ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕಾಲ್ನಡಿಗೆಯಲ್ಲಿ ಮೊಟ್ಟ ಮೊದಲ ಬಾರಿಗೆ ದೇಶ ಸುತ್ತಿದ ಕೇರಳದ ದಂಪತಿ!

Twitter
Facebook
LinkedIn
WhatsApp
ಕಾಲ್ನಡಿಗೆಯಲ್ಲಿ ಮೊಟ್ಟ ಮೊದಲ ಬಾರಿಗೆ ದೇಶ ಸುತ್ತಿದ ಕೇರಳದ ದಂಪತಿ!

ಕೊಚ್ಚಿ: ಕೊಟ್ಟಾಯಂನ 53 ವರ್ಷದ ಬೆನ್ನಿ ಕೊಟ್ಟಾರತಿಲ್ ಮತ್ತು ಅವರ ಪತ್ನಿ ಮೊಲ್ಲಿ ಬೆನ್ನಿ (46) ಕಾಲಿನಲ್ಲಿಯೇ ದೇಶ ಸುತ್ತಿ ಈಗಷ್ಟೇ ಮರಳಿದ್ದಾರೆ. ಕನ್ಯಾಕುಮಾರಿಯಿಂದ ಕಳೆದ ವರ್ಷ ಡಿಸೆಂಬರ್ ನಲ್ಲಿ ಕಾಲ್ನಡಿಗೆ ಆರಂಭಿಸಿದ ಇವರು,  216 ದಿನ ಸುತ್ತಾಡಿ ಜುಲೈ 3, 2022 ರಂದು ತಮ್ಮ ನಡಿಗೆಯನ್ನು ಮುಕ್ತಾಯಗೊಳಿಸಿದ್ದಾರೆ.

ನಡಿಗೆ ಉತ್ತೇಜನ ಮತ್ತು  ಮಕ್ಕಳಿಲ್ಲದ ದಂಪತಿಯಲ್ಲಿ  ಜೊತೆಯಾಗಿ  ಸಾಗುವುದರಿಂದ ಆಗುವ ಹೊಸ ಜಾಗೃತಿ ಪ್ರಜ್ಞೆ ಮೂಡಿಸುವ ನಿಟ್ಟಿನಲ್ಲಿ ಈ ದಂಡಯಾತ್ರೆ ಆರಂಭಿಸಿದ್ದಾಗಿ ಬೆನ್ನಿ ಹೇಳುತ್ತಾರೆ. ಆಂಧ್ರ ಪ್ರದೇಶದಲ್ಲಿ 15 ವರ್ಷಕ್ಕೂ ಹೆಚ್ಚು ಕಾಲ ಇವರು ಶಿಕ್ಷಕರಾಗಿ ಸೇವೆ ಸಲ್ಲಿಸಿದ್ದು, ಕೊರೋನಾ ಕಾರಣದಿಂದ ಕೆಲಸ ಬಿಟ್ಟಿದ್ದಾರೆ.

ಬೆನ್ನಿ ಮತ್ತು ಮೊಲ್ಲಿ ದೇಶಾದ್ಯಂತ ಪ್ರವಾಸ ಕೈಗೊಳ್ಳಲು ನಿರ್ಧರಿಸಿದಾಗ ಪ್ರಯಾಣ ವೆಚ್ಚ ಭರಿಸಲು ಮೊಲ್ಲಿ ಚಿನ್ನವನ್ನು  ಅಡಮಾನವಿಟ್ಟು, ಸ್ನೇಹಿತರು, ಕುಟುಂಬಸ್ಥರಿಂದ ಹಣವನ್ನು ಸಾಲವಾಗಿ ಪಡೆದುಕೊಂಡಿದ್ದರು. ಇಡೀ ಪ್ರಯಾಣದುದ್ದಕ್ಕೂ ಹಲವಾರು ಸವಾಲಗಳನ್ನು ಎದುರಿಸದ್ದಾರೆ. ಒಮ್ಮೆ ತಮಿಳುನಾಡಿನ ವಿಲ್ಲುಪುರಂನ ದೇವಾಲಯವೊಂದರಲ್ಲಿ ತಂಗಿದಾಗ ಮುಂಜಾನೆ 2 ಗಂಟೆ ಸಮಯದಲ್ಲಿ ದರೋಡೆ ಮಾಡಲು ಬಂದಿದ್ದ  ಕಳ್ಳನೊಬ್ಬನನ್ನು ನಮ್ಮ ಜೊತೆಗಿದ್ದ ನಾಯಿ ಬೊಗಳಿ ಕಳುಹಿಸಿತ್ತು ಎಂದು ಬೆನ್ನಿ ಹೇಳಿದರು.

ನಿಯಂತ್ರಣ ಕಳೆದುಕೊಂಡು ತಮ್ಮ ಕಡೆಗೆ ವೇಗವಾಗಿ ಬರುತ್ತಿದ್ದ ಲಾರಿಯಿಂದ ಸಂಭಾವ್ಯ ಅಪಾಯದಿಂದ ಪಾರಾದ ಬಗ್ಗೆಯೂ ಅವರು ನೆನಪಿಸಿಕೊಳ್ಳುತ್ತಾರೆ. ಬಿಹಾರದಲ್ಲಿ ತಂಗಲು ಜಾಗ ಸಿಗದೆ ಇಡೀ ರಾತ್ರಿ ಸ್ಮಶಾನದಲ್ಲಿ ಸಮಯ ಕಳೆದಿದ್ದಾಗಿ ಮೊಲ್ಲಿ ಹೇಳುತ್ತಾರೆ.

ವಿವಿಧ ರೆಸ್ಟೋರೆಂಟ್ ಗಳು, ಡಾಬಾಗಳಲ್ಲಿ ತರಹೇವಾರಿ ರೀತಿಯ ಆಹಾರ ಖಾದ್ಯ ಸೇವಿಸಿದ್ದಾಗಿ ಅವರು ತಿಳಿಸಿದ್ದಾರೆ. ಮೊಲ್ಲಿ ಮತ್ತು ಬೆನ್ನಿ ಯು ಟ್ಯೂಬ್ ಚಾನೆಲ್ ವೊಂದನ್ನು ಹೊಂದಿದ್ದಾರೆ. ತಾವು ಭೇಟಿ ನೀಡಿದ ಪ್ರದೇಶಗಳಲ್ಲಿ ಪಂಜಾಬಿನಲ್ಲಿರುವ ಗೋಲ್ಡನ್ ಟೆಂಬಲ್ ತುಂಬಾ ಇಷ್ಟವಾದ ಸ್ಥಳ ಎಂದು ಅವರು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist