ಬುಧವಾರ, ಜನವರಿ 15, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

25 ವರ್ಷದ ಏರ್ ಇಂಡಿಯಾ ಪೈಲಟ್ ಆತ್ಮಹತ್ಯೆ; ಗೆಳೆಯನ ಬಂಧನ!

Twitter
Facebook
LinkedIn
WhatsApp
srishtituli ಏರ್ ಇಂಡಿಯಾ ಪೈಲಟ್

ತನ್ನ ಗೆಳೆಯನ ಕಿರುಕುಳದಿಂದಾಗಿ ಸೃಷ್ಟಿ ತುಲಿ ತೊಂದರೆಗೀಡಾಗಿದ್ದಳು ಎಂದು ಪ್ರಾಥಮಿಕ ವಿಚಾರಣೆಗಳು ಸೂಚಿಸುತ್ತವೆ. ಆತ ಆಕೆಯನ್ನು ಸಾರ್ವಜನಿಕವಾಗಿ ನಿಂದಿಸುತ್ತಿದ್ದನು ಮತ್ತು ಮಾಂಸಾಹಾರಿ ಆಹಾರವನ್ನು ಸೇವಿಸದಂತೆ ತಡೆಯುತ್ತಿದ್ದನು ಎಂದು ಆರೋಪಿಸಲಾಗಿದೆ.

ಮುಂಬೈ: 25 ವರ್ಷದ ಏರ್ ಇಂಡಿಯಾ ಪೈಲಟ್ ಸೃಷ್ಟಿ ತುಲಿ ಅವರು ಸೋಮವಾರ ಅಂಧೇರಿಯ ಮರೋಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಸೃಷ್ಟಿ ಬಾಯ್​ಫ್ರೆಂಡ್, 27 ವರ್ಷದ ಆದಿತ್ಯ ಪಂಡಿತ್‌ನನ್ನು ಪೊವೈ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಸೋಮವಾರ ಬೆಳಗ್ಗೆ ಅಂಧೇರಿ(ಪೂರ್ವ)ಯಲ್ಲಿರುವ ಮರೋಲ್ ಪೊಲೀಸ್ ಕ್ಯಾಂಪ್‌ನ ಹಿಂಭಾಗದ ಬಾಡಿಗೆ ನಿವಾಸದಲ್ಲಿ ತುಲಿ ಶವವಾಗಿ ಪತ್ತೆಯಾಗಿದ್ದಾಳೆ. ತನ್ನ ಬಾಯ್ ಫ್ರೆಂಡ್ ಜೊತೆಗಿನ ಜಗಳದ ನಂತರ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.

ಆದಿತ್ಯ ಪಂಡಿತ್ ಸೃಷ್ಟಿಯನ್ನು ಕೊಲೆ ಮಾಡಿ ಅದನ್ನು ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಗೋರಖ್‌ಪುರ ಮೂಲದ ಸೃಷ್ಟಿ ತುಲಿ ಅವರ ಕುಟುಂಬ ಆರೋಪಿಸಿದೆ.

ದಿ ಇಂಡಿಯನ್ ಎಕ್ಸ್‌ಪ್ರೆಸ್ ಪ್ರಕಾರ, ಆದಿತ್ಯ ಪಂಡಿತ್, ಮಾಂಸಾಹಾರಿ ಆಹಾರವನ್ನು ಸೇವಿಸದಂತೆ ಸೃಷ್ಟಿಯನ್ನು ಸಾರ್ವಜನಿಕವಾಗಿ ನಿಂದಿಸಿದ್ದಾರೆ ಎಂದು ಆಕೆಯ ಕುಟುಂಬ ಆರೋಪಿಸಿದೆ. ಈ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುವಂತೆ ಕುಟುಂಬಸ್ಥರು ಮುಂಬೈ ಪೊಲೀಸರನ್ನು ಒತ್ತಾಯಿಸಿದ್ದಾರೆ.

ಎರಡು ವರ್ಷಗಳ ಹಿಂದೆ ಕಮರ್ಷಿಯಲ್ ಪೈಲಟ್ ಲೈಸೆನ್ಸ್‌ಗಾಗಿ ತರಬೇತಿ ಪಡೆಯುತ್ತಿರುವಾಗ ಆದಿತ್ಯ ಮತ್ತು ಸೃಷ್ಟಿ ದೆಹಲಿಯಲ್ಲಿ ಭೇಟಿಯಾಗಿದ್ದರು. ತರಬೇತಿಯ ನಂತರ, ಸೃಷ್ಟಿ ಏರ್ ಇಂಡಿಯಾದಲ್ಲಿ ಕೆಲಸಕ್ಕೆ ಸೇರಿದರು. ಆದರೆ ಆಗಿತ್ಯ ಪಂಡಿತ್ ಪೈಲಟ್ ಪರೀಕ್ಷೆಯಲ್ಲಿ ಫೇಲ್ ಆಗಿದ್ದರು.

ಸೋಮವಾರ ಮುಂಜಾನೆ ದೆಹಲಿಗೆ ತೆರಳುತ್ತಿದ್ದ ಪ್ರಿಯಕರ ಆದಿತ್ಯನಿಗೆ ಸೃಷ್ಟಿ ಕರೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಳು. ಇದನ್ನು ತಿಳಿದ ಆದಿತ್ಯ ತಕ್ಷಣವೇ ಆಕೆ ಇದ್ದ ಫ್ಲ್ಯಾಟ್‌ಗೆ ಬಂದು ನೋಡಿದಾಗ ಬಾಗಿಲು ಲಾಕ್ ಆಗಿತ್ತು. ಈ ವೇಳೆ ನಕಲಿ ಕೀ ತಯಾರಕರನ್ನು ಕರೆಸಿ ಬಾಗಿಲು ತೆಗೆದು ನೋಡಿದಾಗ ಸೃಷ್ಟಿ ಡೇಟಾ ಕೇಬಲ್ ಸಹಾಯದಿಂದ ಆತ್ಮಹತ್ಯೆಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಕೂಡಲೇ ಆಕೆಯನ್ನು ಅಂಧೇರಿಯ ಸೆವೆನ್ ಹಿಲ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟು ಹೊತ್ತಿಗಾಗಲೇ ಆಕೆಯ ಪ್ರಾಣಪಕ್ಷಿ ಹಾರಿಹೋಗಿತ್ತು.

ಸೃಷ್ಟಿ ಉತ್ತರ ಪ್ರದೇಶ ಮೂಲದವಳಾಗಿದ್ದು, ಕಳೆದ ವರ್ಷ ಜೂನ್‌ನಿಂದ ಮುಂಬೈನಲ್ಲಿ ನೆಲೆಸಿದ್ದಳು ಎಂದು ಅಧಿಕಾರಿ ತಿಳಿಸಿದ್ದಾರೆ. ಎರಡು ವರ್ಷಗಳ ಹಿಂದೆ ದೆಹಲಿಯಲ್ಲಿ ವಾಣಿಜ್ಯ ಪೈಲಟ್ ಕೋರ್ಸ್ ಓದುತ್ತಿರುವಾಗ ಆದಿತ್ಯನನ್ನು ಭೇಟಿಯಾಗಿದ್ದಳು. ನಂತರ ಇವರಿಬ್ಬರ ಸ್ನೇಹ ಪ್ರೀತಿಗೆ ಬದಲಾಗಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ. 

ಆದಿತ್ಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 108 (ಆತ್ಮಹತ್ಯೆಗೆ ಪ್ರಚೋದನೆ) ಅಡಿಯಲ್ಲಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನವೆಂಬರ್ 29ರವರೆಗೆ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist