ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಂಗ್ರೆಸ್ ಗ್ಯಾರಂಟಿ ಕಾರ್ಡ್‌ನಿಂದ ರಾಮನಗರದಲ್ಲಿ ನಿಖಿಲ್ ಸೋತಿದ್ದು! ಎಚ್ ಡಿ ಕುಮಾರಸ್ವಾಮಿ

Twitter
Facebook
LinkedIn
WhatsApp
Untitled 20

ಬೆಂಗಳೂರು: ಕಾಂಗ್ರೆಸ್ ಭರವಸೆ ನೀಡಿದ್ದ ಗ್ಯಾರಂಟಿ ಕಾರ್ಡ್ನಿಂದ ರಾಮನಗರದಲ್ಲಿ ನಿಖಿಲ್ ಸೋತಿದ್ದು! ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಹೇಳಿದರು. ಬೆಂಗಳೂರಿನ ಜೆಪಿ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು, 42 ಕ್ಷೇತ್ರದಲ್ಲಿ 60 ಸಾವಿರ ಕಾರ್ಡ್ ಹಂಚಿಕೆ ಮಾಡಿದ್ದಾರೆ. ಗ್ಯಾರಂಟಿ ಕಾರ್ಡ್ ಜೊತೆ‌, ಐದು ಸಾವಿರ ರೂಪಾಯಿ ಗಿಫ್ಟ್ ಕಾರ್ಡ್ ಕೂಡಾ ಕೊಟ್ಟಿದ್ದಾರೆ. ರಾಮನಗರ, ಪಿರಿಯಾಪಟ್ಟಣ, ಆರ್.ಆರ್.ನಗರ,ಕುಣಿಗಲ್ ಸೇರಿದಂತೆ ಹಲವು ಕಡೆ ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಿದರು.

ಪಾರದರ್ಶಕವಾದ ಚುನಾವಣೆ ನಡೆಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೆ ಈಗ ಯಾವ ರೀತಿ ಚುನಾವಣೆ ನಡೆಸಿದ್ದಾರೆ. ಸಿದ್ದರಾಮಯ್ಯ, ಡಿಕೆಶಿ ಅವರೇ ನೀವು ಎಷ್ಟು ಶೇಕಡಾವಾರು ಫಿಕ್ಸ್ ಮಾಡ್ತೀರಾ? ಇದಕ್ಕೆ ಉತ್ತರ ನೀಡುತ್ತೀರಾ? ಎಂದು ಪ್ರಶ್ನಿಸಿದರು.

ರಾಜ್ಯದ ಜನತೆ ಯಾವ ರೀತಿ ಮರಳು ಮಾಡಿದ್ದೀರಾ, ನಿರುದ್ಯೋಗ ಯುವಕರಿಗೆ 3 ಸಾವಿರ ರೂಪಾಯಿ ಕೊಡುತ್ತೇನೆ ಎಂದಿದ್ದರು. ಆದ್ರೆ‌ ಈಗ‌ 2022, 2023 ರ‌ ಸಾಲಿನ ನಿರುದ್ಯೋಗಿ ಯುವಕರಿಗೆ ಎಂದು ಹೇಳಿದ್ದಾರೆ. ಈ ಕಾರ್ಡ್ನಿಂದ ರಾಮನಗರದಲ್ಲಿ ನಿಖಿಲ್ ಸೋತಿದ್ದು, ನ್ಯಾಯದ ರೀತಿ ಸೋಲಿಸಿಲ್ಲ ಎಂದರು. ಲೋಕಸಭೆ ಚುನಾವಣೆ ಬಳಿಕ‌ ದೇಶದಲ್ಲಿ ಕಾಂಗ್ರೆಸ್ ಇರುತ್ತಾ ಇಲ್ವಾ ಎಂದು ದೇಶದ ಜನ ತೀರ್ಮಾನ ಮಾಡುತ್ತಾರೆ ಎಂದರು.ಬಿಜೆಪಿ ಸರ್ಕಾರದ ಅಕ್ರಮ ತನಿಖೆ ಮಾಡ್ತಾ‌ ಇದ್ದಾರೆ. ಆದರೆ ಚುನಾವಣಾ ಸಂದರ್ಭದಲ್ಲಿ ಹಂಚಿದ ಕೂಪನ್ ಕಾರ್ಡ್‌ಗಳ ಬಗ್ಗೆ ತನಿಖೆ ಮಾಡ್ತೀರಾ? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ನವರು ಐದು ಗ್ಯಾರಂಟಿ ಕಾರ್ಡ್ ಜಾರಿ ಮಾಡುವುದಿಲ್ಲ.‌ ಅಂದು ಸಿದ್ದರಾಮಯ್ಯ ಕರೆಂಟ್ ಫ್ರೀ ಅಂದಿದ್ದರು. ಇವಾಗ ಕಾಂಗ್ರೆಸ್ ಸರ್ಕಾರ ಷರತ್ತು ಹಾಕಿದರೆ ನಾವು ಬೀದಿಗೆ ಇಳಿದು ಹೋರಾಟ ಮಾಡುತ್ತೇವೆ. ಯಾವುದೇ ಕಾರಣಕ್ಕಾಗಿ ಬಿಡಲ್ಲ ಎಂದು ಎಚ್ಚರಿಕೆ ನೀಡಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ