ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರಕ್ಕೆ ಕತ್ತರಿ....! ಪರವಾನಿಗೆ. ಇ- ಸ್ವತ್ತು ಸಹಿ ಪಿಡಿಒಗಳಿಗೆ

Twitter
Facebook
LinkedIn
WhatsApp
ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರಕ್ಕೆ ಕತ್ತರಿ….! ಪರವಾನಿಗೆ. ಇ- ಸ್ವತ್ತು ಸಹಿ ಪಿಡಿಒಗಳಿಗೆ

ಹಣಕಾಸು ನಿರ್ವಹಣೆಯ ಹೊಣೆಗಾರಿಕೆಯಿಂದ ಗ್ರಾಮ ಪಂಚಾಯಿತಿ ಅಧ್ಯಕ್ಷರನ್ನು ಹೊರಗಿಡಲು ಸರ್ಕಾರ ನಿರ್ಧರಿಸಿದ್ದು ವ್ಯವಹಾರದ ಎಲ್ಲಾ ಚೆಕ್ಕುಗಳಿಗೂ ಸಹಿ ಮಾಡುವ ಅಧಿಕಾರವನ್ನು ಪಿಡಿಒ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಿಗೆ (ಎಸ್‌ಡಿಎಎ) ನೀಡಲಾಗಿದೆ. ಈ ಸಂಬಂಧ ರೂಪಿಸಲಾದ ನಡುವಳಿಕೆಗಳನ್ನು ಜಾರಿಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಆದಿನಿಯಮ 1993ರ ಪ್ರಕರಣಗಳಿಗೆ ತಿದ್ದುಪಡಿ ಮತ್ತು ಗ್ರಾಮ ಪಂಚಾಯಿತಿ ನೌಕರರ ಸೇವಾ ವಿಷಯಗಳ ಕುರಿತು ಗ್ರಾಮೀಣ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಈಚೆಗೆ ನಡೆದ ಸಭೆಯಲ್ಲಿ ನಡವಳಿಕೆಗಳನ್ನು ರೂಪಿಸಲಾಗಿದೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಕಾಯ್ದೆಯ ಗ್ರಾಮ ಪಂಚಾಯಿತಿ ಆಯವ್ಯಯ ಮತ್ತು ಲೆಕ್ಕಪತ್ರಗಳ ನಿಯಮಕ್ಕೆ 2006ರಲ್ಲಿ ತಂದಿದ್ದ ತಿದ್ದುಪಡಿ ಯಂತೆ ಗ್ರಾಮ ಪಂಚಾಯಿತಿಯ ಹಣಕಾಸಿನ ವ್ಯವಹಾರವನ್ನು ಸರ್ಕಾರ ಸೂಚಿಸುವ ಅಧಿಕಾರಿಗಳು ಅಥವಾ ಪ್ರಾಧಿಕಾರ ನಿರ್ವಹಿಸಬಹುದು. ಇಂತಹ ಅಧಿಕಾರವನ್ನು ಇಲ್ಲಿಯವರೆಗೂ ಸ್ಥಳೀಯ ಆಡಳಿತ ಚುನಾಯಿತ ಮುಖ್ಯಸ್ಥರಾದ ಅಧ್ಯಕ್ಷರಿಗೂ ನೀಡಲಾಗಿತ್ತು. ಉದ್ಯೋಗ ಖಾತ್ರಿ ವಿವಿಧ ವಸತಿ ಯೋಜನೆಗಳ ಅನುಷ್ಠಾನ ಹಣಕಾಸಿನ ನಿಧಿ ಪಂಚಾಯಿತಿ ತೆರಿಗೆ ಖರ್ಚು ವೆಚ್ಚಗಳ ಎಲ್ಲಾ ಚೆಕ್ಕುಗಳಿಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಹಿಂದೆ ಕಾರ್ಯದರ್ಶಿ) ಹಾಗೂ ಅಧ್ಯಕ್ಷರ ಜಂಟಿ ಸಹಿ ಕಡ್ಡಾಯವಾಗಿತ್ತು. ಈಗ ಸರ್ಕಾರ 2006ರಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ. ಅಧ್ಯಕ್ಷರ ಸಹಿ ಅಧಿಕಾರ ಹಿಂಪಡೆಯಲು ಹೊಸದಾಗಿ ನಡುವಳಿಕೆ ರೂಪಿಸಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷರ ಅಧಿಕಾರಕ್ಕೆ ಕತ್ತರಿ….! ಪರವಾನಿಗೆ. ಇ- ಸ್ವತ್ತು ಸಹಿ ಪಿಡಿಒಗಳಿಗೆ

ಅಧ್ಯಕ್ಷರ ಅಧಿಕಾರ ಮೊಟುಕು ಏಕೆ?:
ಗ್ರಾಮ ಪಂಚಾಯಿತಿ ಅಧ್ಯಕ್ಷರಿಗೆ ನೀಡಲಾಗಿದ್ದ ಸಹಿ ಅಧಿಕಾರವನ್ನು ಹಿಂಪಡೆಯಲು ಸರ್ಕಾರ ಪ್ರಮುಖವಾಗಿ ಎರಡು ಕಾರಣಗಳನ್ನು ಪಟ್ಟಿ ಮಾಡಿದೆ. ವಿವಿಧ ಯೋಜನೆಗಳು ಕಾರ್ಯ ಕ್ರಮಗಳ ಬಿಲ್ಲು ಪಾವತಿ ಮಾಡಲು ಲಂಚ ಪಡೆಯುವಾಗ ರಾಜ್ಯದ ಹಲವು ಗ್ರಾಮ ಪಂಚಾಯಿತಿಗಳ ಅಧ್ಯಕ್ಷರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹಲವು ಪ್ರಕರಣಗಳಲ್ಲಿ ವಿಳಂಬವಾಗಿ ಬಿಲ್ ಪಾವತಿ ಮಾಡುತ್ತಿರುವುದು ಸರ್ಕಾರ ಗಮನಕ್ಕೆ ಬಂದಿದೆ ಅಧ್ಯಕ್ಷರು ಚುನಾಯಿತ ಪ್ರತಿನಿಧಿಯಾಗಿದ್ದು ಹಣಕಾಸಿನ ವ್ಯವಹಾರಗಳಿಗೆ ಹೊಣೆಗಾರರಲ್ಲದ ಕಾರಣ ಸರ್ಕಾರಿ ನೌಕರರಾದ ಪಿಡಿಒ. ಎಸ್ ಡಿಎಎ ಸ್ಥಾನ ಕಾಲಿ ಇದ್ದರೆ ಪಿಡಿಒ ಜೊತೆಗೆ ಕಾರ್ಯದರ್ಶಿ ಜಂಟಿ ಸಹಿ ಮಾಡಬೇಕು ಎಂದು ಸೂಚಿಸಲಾಗಿದೆ.

ವೇಣೂರು ಯುವ ವಾಹಿನಿ ಘಟಕದ ಅತಿಥ್ಯದಲ್ಲಿ ಅಕ್ಟೋಬರ್ 9 ಆದಿತ್ಯವಾರ ನಡೆಯಲಿದೆ ಕೆಸರುಡೊಂಜಿ ದಿನ ಕಾರ್ಯಕ್ರಮ

ತೆರಿಗೆ ನಿರ್ಧಾರ ಹೊಣೆಗಾರಿಕೆಯೂ ಮೊಟಕು:

ಇದುವರೆಗೂ ಗ್ರಾಮ ಪಂಚಾಯಿತಿ ನಿರ್ಣಯ ತೆಗೆದುಕೊಂಡು ನಂತರ ಪಂಚಾಯಿತಿ ನಿರ್ಣಯ ಸಂಖ್ಯೆ ದಿನಾಂಕ ನಮೂದಿಸಿ ಇ. ಸ್ವತ್ತು ತಂತ್ರಾಂಶದ ಮೂಲಕ ತೆರಿಗೆ ನಿರ್ಧಾರ ಪಟ್ಟಿಯನ್ನು ವಿತರಿಸಲಾಗುತ್ತಿತ್ತು ಪಂಚಾಯಿತಿ ಸಭೆಗಳು ಕಾಲಕಾಲಕ್ಕೆ ನಡೆಯದ ಕಾರಣ ನಮೂನೆ ವಿತರಿಸುವ ಸಂಪೂರ್ಣ ಅಧಿಕಾರವನ್ನು ಪಿಡಿಒಗಳಿಗೆ ನೀಡಲಾಗಿದೆ. ರಾಜ್ಯದಲ್ಲಿ 5963 ಗ್ರಾಮ ಪಂಚಾಯಿತಿಗಳಿದ್ದು 91.437 ಗ್ರಾಮ ಪಂಚಾಯಿತಿ ಸದಸ್ಯರಿದ್ದಾರೆ.

ಸದಸ್ಯರ ಅಧಿಕಾರವೂ ಮೊಟಕು
ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ ಗೃಹ ವಾಣಿಜ್ಯ ಕಟ್ಟಡ ಕಾಮಗಾರಿಗಳು ಕೈಗಾರಿಕೆ ಗಣಿಗಾರಿಕೆ ಅಂಗಡಿ ಹೋಟೆಲ್ ಮತ್ತಿತರ ವಾಣಿಜ್ಯ ವಹಿವಾಟುಗಳ ಆರಂಭಕ್ಕೆ ಪರವಾನಿಗೆ ಇ. ಸತ್ತು (ನಮೂನೆ 9 11ಎ 11 ಬಿ) ನೀಡುವ ಕುರಿತು ಗ್ರಾಮ ಪಂಚಾಯಿತಿ ಸದಸ್ಯರ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗುತ್ತಿತ್ತು ಪಂಚಾಯತ್ ರಾಜ್ ಕಾಯ್ದೆಯ 64 ರಿಂದ 70ರ ವರೆಗಿನ ನಿಯಮಗಳಿಗೆ ತಿದ್ದುಪಡಿ ತಂದು ಪರವಾನಿಗೆ ನೀಡುವ ಅಧಿಕಾರವನ್ನು ಪಿಡಿಒಗಳಿಗೆ ನೀಡಲಾಗಿದೆ. ನೀಡಿದ ನಂತರ ಸಭೆಯ ಗಮನಕ್ಕೆ ತರಲು ಸೂಚಿಸಲಾಗಿದೆ. ಗ್ರಾಮ ಪಂಚಾಯಿತಿ ಸಭೆಗಳು ಸಕಾಲದಲ್ಲಿ ನಡೆಯದ ಕಾರಣ ವಿಳಂಬ ತಪ್ಪಿಸಲು ಇಂತಹ ಕ್ರಮ
ಅನಿವಾರ್ಯ ಎಂದು ವಿವರಿಸಲಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist