ಶುಕ್ರವಾರ, ಜೂನ್ 9, 2023
ಅಜ್ಜಿಯನ್ನು ಕೊಲೆ ಮಾಡಿ ಶವ ಸುಟ್ಟ ಪ್ರಕರಣ: ಮೊಮ್ಮಗನ ಬಂಧನ-ಸೈಕ್ಲೋನ್‌ ಎಫೆಕ್ಟ್‌; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ-ಬಾಬಾಬುಡನಗಿರಿಯಲ್ಲಿ ಶೌಚಾಲಯ ಸಮಸ್ಯೆ; ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ-ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಉಳ್ಳಾಲದ ಸೋಮೇಶ್ವರ ಸಮುದ್ರಕ್ಕೆ ಹಾರಿ ಇಂಜಿನಿಯರ್‌ ಪದವೀಧರ, ಸೋಮೇಶ್ವರ ನಿವಾಸಿ ಪವನ್ ಭಟ್ ಆತ್ಮಹತ್ಯೆ.

Twitter
Facebook
LinkedIn
WhatsApp
ಉಳ್ಳಾಲದ ಸೋಮೇಶ್ವರ ಸಮುದ್ರಕ್ಕೆ ಹಾರಿ ಇಂಜಿನಿಯರ್‌ ಪದವೀಧರ, ಸೋಮೇಶ್ವರ ನಿವಾಸಿ ಪವನ್ ಭಟ್ ಆತ್ಮಹತ್ಯೆ.

ಉಳ್ಳಾಲ: ಸೋಮೇಶ್ವರ ರುದ್ರಪಾದೆಯಿಂದ ಸಮುದ್ರಕ್ಕೆ ಹಾರಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂನ್‌ 23ರ ಬುಧವಾರ ನಡೆದಿದೆ.

ಸೋಮೇಶ್ವರ ಪುರಸಭೆ ಬಳಿ ನಿವಾಸಿ ಪವನ್ ಭಟ್ (29) ಎಂದು ಗುರುತಿಸಲಾಗಿದೆ. ಮೈಸೂರಿನಲ್ಲಿ ಇಂಜಿನಿಯರಿಂಗ್ ಪದವಿ ಪಡೆದಿದ್ದ ಪವನ್ ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ನಡೆಸಿ ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದ. ವಿದ್ಯಾರ್ಥಿ ದೆಸೆಯಿಂದಲೇ ಪ್ರತಿಭಾನ್ವಿತನಾಗಿದ್ದ ಪವನ್ ಉತ್ತಮ ಹಾಡುಗಾರ ಹಾಗೂ ಗಿಟಾರ್ ನುಡಿಸುತ್ತಿದ್ದ ಎನ್ನಲಾಗಿದೆ.
ಕೊರೊನಾ ಹಿನ್ನಲೆಯಲ್ಲಿ ಮನೆಯಲ್ಲಿಯೇ ಕೆಲಸ ಮಾಡುತ್ತಿದ್ದ ಈತ ಮಾನಸಿಕವಾಗಿ ಕುಗಿದ್ದು, ಪ್ರತೀ ದಿನ ಸೋಮೇಶ್ವರ ದೇವಸ್ಥಾನಕ್ಕೆ ತೆರಳುತ್ತಿದ್ದರು. ಬುಧವಾರವೂ ದೇವಸ್ಥಾನಕ್ಕೆ ತೆರಳಿ ಬಳಿಕ ರುದ್ರಪಾದೆಯ ಮೇಲೆ ಹೋಗಿದ್ದಾರೆ. ಅಲ್ಲಿಂದ ಆತ್ಮಹತ್ಯೆಗೈದಿದ್ದು, ಸ್ಥಳೀಯರು ನೋಡಿ ಜೀವರಕ್ಷಕ ಈಜುಗಾರರಿಗೆ ಮಾಹಿತಿ ನೀಡಿದ್ದಾರೆ. ಅವರು ಸ್ಥಳಕ್ಕೆ ಆಗಮಿಸಿದಾಗ ಪವನ್ ಮೃತದೇಹ ಸಮುದ್ರದ ಅಲೆಯಲ್ಲಿ ಸಿಲುಕಿತ್ತು. ಪೊಲೀಸರ ಮಾಹಿತಿಯಂತೆ ಗೃಹರಕ್ಷಕದಳದ ಸಿಬಂದಿ ಪ್ರಸಾದ್ ಮೊಗವೀರಪಟ್ಣ, ಸಾಗರ್ ಮೊಗವೀರಪಟ್ಣ, ಕರಾವಳಿ ಕಾವಲು ಪಡೆಯ ಸ್ಥಳೀಯ ಈಜುಗಾರರಾದ ಮೋಹನ್ ಮತ್ತು ಸುಜಿತ್, ದೇವಸ್ಥಾನ ಸಿಬಂದಿ ವಿನಾಯಕ್ ಮೃತದೇಹವನ್ನು ಮೇಲಕೆತ್ತಲು ಸಹಕರಿಸಿದರು. ಮೃತ ಪವನ್ ತಂದೆ, ತಾಯಿ ಮತ್ತು ಸಹೋದರನನ್ನು ಅಗಲಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು