ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಗೆಜ್ಜೆಗಿರಿ ದೇವಸ್ಥಾನದ ವತಿಯಿಂದ ನೂತನ ಯಕ್ಷಗಾನ ಮೇಳ ಆರಂಭ

Twitter
Facebook
LinkedIn
WhatsApp
ಗೆಜ್ಜೆಗಿರಿ ದೇವಸ್ಥಾನದ ವತಿಯಿಂದ ನೂತನ ಯಕ್ಷಗಾನ ಮೇಳ ಆರಂಭ

ಪುತ್ತೂರು: ಅಲ್ಪ ಅವಧಿಯಲ್ಲಿ ಭಕ್ತರ ಗಮನಸೆಳೆದ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಕ್ಷೇತ್ರಕ್ಕೂ ಕಾಲಿಟ್ಟಿದೆ.
ದೇಯಿ ಬೈದೆತಿ ಕೋಟಿ-ಚೆನ್ನಯ ಯಕ್ಷಗಾನ ಕಲಾ ಮಂಡಳಿ, ಮೂಲಸ್ಥಾನ ಗೆಜ್ಜೆಗಿರಿ ಈ ಬಾರಿ ತಿರುಗಾಟಕ್ಕೆ ಸಿದ್ಧವಾಗಿದೆ.

ಈ ಬಾರಿಯ ತಿರುಗಾಟಕ್ಕೆ ಸರ್ವರ ಸಲಹೆಯ ಮೇರೆಗೆ, ಭಕ್ತರ ಅಪೇಕ್ಷೆ ಮೇರೆಗೆ ಮೇಳ ಸಜ್ಜಾಗಿದೆ ಎಂದು ಕ್ಷೇತ್ರದ ಆಡಳಿತ ಮಂಡಳಿ ಅಧ್ಯಕ್ಷ ರಾದ ಪೀತಾಂಬರ ಹೆರಾಜೆ ತಿಳಿಸಿದ್ದಾರೆ.

ಯಕ್ಷಗಾನ ಮೇಳದ ಮಂಗಳೂರು ವಲಯದ ಸಂಚಾಲಕರಾಗಿ ಕ್ಷೇತ್ರದ ಟ್ರಸ್ಟಿ ನವೀನ್ ಸುವರ್ಣ ಹಾಗೂ ಉಡುಪಿ ವಲಯದ ಸಂಚಾಲಕರಾಗಿ ಕ್ಷೇತ್ರದ ಟ್ರಸ್ಟಿ ನವೀನ್ ಅಮೀನ್ ಶಂಕರಪುರ
ಕಾರ್ಯನಿರ್ವಹಿಸುತ್ತಾರೆ ಎಂದು ಕ್ಷೇತ್ರ ಆಡಳಿತ ಮಂಡಳಿ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್ ತಿಳಿಸಿದ್ದಾರೆ.

ಮೇಳದ ಪ್ರಮುಖ ಭಾಗವತರಾಗಿ
ಗಾನ ಮಂದಾರ ಗಿರೀಶ್ ರೈ ಕಕ್ಕೆಪದವು ಹಾಗೂ ನಿರಂಜನ ಬೆಡಗ ಬಡಗಬೆಳ್ಳೂರು ಮೇಳವನ್ನು ನಿರ್ವಹಿಸಲಿದ್ದಾರೆ.

 

ಯಕ್ಷಗಾನ ಸೇವೆಯಾಟ ಸಿದ್ಧತೆಗೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ವಿಶೇಷ ಸಭೆ

ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರದ ಸ್ಥಳ ಪುರಾಣ ಆಧಾರಿತ ಬಹುಜನರ ನಿರೀಕ್ಷೆಯ ಶ್ರೀ ದೇಯಿಬೈದೆತಿ ಕೋಟಿ ಚೆನ್ನಯ ಕೃಪಾಪೋಷಿತ ಯಕ್ಷಗಾನ ಮಂಡಳಿಯ ಮೂಲಕ ಶ್ರೀ ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಎಂಬ ಪುಣ್ಯ ಕಥಾ ಯಕ್ಷಗಾನ ಪ್ರಸಂಗವನ್ನು ತುಳುನಾಡಿನ ಪ್ರಸಿದ್ಧ ಕ್ಷೇತ್ರ ಗೆಜ್ಜೆಗಿರಿಯಿಂದ ಬೆಳಕಿನ ಗೆಜ್ಜೆಸೇವೆಗೆ ಸನ್ನದ್ದ ಗೊಳಿಸುವ ಸಭೆ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಜರಗಿತು.

ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಕ್ಷೇತ್ರದ ಅಧ್ಯಕ್ಷರಾದ ಪೀತಾಂಬರ ಹೆರಾಜೆ ಯವರು ಕ್ಷೇತ್ರದ ಬಹುಸಂಖ್ಯೆಯ ಭಕ್ತರ ಬೇಡಿಕೆ ಯಂತೆ ಗೆಜ್ಜೆಗಿರಿ ಮೇಳವನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ. ನಮ್ಮ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತವಾಗುತ್ತಿದ್ದು ತೆಂಕುತಿಟ್ಟಿನ ನೂತನ ಮೇಳ, ಪ್ರಸಿದ್ದ ಭಾಗವತರುಗಳಾದ ಗಾನಮಂದಾರ ಗಿರೀಶ್ ರೈ ಕಕ್ಕೆಪದವು, ನಿರಂಜನ ಪೂಜಾರಿ ಬಡಗಬೆಳ್ಳೂರುರವರ ಗಾನ ಸುಧೆಯನ್ನೊಳಗೊಂಡಂತೆ ಬಲಿಷ್ಠ ಹಿಮ್ಮೇಳ, ಮುಮ್ಮೇಳವನ್ನೊಳಗೊ಼ಂಡ ಸಮತೋಲಿತ ಮೇಳವಾಗಿ ಹೊರಹೊಮ್ಮಲಿದೆ ಎಂದರು. ಸಭೆಯಲ್ಲಿ ಕ್ಷೇತ್ರದ ಪ್ರಧಾನ ಕಾರ್ಯದರ್ಶಿ ಉಲ್ಲಾಸ್ ಕೋಟ್ಯಾನ್, ಉಪಾಧ್ಯಕ್ಷರಾದ ರವಿಪೂಜಾರಿ ಚಿಲಿಂಬಿ, ಜೊತೆ ಕಾರ್ಯದರ್ಶಿ ಮೋಹನ್ ದಾಸ್ ವಾಮಂಜೂರು ಹಾಗೂ ಚಂದ್ರಶೇಖರ್ ಉಚ್ಚಿಲ್, ಕಾರ್ಯಕಾರಿ ಸದಸ್ಯರು ಮೇಳ ಸಂಚಾಲಕರಾದ ನವೀನ್ ಸುವರ್ಣ, ಕಾನೂನು ಸಲಹೆಗಾರರಾದ ನವನೀತ್ ಹಿಂಗಾಣಿ, ರಾಜೇಂದ್ರ ಚಿಲಿಂಬಿ, ಜನಾರ್ಧನ ಪೂಜಾರಿ ಪಡುಮಲೆ, ಸುರೇಶ್ ಪೂಜಾರಿ ಉಜಿರೆ, ನಿತಿನ್ ಕುಮಾರ್ ತೆಂಕ ಕಾರಾಂದೂರು, ಗಿರೀಶ್ ರೈ ಕಕ್ಕೆಪದವು, ಶಶಿಕಿರಣ ಕಾವು, ನಾರಾಯಣ ಸುವರ್ಣ, ದಾಮೋದರ ಪಾಟಳಿ ಸರಾವು, ಚಂದ್ರಶೇಖರ ಸುಳ್ಯಪದವು,ದಿವಾಕರ್ ದಾಸ್ ಕಾವಳಕಟ್ಟೆ, ಜಗದೀಶ್ ಕಜೆಕಾರ್ ಮುಂತಾದವರು ಉಪಸ್ಥಿತರಿದ್ದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಬೆಳ್ತಂಗಡಿ ಮಾಜಿ ಶಾಸಕ ಕೆ. ವಸಂತ ಬಂಗೇರ ನಿಧನ..!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!

ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!! Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡದ ಅಪ್ಪಟ

ಅಂಕಣ