ಶುಕ್ರವಾರ, ಜೂನ್ 9, 2023
ಅಜ್ಜಿಯನ್ನು ಕೊಲೆ ಮಾಡಿ ಶವ ಸುಟ್ಟ ಪ್ರಕರಣ: ಮೊಮ್ಮಗನ ಬಂಧನ-ಸೈಕ್ಲೋನ್‌ ಎಫೆಕ್ಟ್‌; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ-ಬಾಬಾಬುಡನಗಿರಿಯಲ್ಲಿ ಶೌಚಾಲಯ ಸಮಸ್ಯೆ; ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ-ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗ್ಯಾರಂಟಿಗಳಿಗೆ ಷರತ್ತು ಹಾಕಿದರೆ, ಜೂನ್ 1ರಿಂದ ಹೋರಾಟ ಮಾಡುತ್ತೇವೆ: ಪ್ರತಾಪ್ ಸಿಂಹ

Twitter
Facebook
LinkedIn
WhatsApp
images 11

ಮೈಸೂರು: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ಪೊಲೀಸ್ ಇಲಾಖೆಗೆ ಧಮ್ಕಿ ಹಾಕುತ್ತಿದ್ದೀರಾ ಇದನ್ನು ಮೊದಲು ನಿಲ್ಲಿಸಿ. ಸಿಎಂ ಕುರ್ಚಿ ಶಾಶ್ವತ. ಆದರೆ ಪೊಲೀಸ್ ವ್ಯವಸ್ಥೆ ಶಾಶ್ವತವಾಗಿರುತ್ತದೆ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ. 

ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರತಾಪ್ ಸಿಂಹ ಅವರು, ಮತದಾರರು ಕಾಂಗ್ರೆಸ್ ಮುಖ ನೋಡಿ ಮತ ಹಾಕಿಲ್ಲ. ಕಾಂಗ್ರೆಸ್ ನೀಡಿದ ಗ್ಯಾರಂಟಿಗಳನ್ನು ನೋಡಿ ಮತ ಹಾಕಿದ್ದಾರೆ. ಹೀಗಾಗಿ ಗ್ಯಾರಂಟಿಗಳನ್ನು ಬೇಗ ಈಡೇರಿಸಿ. ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಸಿದರು. ಇನ್ನು ಗ್ಯಾರಂಟಿಗಳನ್ನು ಸಮನಾಗಿ ನೀಡಿ. ಒಂದು ವೇಳೆ ಷರತ್ತು ಹಾಕಿದರೆ ಜೂನ್ 1ರ ನಂತರ ಹೋರಾಟ ಮಾಡುತ್ತೇವೆ ಎಂದರು.

ಬಿಜೆಪಿ 40 ಪರ್ಸೆಂಟ್ ಸರ್ಕಾರ ಎಂದು ಕಾಂಗ್ರೆಸ್ ಆರೋಪ ಮಾಡಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಕೂಡಲೇ ಇದರ ವಿರುದ್ಧ ತನಿಖೆಗೆ ಆದೇಶಿ. ತಪ್ಪಿತಸ್ಥರು ಯಾರೇ ಇರಲಿ ಅವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಸವಾಲು ಹಾಕಿದರು.

ಇನ್ನು ಮೈಸೂರು ನನ್ನ ಕ್ಷೇತ್ರ. ಮೈಸೂರಿನ ಅಭಿವೃದ್ಧಿಗಾಗಿ ನಾನು ಯಾರ ಬಳಿ ಬೇಕಾದರೂ ಹೋಗುತ್ತೇನೆ. ಕೊಡಗು ಮತ್ತು ಮೈಸೂರು ಅಭಿವೃದ್ಧಿಗಾಗಿ ಯಾರ ಕೈಕಾಲು ಬೇಕಾದರೂ ಹಿಡಿಯುತ್ತೇನೆ. ಚುನಾವಣೆ ಬಂದಾಗ ಅಷ್ಟೇ ರಾಜಕಾರಣ ಮಾಡಬೇಕು. ಉಳಿದ ಸಮಯದಲ್ಲಿ ಅಭಿವೃದ್ಧಿ ಕೆಲಸ ಮಾಡಬೇಕು ಎಂದರು. ಅಭಿವೃದ್ಧಿ ವಿಚಾರವಾಗಿ ನಾನು ಸಿಎಂ ಮನೆಗೆ ಹೋಗುತ್ತೇನೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ