ಮಂಗಳವಾರ, ಮೇ 30, 2023
ಹಾವನ್ನು ಸೆರೆ ಹಿಡಿಯಲು ಹೋದಾಗ ನಾಗರ ಹಾವು ಕಚ್ಚಿ ಸ್ನೇಕ್ ನರೇಶ್ ಸಾವು!-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ದ.ಕ , ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲೂ ಮಹಿಳೆಯರಿಗೆ ಖಾಸಗಿ ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿ - ಸುನಿಲ್ ಕುಮಾರ್-ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ; ಪದಕಗಳನ್ನು ಗಂಗಾ ನದಿಗೆ ಎಸೆಯಲು ಕುಸ್ತಿಪಟುಗಳ ನಿರ್ಧಾರ-ಕ್ರೋಮಿಂಗ್ ಟ್ರೆಂಡ್ ಗೆ ಬಲಿಯಾದ 13 ವರ್ಷದ ಬಾಲಕಿ! ಬ್ಲೂವೇಲ್ ರೀತಿಯ ಈ ಗೇಮಿಂಗ್ ಯಾವುದು?-ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಕಾಲ ಬೆರಳಿಗೆ ಹಾವು ಕಡಿದು ವಿದ್ಯಾರ್ಥಿನಿ ಸಾವು-ಮಹಿಳೆಯರಿಗೂ ಕಂಬಳದಲ್ಲಿ ಅವಕಾಶ, ತರಬೇತಿಗೆ ಸಿದ್ಧವಾಗುತ್ತಿದೆ ವೇದಿಕೆ-ದುಬಾರಿ ಕಾರು ಬಿಟ್ಟು ಆಟೋದಲ್ಲಿ ಪ್ರಯಾಣಿಸಿದ ನಟಿ ಇರಾ ಖಾನ್‌-ಉಡುಪಿ : ಗೇರುಬೀಜ ಸಾಗಾಟದ ಲಾರಿ ಪಲ್ಟಿ ಅಪಾಯದಿಂದ ಪಾರಾದ ಚಾಲಕ-ಸರ್ಕಾರಿ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ರಾಮಲಿಂಗಾರೆಡ್ಡಿ ಘೋಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗಂಡ ಅಮೆರಿಕದಲ್ಲಿ ಸಾವನ್ನಪ್ಪಿದ ನೋವನ್ನು ತಾಳಲಾರದೆ ಹೆಂಡತಿ ಆತ್ಮಹತ್ಯೆ!

Twitter
Facebook
LinkedIn
WhatsApp
Ravi Bopara 3 8

ಹೈದರಾಬಾದ್​: ಗಂಡನ ಸಾವಿನ ನೋವಿನಿಂದ ಹೊರಬರಲಾಗದೇ ಮಹಿಳೆಯೊಬ್ಬಳು ಸಾವಿನ ಹಾದಿ ಹಿಡಿದಿರುವ ಹೃದಯವಿದ್ರಾವಕ ಘಟನೆ ಹೈದರಾಬಾದ್​ನ ಅಂಬರಪೇಟೆ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ಸಾಹಿತಿ (29) ಮೃತ ಮಹಿಳೆ. ಈಕೆ ಅಂಬರಪೇಟೆಯ ಡಿಡಿ ಕಾಲನಿ ನಿವಾಸಿ. ಒಂದೂವರೆ ವರ್ಷದ ಹಿಂದೆ ವನಸ್ಥಳಿಪುರಂ ಮೂಲದ ಸಾಫ್ಟ್​ವೇರ್​ ಇಂಜಿನಿಯರ್​ ಮನೋಜ್​ (31) ಎಂಬುವರನ್ನು ಮದುವೆ ಆಗಿದ್ದರು. ಮದುವೆ ಬಳಿಕ ಇಬ್ಬರು ಅಮೆರಿಕದ ದಲ್ಲಾಸ್​ನಲ್ಲಿ ನೆಲೆಸಿದ್ದರು.

ಈ ತಿಂಗಳ 2ರಂದು ಸಾಹಿತಿ ತನ್ನ ಪಾಲಕರನ್ನು ನೋಡಲೆಂದು ಅಮೆರಿಕದಿಂದ ಮರಳಿದ್ದಳು. ಆದರೆ, ಮನೋಜ್​ ಮಾತ್ರ ಅಮೆರಿಕದಲ್ಲೇ ಉಳಿದಿದ್ದ. ಇದೇ ತಿಂಗಳು 20ರಂದು ಮನೋಜ್​ ಹೃದಯಾಘಾತದಿಂದ ಮೃತಪಟ್ಟರು. ಮೇ 23ರಂದು ಆತನ ಮೃತದೇಹವನ್ನು ಅಮೆರಿಕದಿಂದ ವನಸ್ಥಳಿಪುರಂಗೆ ತರಿಸಿಕೊಳ್ಳಲಾಯಿತು. ಮೇ 24ರಂದು ಗಂಡನ ಅಂತ್ಯಕ್ರಿಯೆ ಮುಗಿಸಿ, ಅದೇ ದಿನ ರಾತ್ರಿ ತನ್ನ ಪಾಲಕರ ಮನೆಗೆ ಸಾಹಿತಿ ಹಿಂತಿರುಗಿದ್ದಳು.

ಸಾಹಿತಿಯು ಸಹೋದರಿ ಸಂಜನಾ ಜತೆ ಕೋಣೆಯಲ್ಲಿ ಮಲಗಿದ್ದಳು. ಸಂಜನಾ ಗುರುವಾರ ಬೆಳಗ್ಗೆ ಎದ್ದು ವಾಶ್​ರೂಮ್​ಗೆ ತೆರಳಿದಳು. ಇದೇ ಸಮಯಕ್ಕೆ ಎದ್ದ ಸಾಹಿತಿ ರೂಮಿನ ಬಾಗಿಲನ್ನು ಒಳಗಡೆಯಿಂದ ಲಾಕ್​ ಮಾಡಿ, ಫ್ಯಾನಿಗೆ ಸೀರೆ ಕಟ್ಟಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾಳೆ. ಈ ವಿಚಾರ ಗೊತ್ತಾದ ಬಳಿಕ ರೂಮಿನ ಬಾಗಿಲು ಒಡೆದು ತಕ್ಷಣ ಆಕೆಯನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

ಸಾಹಿತಿಯನ್ನು ಪರೀಕ್ಷಿಸಿದ ವೈದ್ಯರು ಆಕೆ ಅಷ್ಟರಲ್ಲಾಗಲೇ ಮೃತಪಟ್ಟಿರುವುದಾಗಿ ಖಚಿತಪಡಿಸಿದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ