ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!

Twitter
Facebook
LinkedIn
WhatsApp
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!

ಅಬುಧಾಬಿ: ಕುವೈತ್‌ ಮಂಗಾಫ್‌ನಲ್ಲಿ ಬೆಂಕಿ ಅವಘಡದಲ್ಲಿ 45 ಭಾರತೀಯರ ಪಾರ್ಥಿವ ಶರೀರವನ್ನು ಹೊತ್ತ ಭಾರತೀಯ ವಾಯುಪಡೆ(IAF) ವಿಮಾನ ಇಂದು ಶುಕ್ರವಾರ ಬೆಳಗ್ಗೆ 8:30ಕ್ಕೆ ಕೊಚ್ಚಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದೆ.

ಭಾರತೀಯ ವಾಯುಪಡೆಯ ವಿಶೇಷ ವಿಮಾನ ಸಿ-130ಜೆ ಶುಕ್ರವಾರ ಮುಂಜಾನೆ ಕೊಚ್ಚಿಗೆ ಪ್ರಯಾಣ ಬೆಳೆಸಿದೆ. ನಿನ್ನೆ ಗುರುವಾರ ಕುವೈತ್‌ಗೆ ಆಗಮಿಸಿದ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರು ಕುವೈತ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಶೀಘ್ರವೇ ಮೃತದೇಹಗಳನ್ನು ತವರೂರಿಗೆ ಕರೆತರಲು ಕ್ರಮ ಕೈಗೊಂಡಿದ್ದಾರೆ ಎಂದು ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

45 ಮಂದಿ ಮೃತರಲ್ಲಿ 31 ಮೃತದೇಹಗಳನ್ನು ಕೊಚ್ಚಿ ವಿಮಾನ ನಿಲ್ದಾಣಕ್ಕೆ ತರಲಾಗುತ್ತಿದೆ. ನಂತರ ವಿಮಾನವು ಉಳಿದ ಮೃತದೇಹಗಳನ್ನು ಹೊತ್ತು ದೆಹಲಿಗೆ ತೆರಳಲಿದೆ ಎಂದು ತಿಳಿದುಬಂದಿದೆ. ತಮಿಳುನಾಡಿನಿಂದ ಏಳು ಮಂದಿ ಮತ್ತು ಕರ್ನಾಟಕದ ಒಬ್ಬರ ಮೃತದೇಹಗಳನ್ನು ಕೊಚ್ಚಿಗೆ ತರಲಾಗುತ್ತಿದೆ.

ದಕ್ಷಿಣ ಭಾರತೀಯರಲ್ಲದೆ, ಉತ್ತರ ಪ್ರದೇಶದ ಮೂವರು, ಒಡಿಶಾದ ಇಬ್ಬರು ಮತ್ತು ಬಿಹಾರ, ಪಂಜಾಬ್, ಕರ್ನಾಟಕ, ಮಹಾರಾಷ್ಟ್ರ, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಹರಿಯಾಣದಿಂದ ತಲಾ ಒಬ್ಬರು ಅಗ್ನಿ ದುರಂತದಲ್ಲಿ ಮೃತಪಟ್ಟಿದ್ದು, ಅವರ ಮೃತದೇಹಗಳನ್ನು ದೆಹಲಿ ವಿಮಾನ ನಿಲ್ದಾಣಕ್ಕೆ ಕೊಂಡೊಯ್ಯಲಾಗುತ್ತಿದೆ. .

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಮತ್ತು ಇತರ ಸಚಿವರು ವಿಮಾನ ನಿಲ್ದಾಣದಲ್ಲಿ ಮೃತರಿಗೆ ಗೌರವ ಸಲ್ಲಿಸಲಿದ್ದಾರೆ. ನಂತರ ಮೃತದೇಹಗಳನ್ನು ಅವರವರ ಮನೆಗೆ ಸಾಗಿಸಲು ರಾಜ್ಯ ಸರ್ಕಾರ ಆಂಬ್ಯುಲೆನ್ಸ್ ವ್ಯವಸ್ಥೆ ಮಾಡಿದೆ.

kuwaite

ಕಟ್ಟಡದ ಬೆಂಕಿ ದುರಂತದಲ್ಲಿ ಪ್ರಾಣ ಕಳೆದುಕೊಂಡ ಕೇರಳಿಗರು:

1. ಪತ್ತನಂತಿಟ್ಟದ ಪಂದಳಂನ ಆಕಾಶ್ ನಾಯರ್

2. ಪತ್ತನಂತಿಟ್ಟದ ವಜಮುತ್ತಂನ ಮುರಳೀಧರನ್ ನಾಯರ್

3. ಪತ್ತನಂತಿಟ್ಟದ ಕೊನ್ನಿಯ ಸಾಜು ವರ್ಗೀಸ್

4. ಪತ್ತನಂತಿಟ್ಟದ ಕೀಜ್ವೈಪುರದ ಸಿಬಿನ್ ಅಬ್ರಹಾಂ

5. ಪತ್ತನಂತಿಟ್ಟದ ತಿರುವಲ್ಲಾದ ಥಾಮಸ್ ಉಮ್ಮನ್

6. ಕೊಲ್ಲಂನ ಕರವಲೂರಿನ ಸಜನ್ ಜಾರ್ಜ್

7. ಕೊಲ್ಲಂನ ವಯ್ಯಂಕರ ಶಮೀರ್ ಉಮರುದ್ದೀನ್

8. ಕೊಲ್ಲಂನ ವೆಲಿಚಿಕ್ಕಲದ ಲೂಕೋಸ್ ವಡಕ್ಕೊಟ್ಟು

9. ಕೊಲ್ಲಂನ ಪೆರಿನಾಡಿನ ಸುಮೇಶ್ ಪಿಳ್ಳೈ

10. ಕಣ್ಣೂರಿನ ಧರ್ಮದೊಳದ ವಿಶ್ವಾಸ್ ಕೃಷ್ಣ

11. ಕಣ್ಣೂರಿನ ಕಡಲಾಯಿಯ ಅನೀಶ್ ಕುಮಾರ್

12. ಕಣ್ಣೂರಿನ ಪಡಿಯೋಚ್ಚಲ್‌ನ ನಿತಿನ್ ಕೂತೂರ್

13. ಕೊಟ್ಟಾಯಂನ ಚಂಗನಾಶ್ಸೆರಿಯ ಶ್ರೀಹರಿ ಪ್ರದೀಪ್

14. ಕೊಟ್ಟಾಯಂನ ಪಂಪಾಡಿಯ ಸ್ಟೆಫಿನ್ ಅಬ್ರಹಾಂ

15. ಕೊಟ್ಟಾಯಂನ ಪೈಪ್ಪಾಡ್‌ನ ಶಿಬು ವರ್ಗೀಸ್

16. ಮಲಪ್ಪುರಂನ ಕೂಟ್ಟಾಯಿಯ ನೂಹು ಕೆ ಪಿ

17. ಮಲಪ್ಪುರಂನ ಪುಲಮಂತೋಲ್‌ನ ಎಂ ಪಿ ಬಾಹುಲೇಯನ್

18. ತಿರುವನಂತಪುರದ ನೆಡುಮಂಗಡದ ಅರುಣ್ ಬಾಬು

19. ತಿರುವನಂತಪುರದ ಎಡವದ ಶ್ರೀಜೇಶ್ ನಾಯರ್

20. ಕಾಸರಗೋಡಿನ ತೃಕ್ಕರಿಪುರದ ಕೇಲು ಪೊನ್ಮಲೇರಿ

21. ಕಾಸರಗೋಡಿನ ಚೆರ್ಕಳದ ರೆಂಜಿತ್ ಕೆ ಆರ್

22. ತ್ರಿಶೂರ್‌ನ ಚಾವಕ್ಕಾಡ್‌ನ ಬಿನೋಯ್ ಥಾಮಸ್

23. ಅಲಪ್ಪುಳದ ಚೆಂಗನ್ನೂರಿನ ಮ್ಯಾಥ್ಯೂ ಜಾರ್ಜ್

ಮೃತ ತಮಿಳರು

1. ರಾಮನಾಥಪುರದ ಎಟ್ಟಿವಾಯಲ್‌ನ ರಾಮು ಕರುಪ್ಪಣ್ಣನ್

2. ವಿಲ್ಲುಪುರಂನ ತಿಂಡಿವನಂನ ಮೊಹಮ್ಮದ್ ಶರೀಫ್

3. ತಂಜಾವೂರಿನ ಪೆರವೂರಾನಿಯ ಭುನಾಫ್ ರಿಚರ್ಡ್ ರೇ

4. ಚೆನ್ನೈನ ರಾಯಪುರಂನ ಜಿ ಶಿವಶಂಕರ್

5. ಕಡಲೂರಿನ ಮುತ್ತಂನ ಕೆ ಚಿನ್ನಧುರೈ

6. ತೂತುಕುಡಿಯ ವನರಮುಟ್ಟಿಯ ವಿ ಮರಿಯಪ್ಪನ್

7. ತಿರುಚ್ಚಿಯ ಇ ರಾಜು

ಆಂಧ್ರಪ್ರದೇಶ ಸಂತ್ರಸ್ತರು

1. ಶ್ರೀಕಾಕುಳಂನ ಸೋಂಪೇಟದಿಂದ ತಮದ ಲೋಕನಾಧಂ

2. ಪಶ್ಚಿಮ ಗೋದಾವರಿ ಖಂಡವಳ್ಳಿ ಗ್ರಾಮದ ಮೊಲ್ಲೇಟಿ ಸತ್ಯನಾರಾಯಣ

3. ಪಶ್ಚಿಮ ಗೋದಾವರಿ ಅಣ್ಣಾವರಪ್ಪಾಡು ಗ್ರಾಮದ ಮೀಸಲ ಈಶ್ವರಡು

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist