ಮಂಗಳವಾರ, ಅಕ್ಟೋಬರ್ 3, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಈಜುಕೊಳದಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು

Twitter
Facebook
LinkedIn
WhatsApp
768 512 17623997 thumbnail 3x2 sanjuu

ಬೆಂಗಳೂರು (ಜ.31) : ಖಾಸಗಿ ಈಜುಕೊಳದಲ್ಲಿ ಈಜಲು ತೆರಳಿದ್ದ ಇಬ್ಬರು ವಿದ್ಯಾರ್ಥಿಗಳು ಈಜು ಬಾರದೆ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಕೋಣನಕುಂಟೆ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಜರಗನಹಳ್ಳಿ ನಿವಾಸಿಗಳಾದ ಜಯಂತ್‌ (13) ಮತ್ತು ಮೋಹನ್‌(13) ಮೃತ ದುರ್ದೈವಿಗಳು. ಸೋಮವಾರ ಮಧ್ಯಾಹ್ನ 1.30ರ ಸುಮಾರಿಗೆ ಜೆ.ಪಿ.ನಗರ 7ನೇ ಹಂತದ ಎಂಎನ್‌ಸಿ ಸ್ಪೋಟ್ಸ್‌ರ್‍ ಅಕಾಡೆಮಿಯ ಈಜುಕೊಳದಲ್ಲಿ ಈ ದುರ್ಘಟನೆ ನಡೆದಿದೆ. ಘಟನೆ ಸಂಬಂಧ ಅಕಾಡೆಮಿಯ ಈಜು ತರಬೇತುದಾರ ಮೋಯಿನ್‌ ಎಂಬಾತನನ್ನು ಬಂಧಿಸಲಾಗಿದೆ. ಅಕಾಡೆಮಿಯ ನರೇಶ್‌ ಮತ್ತು ಶೇಖರ್‌ನನ್ನು ವಶಕ್ಕೆ ಪಡೆದು ವಿಚಾರಣೆ ಒಳಪಡಿಸಲಾಗಿದೆ.

ಈ ಇಬ್ಬರು ಬಾಲಕರು ನಗರದ ಜರಗನಹಳ್ಳಿಯ ಸರ್ಕಾರಿ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಸೋಮವಾರ ಬೆಳಗ್ಗೆ ಶಾಲೆಗೆ ತೆರಳಿದ್ದಾರೆ. ಮಧ್ಯಾಹ್ನ ಶಾಲೆಯಿಂದ ಹೊರಬಂದು 1.30ರ ಸುಮಾರಿಗೆ ಈಜಲು ಎಂಎನ್‌ಸಿ ಸ್ಪೋಟ್ಸ್‌ರ್‍ ಅಕಾಡೆಮಿಗೆ ಬಂದಿದ್ದು, .100 ಪಾವತಿಸಿ ಈಜುಕೊಳಕ್ಕೆ ಪ್ರವೇಶ ಪಡೆದಿದ್ದಾರೆ. ಇಬ್ಬರು ಆರಂಭದಲ್ಲಿ ಆಳ ಕಡಿಮೆ ಇರುವ ಕಡೆ ಈಜಾಡಿದ ಬಳಿಕ ಹೆಚ್ಚು ಆಳವಿರುವ ಕಡೆಗೆ ಈಜಿಕೊಂಡು ಹೋಗಿದ್ದಾರೆ. ಆದರೆ ಸರಿಯಾಗಿ ಈಜು ಬಾರದೆ ನೀರಿನಲ್ಲಿ ಮುಳುಗಿದ್ದಾರೆ.

ಈ ವೇಳೆ ಈಜುಕೊಳದಲ್ಲಿ ಹೆಚ್ಚಿನ ಜನರು ಇರಲಿಲ್ಲ, ಹಾಗಾಗಿ ಬಾಲಕರು ನೀರಿನಲ್ಲಿ ಮುಳುಗಿದರೂ ಯಾರು ಗಮನಿಸಿಲ್ಲ. ತರಬೇತುದಾರ ಮೋಯಿನ್‌ ಈ ವೇಳೆ ಕೊಠಡಿಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದ ಎನ್ನಲಾಗಿದೆ. ಕೆಲಹೊತ್ತಿನ ಬಳಿಕ ಈಜುಕೊಳದಲ್ಲಿ ಬಾಲಕರ ದೇಹಗಳು ನೀರಿನ ಮೇಲ್ಭಾಗಕ್ಕೆ ಬಂದಾಗ ಸ್ಥಳದಲ್ಲಿದ್ದ ಕೆಲವರು ಎಳೆದು ಮೇಲಕ್ಕೆ ತಂದಿದ್ದಾರೆ. ಈ ವೇಳೆ ಇಬ್ಬರು ಮೃತಪಟ್ಟಿರುವುದು ಗೊತ್ತಾಗಿದೆ.

ಬಾಲಕ ಸಾವಿನ ಸುದ್ದಿ ತಿಳಿದು ಸ್ಥಳಕ್ಕೆ ಬಂದ ಕೋಣನಕುಂಟೆ ಠಾಣೆ ಪೊಲೀಸರು, ಮೃತದೇಹಗಳನ್ನು ಮುಂದಿನ ಪ್ರಕ್ರಿಯೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ನಿರ್ಲಕ್ಷ್ಯದ ಹಿನ್ನೆಲೆಯಲ್ಲಿ ಈಜು ತರಬೇತುದಾರ ಮೋಯಿನ್‌ನನ್ನು ಬಂಧಿಸಲಾಗಿದೆ. ಕೋಣನಕುಂಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ