ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಕೋಟ: ಬೇಕಾಬಿಟ್ಟಿ ಬೈಕ್ ಚಲಾಯಿಸಿ ಪೊಲೀಸರಿಗೆ ಢಿಕ್ಕಿಗೆ ಯತ್ನ

Twitter
Facebook
LinkedIn
WhatsApp
19

ಕುಂದಾಪುರ, ಮೇ 26: ನಾಲ್ಕು ಜನರನ್ನು ಒಂದೇ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಹೆದ್ದಾರಿಯಲ್ಲಿ ಪೊಲೀಸರೆದುರೇ ಅಪಾಯಕಾರಿಯಾಗಿ ಚಲಾಯಿಸಿಕೊಂಡು ಬಂದು ಪರಾರಿಯಾದ ವ್ಯಕ್ತಿಯ ವಿರುದ್ಧ ಪೊಲೀಸರು ಸೊಮೊಟೋ ಪ್ರಕರಣ ದಾಖಲಿಸಿಕೊಂಡಿರುವ ಘಟನೆ ಕೋಟ ಪೊಲೀಸ್ ಠಾಣಾ ವ್ಯಾಪ್ತಿಯ ಪಾರಂಪಳ್ಳಿ ಗ್ರಾಮದ ಸಾಲಿಗ್ರಾಮ ಗಣೇಶ ಗ್ರ್ಯಾಂಡ್ ಹೋಟೆಲ್ ಬಳಿ ನಡೆದಿದೆ.

ಬುಧವಾರ ಕೋಟ ಪೊಲೀಸರು ಪಾರಂಪಳ್ಳಿ ಗ್ರಾಮದ ಸಾಲಿಗ್ರಾಮ ಗಣೇಶ ಗ್ರ್ಯಾಂಡ್ ಹೋಟೆಲ್ ಬಳಿ ವಾಹನ ತಪಾಸಣೆ ಮಾಡುತ್ತಿದ್ದರು. ಈ ಸಂದರ್ಭ ಹೆಲ್ಮೆಟ್ ಧರಿಸದೇ ಹಿಂಬದಿಯಲ್ಲಿ ಮೂವರನ್ನು ಕುಳ್ಳಿರಿಸಿಕೊಂಡು ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವ್ಯಕ್ತಿಯನ್ನು ಕಂಡು ಬೈಕ್ ಪೊಲೀಸರು ನಿಲ್ಲಿಸುವಂತೆ ಸೂಚಿಸಿದ್ದಾರೆ. ಈ ವೇಳೆ ಸವಾರ ವೇಗ ಹೆಚ್ಚಿಸಿಕೊಂಡು ಬೇಕಾಬಿಟ್ಟಿಯಾಗಿ ಬೈಕ್ ಚಲಾಯಿಸಿದ್ದಾನೆ.

ಪೊಲೀಸರು ಇದರಿಂಡ ಕೂದಲೆಳೆಯಲ್ಲಿ ಪಾರಾಗಿದ್ದು, ಕರ್ತವ್ಯದಲ್ಲಿದ್ದವರ ದೈಹಿಕ ಸುರಕ್ಷತೆಗೆ ಧಕ್ಕೆ ಮತ್ತು ಪ್ರಾಣಕ್ಕೆ ಅಪಾಯವಾಗುವಂತೆ ಚಲಾಯಿಸಿಕೊಂಡು ಪರಾರಿಯಾಗಿರುವುದಾಗಿ ಕೋಟ ಎಸೈ ನರೇಂದ್ರ ದೂರು ದಾಖಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ