ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಏನ್​ ನಡೀತಾ ಇದೆ? ಟ್ಯಾಲೆಂಟ್​ಗೆ ಇಲ್ಲಿ ಬೆಲೆಯೇ ಇಲ್ಲ; ಸಹಾಯಕಿ ಮೇಲೆ ರೇಗಾಡಿದ ರಶ್ಮಿಕಾ ಮಂದಣ್ಣ!

Twitter
Facebook
LinkedIn
WhatsApp
25

ನಟಿ ರಶ್ಮಿಕಾ ಮಂದಣ್ಣ (Rashmika Mandanna) ಅವರ ಒಂದು ವಿಡಿಯೋ ವೈರಲ್​ ಆಗಿದೆ. ತಮಗೆ ಮೇಕಪ್​ ಮಾಡಲು ಬಂದ ಸಹಾಯಕಿಯ ಮೇಲೆ ಅವರು ರೇಗಾಡಿದ್ದಾರೆ. ‘ಏನ್​ ನಡೀತಾ ಇದೆ? ಟ್ಯಾಲೆಂಟ್​ಗೆ ಇಲ್ಲಿ ಬೆಲೆಯೇ ಇಲ್ಲ. ಟ್ಯಾಲೆಂಟ್​ಗೆ ಎಲ್ಲಿ ಬೆಲೆ ಇದೆಯೋ ಅಲ್ಲಿಗೆ ನಾನು ಹೋಗುತ್ತೇನೆ’ ಎಂದು ಅವರು ಸಿಟ್ಟು ಮಾಡಿಕೊಂಡಿದ್ದಾರೆ. ಆ ದೃಶ್ಯವನ್ನು ಮೊಬೈಲ್​ನಲ್ಲಿ ಶೂಟ್​ ಮಾಡಲಾಗುತ್ತಿತ್ತು. ರೆಕಾರ್ಡಿಂಗ್​ ನಿಲ್ಲಿಸುವಂತೆ ರಶ್ಮಿಕಾ ಅವರ ಸಿಬ್ಬಂದಿ ತಾಕೀತು ಮಾಡಿದ್ದಾರೆ. ಈ ವಿಡಿಯೋ (Rashmika Mandanna Viral Video) ನೋಡಿ ಎಲ್ಲರಿಗೂ ಅಚ್ಚರಿ ಆಗಿದೆ. ಅಷ್ಟಕ್ಕೂ ರಶ್ಮಿಕಾ ಮಂದಣ್ಣ ಅವರು ಹೀಗೆಲ್ಲ ಕೂಗಾಡಿದ್ದು ಯಾಕೆ? ಅವರಿಗೆ ಕಿರಿಕಿರಿ ಆಗುವಂತಹ ಘಟನೆ ಏನಾಯಿತು ಎಂದು ಫ್ಯಾನ್ಸ್​ ತಲೆ ಕೆಡಿಸಿಕೊಂಡರು. ಆದರೆ ಇದೆಲ್ಲವೂ ಡ್ರಾಮಾ ಎಂಬುದು ಈಗ ಬಯಲಾಗಿದೆ. ರಶ್ಮಿಕಾ ಮಂದಣ್ಣ ಅವರು ಈ ರೀತಿ ಮಾಡಿದ್ದು ಒಂದು ಖಾಸಗಿ ಕಂಪನಿಯ ಜಾಹೀರಾತಿನ ಸಲುವಾಗಿ. ಆ ಜಾಹೀರಾತು (Rashmika Mandanna Advertisement) ಪ್ರಸಾರ ಆಗುವುದಕ್ಕೂ ಮುನ್ನ ನೆಟ್ಟಿಗರಲ್ಲಿ ಕುತೂಹಲ ಮೂಡಿಸುವ ಸಲುವಾಗಿ ಈ ರೀತಿ ವಿಡಿಯೋ ಮಾಡಿ ವೈರಲ್​ ಮಾಡಿಸಲಾಗಿದೆ. ಈ ಸತ್ಯ ಗೊತ್ತಾದ ಬಳಿಕ ನೆಟ್ಟಿಗರು ‘ಏನ್​ ಡ್ರಾಮಾ ಗುರೂ’ ಅಂತ ಕಮೆಂಟ್​ ಮಾಡುತ್ತಿದ್ದಾರೆ.

ರಶ್ಮಿಕಾ ಮಂದಣ್ಣ ಅವರು ಹಲವು ಕಂಪನಿಗಳಿಗೆ ಪ್ರಚಾರ ರಾಯಭಾರಿ ಆಗಿದ್ದಾರೆ. ಅದರಿಂದ ಅವರಿಗೆ ದೊಡ್ಡ ಮೊತ್ತದ ಸಂಭಾವನೆ ಸಿಗುತ್ತದೆ. ಆದರೆ ಕೆಲವು ವಿವಾದಗಳು ಕೂಡ ಅಂಟಿಕೊಳ್ಳುತ್ತವೆ. ಈ ಹಿಂದೆ ಪುರುಷರ ಒಳ ಉಡುಪಿನ ಜಾಹೀರಾತಿನಲ್ಲಿ ಅವರು ಕಾಣಿಸಿಕೊಂಡಿದ್ದ ರೀತಿಗೆ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದರು. ಆ ಟ್ರೋಲ್​ಗಳಿಗೆಲ್ಲ ರಶ್ಮಿಕಾ ತಲೆ ಕೆಡಿಸಿಕೊಂಡಿಲ್ಲ. ತಮ್ಮ ಕೆಲಸದ ಮೇಲೆ ಅವರು ಸಂಪೂರ್ಣ ಗಮನ ಹರಿಸಿದ್ದಾರೆ.

ಇತ್ತೀಚೆಗೆ ಚಿಕನ್​ ಬರ್ಗರ್​ ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ ಕಾಣಿಸಿಕೊಂಡಿದ್ದಾರೆ. ಆದರೆ ತಾವು ನಾನ್​-ವೆಜ್​ ತಿನ್ನಲ್ಲ ಎಂದು ಅವರು ಈ ಹಿಂದೆ ಹೇಳಿಕೊಂಡಿದ್ದರು. ಹಾಗಾಗಿ ರಶ್ಮಿಕಾ ಮಂದಣ್ಣ ಅವರ ಈ ದ್ವಂದ್ವನೀತಿಯನ್ನು ನೆಟ್ಟಿಗರು ಪ್ರಶ್ನಿಸಿದ್ದರು. ‘ರಶ್ಮಿಕಾ ಮಂದಣ್ಣ ಅವರು ಹೊಸ ಜಾಹೀರಾತಿನಲ್ಲಿ ನಾನ್​-ವೆಜ್​ ತಿನ್ನುತ್ತಿದ್ದಾರೆ. ಆದರೆ ತಮ್ಮನ್ನು ತಾವು ಸಸ್ಯಾಹಾರಿ ಎಂದು ಹೇಳಿಕೊಂಡಿದ್ದರು. ಜನರಿಗೆ ಇದು ಇಷ್ಟ ಆಗಿಲ್ಲ. ನಮ್ಮನ್ನು ಮೂರ್ಖರನ್ನಾಗಿಸೋದು ನಿಲ್ಲಿಸಿ ಅಂತ ಜನರು ಕಮೆಂಟ್ ಮಾಡಿದ್ದಾರೆ. ಜನರ ಪ್ರತಿಕ್ರಿಯೆ​ ನೋಡಿದ ಜಾಹೀರಾತಿನ ಕಮೆಂಟ್​ ಆಯ್ಕೆಯನ್ನೇ ನಿಷ್ಕ್ರಿಯಗೊಳಿಸಲಾಗಿದೆ’ ಎಂದು ‘ಬಾಲಿವುಡ್​ ಗರಿಮಾ ಕುಮಾ​ರ್​’ ಎಂಬ ಇನ್​​ಸ್ಟಾಗ್ರಾಮ್​ ಖಾತೆಯಲ್ಲಿ ಮಾಹಿತಿ ಹಂಚಿಕೊಳ್ಳಲಾಗಿತ್ತು.

ದಿನದಿಂದ ದಿನಕ್ಕೆ ನಟಿ ರಶ್ಮಿಕಾ ಮಂದಣ್ಣ ಅವರ ಖ್ಯಾತಿ ಹೆಚ್ಚುತ್ತಿದೆ. ಅದಕ್ಕೆ ತಕ್ಕಂತೆಯೇ ಸೋಶಿಯಲ್​ ಮೀಡಿಯಾದಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ಕೂಡ ದೊಡ್ಡದಾಗುತ್ತಿದೆ. ಆ ಕಾರಣದಿಂದ ಅವರನ್ನು ಅನೇಕ ಕಂಪನಿಗಳು ಪ್ರಚಾರ ರಾಯಭಾರಿಯಾಗಿ ನೇಮಕ ಮಾಡಿಕೊಳ್ಳುತ್ತಿವೆ. ಬಹುಭಾಷೆಯಲ್ಲಿ ನಟಿಸುತ್ತಿರುವ ರಶ್ಮಿಕಾ ಮಂದಣ್ಣ ಅವರಿಗೆ ಎಲ್ಲ ರಾಜ್ಯದಲ್ಲೂ ಅಭಿಮಾನಿಗಳಿದ್ದಾರೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಬರೋಬ್ಬರಿ 3.8 ಕೋಟಿ ಜನರು​ ಫಾಲೋ ಮಾಡುತ್ತಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ