆ ಹಲಕರ್ಟಿ ಗ್ರಾಮದ ಮನೆಯಲ್ಲಿ ಜುಲೈ 3 ರಂದು ಮೊದಲ ಬಾರಿ ಹಾವು ಕಡಿದಿತ್ತು. ಈ ಹಿನ್ನೆಲೆಯಲ್ಲಿ ಕುಟುಂಬ ಹಲಕರ್ಟಿ ಗ್ರಾಮ ಬಿಟ್ಟು ಚಿತ್ತಾಪುರ ತಾಲೂಕಿನ ವಾಡಿಯಲ್ಲಿ ವಾಸವಾಗಿದ್ದಾರೆ.

ವಾಡಿಯಲ್ಲಿ ಮನೆ ಮಾಡಿಕೊಂಡು ವಾಸ ಮಾಡುತ್ತಿರುವ ಸಂದರ್ಭದಲ್ಲೂ ಪ್ರಜ್ವಲ್​​ಗೆ ಮತ್ತೆ ಹಾವು ಕಡಿದಿದೆ. ಆದರೆ ಈ ಹಾವು ಮಾತ್ರ ಪೋಷಕರಿಗೆ, ಕುಟುಂಬಸ್ಥರಿಗೆ ಯಾರಿಗೂ ಕಾಣಿಸಿಕೊಂಡಿಲ್ಲ. ಪ್ರಜ್ವಲ್ ಕಣ್ಣಿಗೆ ಮಾತ್ರ ಕಾಣಿಸಿಕೊಳ್ಳುತ್ತಿದೆ.ಹಾವಿನಿಂದ ಒಂಬತ್ತು ಬಾರಿ ಕಡಿತಕ್ಕೆ ಒಳಗಾದಾಗ ಆರು ಬಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು, ಮೂರು ಬಾರಿ ನಾಟಿ ಔಷಧದ ಚಿಕಿತ್ಸೆ ನೀಡಲಾಗಿದೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್​​ಚಾರ್ಜ್ ಆದ ಬಳಿಕ ಎರಡ್ಮೂರು ದಿನದಲ್ಲೇ ಹಾವು ಮತ್ತೆ ಕಡೆಯುತ್ತಿದೆ. ಸದ್ಯ ಪ್ರಜ್ವಲ್ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

Snake bite Kalaburagi 8

ಪ್ರಜ್ವಲ್​​ಗೆ ನಿಜವಾಗಿಯೂ ಹಾವು ಕಡಿಯುತ್ತಿದೆಯಾ ಎಂಬ ಕುತೂಹಲ ಹೆಚ್ಚಾಗಿದೆ. ಇನ್ನು ಪ್ರಜ್ವಲನ ಪೋಷಕರು ಈ ಹಾವಿನಿಂದ ಮುಕ್ತಿ ಕೊಡಿಸು ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist