ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಫಿ ಮಂಡಳಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಎಂ.ಎಸ್. ಭೋಜೇ ಗೌಡ

Twitter
Facebook
LinkedIn
WhatsApp
ಕಾಫಿ ಮಂಡಳಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ಎಂ.ಎಸ್. ಭೋಜೇ ಗೌಡ

ಚಿಕ್ಕಮಗಳೂರು: ಪರಿಶಿಷ್ಟ ಪಂಗಡಗಳ ಬುಡಕಟ್ಟು ಬೆಳೆಗಾರರಿಗೆ ಕಾಫಿ ಮಂಡಳಿಯಿಂದ ನೀಡಲಾಗುವ ತಾಂತ್ರಿಕ ಸಲಹೆಗಳ ಜೊತೆಗೆ ಆರ್ಥಿಕ ನೆರವನ್ನು ಸದುಪಯೋಗಪಡಿಸಿಕೊಳ್ಳುವಂತೆ ಕಾಫಿ ಮಂಡಳಿ ಅಧ್ಯಕ್ಷ ಎಂ.ಎಸ್. ಭೋಜೇಗೌಡ ತಿಳಿಸಿದರು.
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಮತ್ತು ಕಾಫಿ ಮಂಡಳಿ ಸಂಯುಕ್ತಾಶ್ರದಲ್ಲಿ ಕಾಫಿ ಮತ್ತು ಕಾಳುಮೆಣಸು ಬೆಳೆಗಳ ಸಮಗ್ರ ಅಭಿವೃದ್ಧಿ ಯೋಜನೆಯಡಿಯಲ್ಲಿ ಪರಿಶಿಷ್ಟ ಪಂಗಡದ ಬೆಳೆಗಾರರಿಗೆ ಕಾಫಿ ಗಿಡಗಳನ್ನು ವಿತರಿಸಿ ಮಾತನಾಡಿದರು.

ಬುಡಕಟ್ಟು ಕಾಫಿ ಮತ್ತು ಮೆಣಸು ಬೆಳೆಯುವ ಬೆಳೆಗಾರರು ಮಂಡಳಿಯು ನೀಡುವ ತಾಂತ್ರಿಕ ಸಲಹೆ ಜೊತೆಗೆ ಆರ್ಥಿಕ ನೆರವನ್ನು ಪಡೆದು ಸಮಗ್ರ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವ ಮೂಲಕ  ಸಬಲರಾಗಬೇಕು ಎಂದು ಹೇಳಿದರು.
ಕೇರಳ ರಾಜ್ಯದಲ್ಲಿ ಎರಡು ಎಕರೆ ಜಮೀನು ಹೊಂದಿರುವ ಬೆಳೆಗಾರರು ಉತ್ತಮ ಕೃಷಿ ಪದ್ದತಿ ಅಳವಡಿಸಿಕೊಂಡು ಆರ್ಥಿಕವಾಗಿ ಸಬಲರಾಗಿದ್ದಾರೆ. ಜಿಲ್ಲೆಯ ಪಶ್ಚಿಮ ಘಟ್ಟಗಳ ಕಳಸ, ಮೂಡಿಗೆರೆ ಸುತ್ತಮುತ್ತಲಿನ ಸಾಲು ಅತ್ಯಂತ ಸಂಪದ್ಬರಿತ, ಫಲವತ್ತಾದ ಭೂಮಿಯನ್ನು ಹೊಂದಿದ್ದು ಸಣ್ಣ ಬೆಳೆಗಾರರಾದು ನೀವುಗಳು ಕಾಳಜಿ ವಹಿಸಿ ಶ್ರಮಪಟ್ಟು ದುಡಿದ್ದಲ್ಲಿ ಉತ್ತಮ ಲಾಭಗಳಿಸಬಹುದು ಎಂದು ಕಿವಿ ಮಾತು ಹೇಳಿದರು.

ಕೇಂದ್ರಿಯ ಕಾಫಿ ಸಂಶೋಧನಾ ಸಂಸ್ಥೆಯ ನಿರ್ದೇಶಕ ಡಾ.ಸೂರ್ಯಪ್ರಕಾಶ್ ಮಾತನಾಡಿ ಕಾಫಿ ಉತ್ಪಾದನೆಯನ್ನು ಹೆಚ್ಚಿಸಲು ಸಲುವಾಗಿ ಅನುತ್ಪಾದಕ ಗಿಡಗಳನ್ನು ಕಸಿ ಮುಖಾಂತರ ಹಾಗೂ ಕಾಫಿ ಸಂಶೋಧನಾ ಕೇಂದ್ರದಿಂದ ಉತ್ಪಾದನೆ ಹೆಚ್ಚಿಸುವಂತೆ ಸಲಹೆ ನೀಡಿದರು.
ಕಾಫಿ ಗುಣಮಟ್ಟವನ್ನು ಕಾಪಾಡಿಕೊಳ್ಳಲು ಮೂಲಭೂತ ಸೌಕರ್ಯಗಳನ್ನು ಯೋಜನೆಯಲ್ಲಿ ನೀಡಲು ಉದ್ದೇಶಿಸಲಾಗಿದ್ದು ಸದುಪಯೋಗಪಡೆದುಕೊಳ್ಳುವಂತೆ ತಿಳಿಸಿದರು.
ಚಿಕ್ಕಮಗಳೂರು ಕಾಫಿ ಮಂಡಳಿ ಉಪನಿರ್ದೇಶಕ ಶ್ರೀನಿವಾಸ್ ಮಾತನಾಡಿ ಉದ್ಯೋಗ ಖಾತ್ರಿ ಯೋಜನೆ ಮತ್ತು ಕಾಫಿ ಮಂಡಳಿಯಿಂದ ಮುಂಬರುವ ಯೋಜನೆಗಳ ಸದುಪಯೋಗಪಡೆದುಕೊಳ್ಳಬೇಕು ಎಂದರು. ಇದೇ ವೇಳೆ ಬಾಳೆಹೊಳೆಯಲ್ಲಿ ಸ್ಥಾಪಿಸಲಾದ ಕಾಫಿ ನರ್ಸರಿ ಉತ್ತಮ ನಿರ್ವಹಣೆಗಾಗಿ ಯೋಜನಾ ಸಿಬ್ಬಂದಿ ಹಾಗೂ ನಿರ್ವಾಹಕ ಉಮೇಶ್ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ಮೂಡಿಗೆರೆ ಪ್ರಭಾರಿ ಹಿರಿಯ ಸಂಪರ್ಕ ಅಧಿಕಾರಿ ಮೊಹಮ್ಮದ್ ಅಸೀಫ್, ಕಳಸ ಬುಡಕಟ್ಟು ರೈತ ಉತ್ಪಾದಕ ಸಂಘದ ಅಧ್ಯಕ್ಷ ಒಬಯ್ಯ, ಕಾರ್ಯದರ್ಶಿ ಸುರೇಶ್, ಧನಲಕ್ಷ್ಮಿ, ಗಿರಿಜನ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ಸತೀಶ್, ಯೋಜನಾ ಸಿಬ್ಬಂದಿ ಅಣ್ಣೇಗೌಡ, ಅನಿಲ್‌ಕುಮಾರ್, ರಶ್ಮಿ, ಸಂತೋಷ್‌ಕುಮಾರ್ ಇದ್ದರು. ಪ್ರಭುಗೌಡ ಕಾಮರೆಡ್ಡಿ ನಿರೂಪಿಸಿ, ಎಸ್.ಡಿ ಜೋಶಿ ವಂದಿಸಿದರು.
ತಮ್ಮ ಕ್ಷೇತ್ರದ ಸಮಸ್ಯೆಗೆ ಕಂದಾಯ ಸಚಿವ ಆರ್ ಅಶೋಕ್ ಕಷ್ಟ ಅರಿತು ಸ್ಪಂದಿಸಿ ಸಮಸ್ಯೆಗೆ ಪರಿಹಾರ ಕಲ್ಪಿಸಿದ್ದಾರೆ ಎಂದು ಅವರು ನುಡಿದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು