ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಉಡುಪಿ: ಸೈಂಟ್ ಮೇರಿಸ್ ದ್ವೀಪದ ಅವ್ಯವಸ್ಥೆ ಪ್ರಶ್ನಿಸಿದ್ದಕ್ಕೆ ಪ್ರವಾಸಿಗನ ಮೇಲೆ ಸಿಬಂದಿ ದರ್ಪ

Twitter
Facebook
LinkedIn
WhatsApp
1673935678887972 0

ಉಡುಪಿ, ಜ 17 : ಉಡುಪಿ ಸೈಂಟ್ ಮೇರಿಸ್ ದ್ವೀಪದ ಅವ್ಯವಸ್ಥೆ ವಿರುದ್ಧ ಆಕ್ರೋಶ ಹೊರ ಹಾಕಿದ ಪ್ರವಾಸಿಗರ‌ ಮೇಲೆ ಸೈಂಟ್ ಮೇರಿಸ್‌ ದ್ವೀಪದ ನಿರ್ವಹಣಾ ಸಿಬ್ಬಂದಿ ದರ್ಪ ತೋರಿಸಿದ ಘಟನೆ ನಡೆದಿದೆ.

ದ್ವೀಪದೊಳಗಡೆ ಕ್ಯಾಮರಾ ನಿಷೇಧವಿದ್ದರೂ, ಶುಲ್ಕ ಪಾವತಿಸಿ ಲಗೇಜ್ ರೂಂನಲ್ಲಿ ಕ್ಯಾಮರಾ ಇಡಬಹುದು. ಆದರೆ ಇಲ್ಲಿ ಸುರಕ್ಷಿತವಾಗಿ ಕ್ಯಾಮರಾ ಇಡಲು ಯಾವುದೇ ವ್ಯವಸ್ಥೆ ಇಲ್ಲ. ಬಾಗಿಲೇ ಇಲ್ಲದ ರೂಂನಲ್ಲಿ ಲಕ್ಷಾಂತರ ಮೌಲ್ಯದ ಕ್ಯಾಮರಾ ಹೇಗೆ ಇಡುವುದು ಎಂದು ಪ್ರವಾಸಿಗನೊಬ್ಬ ಪ್ರಶ್ನಿಸಿದ್ದಾರೆ. ಆದರೆ ಇದಕ್ಕೆ ಕ್ಯಾಮರಾ ತೆಗೆದು ಬಿಸಾಡುತ್ತೇನೆ ಎಂಬುದಾಗಿ ದ್ವೀಪದ ನಿರ್ವಹಣಾ ಸಿಬಂದಿ ದರ್ಪದಿಂದ ಉತ್ತರಿಸಿದ್ದಾರೆ.

ಪ್ರವಾಸಿಗರನ್ನು ಸಿಬಂದಿಯು ಏಕವಚನದಲ್ಲೇ ಮಾತನಾಡಿಸಿದ್ದು, ಬೆದರಿಕೆ ಹಾಕಿದ್ದಾರೆ ಎಂದು ಪ್ರವಾಸಿಗರು ಆರೋಪಿಸಿದ್ದಾರೆ.

ಇನ್ನು ಸೀ ವಾಕ್‌ನಲ್ಲಿ ಕ್ಯಾಮರಾ ಪ್ರವೇಶಕ್ಕೆ ಹಣ ಪಾವತಿ ಮಾಡಿದ್ದರೂ, ಸೈಂಟ್ ಮೇರೀಸ್‌ನಲ್ಲಿ ಕ್ಯಾಮರಾಕ್ಕೆ ಅವಕಾಶ ಇಲ್ಲ. ಸೈಂಟ್ ಮೇರೀಸ್ ದ್ವೀಪಕ್ಕೆ ತೆರಳುವ ಬೋಟ್‌ನಲ್ಲಿ ದುಬಾರಿ ದರ ತೆಗೆದುಕೊಳ್ಳಲಾಗುತ್ತಿದೆ ಎಂದು ಪ್ರವಾಸಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವ್ಯವಸ್ಥೆ ಆಗರವಾದರೂ ಉಡುಪಿ ಜಿಲ್ಲಾಡಳಿತ ಮೌನವಾಗಿದೆ ಎಂದು ಆಪಾದಿಸಿದ್ದಾರೆ. ಸೈಂಟ್ ಮೇರಿಸ್ ದ್ವೀಪದ ನಿರ್ವಹಣೆ ಜವಾಬ್ದಾರಿಯನ್ನು ಮಲ್ಪೆ ಅಭಿವೃದ್ಧಿ ಸಮಿತಿ ಹೊತ್ತಿದೆ. ಪ್ರವಾಸಿಗ ಹಾಗೂ ಸಿಬ್ಬಂದಿ ನಡುವಿನ ವಾಗ್ವಾದ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ