ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಕೊಳದಲ್ಲಿ ಸ್ನಾನ ಮಾಡ್ತಿದ್ದ ಮಹಿಳೆ ವಿರುದ್ಧ DMK ಸದಸ್ಯನಿಂದ ಜಾತಿ ನಿಂದನೆ

Twitter
Facebook
LinkedIn
WhatsApp
whatsapp image 2022 03 20 at 14040 pm16478028851649185798 6

ಚೆನ್ನೈ: ಸಾರ್ವಜನಿಕ ಕೊಳದಲ್ಲಿ (Public Pond) ಸ್ನಾನ ಮಾಡುತ್ತಿದ್ದ ದಲಿತ ಮಹಿಳೆ ವಿರುದ್ಧ ಜಾತಿ (Scheduled Caste) ನಿಂದನೆ ಮಾಡಿ, ಆಕೆಯನ್ನು ಅರೆಬರೆ ಬಟ್ಟೆಯಲ್ಲೇ ಓಡಿಸಿದ ಘಟನೆ ತಮಿಳುನಾಡಿನ (TamilNadu) ಪುದುಕೊಟ್ಟೈ ಜಿಲ್ಲೆಯ ಕುತ್ತಂಕುಡಿ ಗ್ರಾಮದಲ್ಲಿ ನಡೆದಿದೆ.

ಸಂತ್ರಸ್ತ ಮಹಿಳೆಯೊಂದಿಗೆ (Women) ಗ್ರಾಮಸ್ಥರು ಜಾತಿ ನಿಂದನೆ ಮಾಡಿದ ವ್ಯಕ್ತಿ ಅಯ್ಯಪ್ಪನ್ ವಿರುದ್ಧ ದೂರು ನೀಡಿದ್ದಾರೆ.

ನಡೆದಿದ್ದೇನು?: ಇದೇ ಜನವರಿ 1ರಂದು ಮಹಿಳೆ ಕುತ್ತಂಕುಡಿ ಗ್ರಾಮದ ಸಾರ್ವಜನಿಕ ಕೊಳದಲ್ಲಿ ಸ್ನಾನ ಮಾಡಲು ಹೋಗಿದ್ದರು. ಈ ವೇಳೆ ಮಹಿಳೆಯನ್ನು ನೋಡಿದ ಅಯ್ಯಪ್ಪನ್ ಎಂಬ ವ್ಯಕ್ತಿ ಆಕೆಯನ್ನ ತಡೆದು ಗದರಿಸಿದ್ದಾನೆ. ಮಹಿಳೆ ಏಕೆ ಸ್ನಾನ ಮಾಡಬಾರದು ಎಂದು ಪ್ರಶ್ನಿಸಿದಾಗ ಮೀನು ಸಾಕಾಣಿಕೆಗಾಗಿ (Fish Breeding) ಈಗಾಗಲೇ ಕೆರೆಯನ್ನು ಹರಾಜು ಮಾಡಲಾಗಿದೆ ಎಂದು ಅಯ್ಯಪ್ಪನ್ ಹೇಳಿದ್ದಾನೆ. 

ನಂತರ ಮಹಿಳೆ ಅರೆಬರೆ ಬಟ್ಟೆ ತೊಟ್ಟಿದ್ದರೂ ಹಾಗೆಯೇ ಓಡಿಸಿದ್ದಾನೆ. ಮಹಿಳೆಯ ಬಟ್ಟೆಯನ್ನು ಮುಳ್ಳಿನ ಪೊದೆ ಮೇಲೆ ಎಸೆದಿದ್ದಾನೆ. ಬಳಿಕ ಗ್ರಾಮಸ್ಥರು ಆರೋಪಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ದೂರು ನೀಡಿದ್ದಾರೆ.

ಅಯ್ಯಪ್ಪನ್ ಡಿಎಂಕೆ ಸದಸ್ಯ ಹಾಗೂ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷ ಎಂದು ಮಹಿಳೆ ಶ್ರೀದೇವಿ ಪತಿ ವಡಿವೇಶ್ವರನ್ ಹೇಳಿದ್ದಾರೆ. ಅಲ್ಲದೇ ಮಹಿಳೆ ಸ್ನಾನ ಮಾಡುವಾಗ ಅಯ್ಯಪ್ಪನ್ ಜೊತೆಗೆ ಮುತ್ತುರಾಮನ್ ಎಂಬ ಇನ್ನೊಬ್ಬ ವ್ಯಕ್ತಿಯೂ ಇದ್ದ ಎಂದು ಆರೋಪಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ