ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಇಂದಿನಿಂದ‌ ಸಂಸತ್ ಬಜೆಟ್ ಅಧಿವೇಶನ ಆರಂಭ; ನಿರ್ಮಲಾ ಸೀತಾರಾಮನ್‌ರಿಂದ ಆರ್ಥಿಕ ಸಮೀಕ್ಷೆ ಮಂಡನೆ

Twitter
Facebook
LinkedIn
WhatsApp
whatsapp image 2023 01 23 at 23.22.31 one one

ದೆಹಲಿ: ಇಂದಿನಿಂದ‌ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ‌. ನಾಳೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಲಿದ್ದು, ಇಂದು ರಾಷ್ಟ್ರಪತಿ ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ. ಜೊತೆಗೆ ಇಂದು ನಿರ್ಮಲಾ‌‌ ಸೀತಾರಾಮನ್ ಆರ್ಥಿಕ ಸಮೀಕ್ಷಾ ವರದಿ ಮಂಡಿಸಲಿದ್ದಾರೆ.

ಇಂದಿನಿಂದ ಸಂಸತ್ ಬಜೆಟ್ ಅಧಿವೇಶನ ಆರಂಭವಾಗಲಿದೆ. ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್ ನ ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಷ್ಟ್ರಪತಿ ಭಾಷಣದ ಬಳಿಕ ನಿರ್ಮಲಾ ಸೀತಾರಾಮನ್ ಆರ್ಥಿಕ ಸಮೀಕ್ಷೆ ಮಂಡಿಸಲಿದ್ದಾರೆ‌. ನಾಳೆ‌ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡನೆ ಮಾಡಲಿದ್ದಾರೆ. ಜಾಗತಿಕ ಆರ್ಥಿಕ ಹಿಂಜರಿತದ ಕಾರಣದಿಂದಾಗಿ ಹಣಕಾಸು ಸಚಿವರು ವಿತ್ತೀಯ ಕೊರತೆಯನ್ನು ಕಾಪಾಡಿಕೊಳ್ಳುವುದರ ಜೊತೆಗೆ ಜನಪರ ಕಾರ್ಯಸೂಚಿ ನಡುವೆ ಸಮತೋಲನವನ್ನು ಕಂಡುಕೊಳ್ಳಬೇಕಿದ್ದು, ಉದ್ಯೋಗ ಸೃಷ್ಟಿ, ಮೂಲಸೌಕರ್ಯ, ಉತ್ಪಾದನೆ, ಕೃಷಿ ಮತ್ತು ಇತರ ಪ್ರಮುಖ ಕ್ಷೇತ್ರಗಳಿಗೆ ಸುಧಾರಿತ ಹಣವನ್ನು ಕೇಂದ್ರೀಕರಿಸುವ ನಿರೀಕ್ಷೆಯಿದೆ. 

ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಅವಧಿಯ ಸರ್ಕಾರ ಕೊನೆಯ ಪೂರ್ಣ ಬಜೆಟ್ ಇದಾಗಿದೆ. ಈ ಹಿನ್ನಲೆ ಸಂಬಳ ಪಡೆಯುವ ನೌಕರರು ಮತ್ತು ಹಿರಿಯ ನಾಗರಿಕರು ಸೇರಿದಂತೆ ಸಾಮಾನ್ಯ ಜನರಿಗೆ ವಿವಿಧ ತೆರಿಗೆ ಪರಿಹಾರ ಕ್ರಮಗಳನ್ನು ಸೀತಾರಾಮನ್ ಘೋಷಿಸುವ ನಿರೀಕ್ಷೆಯಿದೆ. ಇದರ ಜೊತೆಗೆ ಜನರ ನಿರೀಕ್ಷೆಗಳು ಸರ್ಕಾರದಿಂದ ಹೆಚ್ಚಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ