ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಳಿಗೆ ಒಂದೇ ವಾರದಲ್ಲಿ ಕಾನ್ಪುರದ 98 ಜನ ಸಾವು: ಹೃದಯಾಘಾತದಿಂದ ಮರಣ; ನೂರಾರು ಮಂದಿ ಆಸ್ಪತ್ರೆಗೆ

Twitter
Facebook
LinkedIn
WhatsApp
whatsapp image 2022 03 20 at 14040 pm16478028851649185798 1

ನವದೆಹಲಿ: ಕಳೆದ 15 ದಿನಗಳಿಂದ ಉತ್ತರ ಭಾರತವನ್ನು ಆವರಿಸಿರುವ ಭಾರಿ ಚಳಿ ಮತ್ತು ಮಂಜು ಮುಸುಕಿದ ವಾತಾವರಣವು ಸದ್ದಿಲ್ಲದೆ ನೂರಾರು ಜನರ ಪ್ರಾಣ ಬಲಿ ಪಡೆದಿದೆ. ಉತ್ತರಪ್ರದೇಶದ ಕಾನ್ಪುರವೊಂದರಲ್ಲೇ ಕೇವಲ ಒಂದು ವಾರದ ಅವಧಿಯಲ್ಲಿ ಭಾರಿ ಚಳಿಯ ಕಾರಣ 98 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ವರದಿಗಳು ತಿಳಿಸಿವೆ.
ಕಾನ್ಪುರ ನಗರದ (Kanpur City) ಎಲ್‌ಪಿಎಸ್‌ ಇನ್‌ಸ್ಟಿಟ್ಯೂಟ್‌ ಆಫ್‌ ಕಾರ್ಡಿಯಾಲಜಿ ನೀಡಿರುವ ವರದಿ (Report) ಅನ್ವಯ ಕಳೆದೊಂದು ವಾರದಲ್ಲೇ ನಗರದಲ್ಲಿ 98 ಜನರು ಹೃದಯಾಘಾತ (Heart Attack) ಮತ್ತು ಮೆದುಳಿನ (Brain) ಸಮಸ್ಯೆಯಿಂದಾಗಿ ಮೃತಪಟ್ಟಿದ್ದಾರೆ. ಇನ್ನು ಕಾನ್ಪುರದ ಲಕ್ಷ್ಮೀಪತ್‌ ಸಿಂಘಾನಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಕಾರ್ಡಿಯಾಲಜಿ ಆಸ್ಪತ್ರೆ ನೀಡಿರುವ ಮಾಹಿತಿ ಅನ್ವಯ ಗುರುವಾರ ಒಂದೇ ದಿನ 723 ರೋಗಿಗಳು ಹೃದಯ ಸಂಬಂಧಿ ಸಮಸ್ಯೆ ವಿಷಯದಲ್ಲಿ ತುರ್ತು (Emergency) ಮತ್ತು ಹೊರರೋಗಿಗಳ ವಿಭಾಗದಲ್ಲಿ (Outpatient Department) ಚಿಕಿತ್ಸೆ ಪಡೆದಿದ್ದಾರೆ.

ನಗರದಲ್ಲಿ ಕಳೆದ 15 ದಿನಗಳಿಂದ ಕನಿಷ್ಠ ಉಷ್ಣಾಂಶ 4 ರಿಂದ 6 ಡಿಗ್ರಿ ಸೆಲ್ಸಿಯಸ್‌ ಆಸುಪಾಸಿನಲ್ಲಿದೆ. ತೀವ್ರ ಚಳಿಯಿಂದಾಗಿ ರಕ್ತದೊತ್ತಡದಲ್ಲಿ ಏರುಪೇರಾಗಿ, ರಕ್ತ ಹೆಪ್ಪುಗಟ್ಟಿ ಮಿದುಳು ಹಾಗೂ ಹೃದಯಾಘಾತ ಸಂಭವಿಸುತ್ತದೆ. ಚಳಿಯಿಂದಾಗಿ ಕೇವಲ ವೃದ್ಧರಷ್ಟೇ ಅಲ್ಲದೇ, ಮಧ್ಯವಯಸ್ಕರಿಗೂ ಹೃದಯ, ಮಿದುಳು ಆಘಾತ ಸಂಭವಿಸಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಭಾರೀ ಚಳಿ, ಮಂಜು:
ಈ ನಡುವೆ ಭಾನುವಾರವೂ ಜಮ್ಮು ಮತ್ತು ಕಾಶ್ಮೀರ, ದೆಹಲಿ, ಪಂಜಾಬ್‌, ಹರ್ಯಾಣ, ರಾಜಸ್ಥಾನ, ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಉಷ್ಣಾಂಶ ಭಾರೀ ಕುಸಿದಿದ್ದು ಸಾಮಾನ್ಯ ಜನಜೀವನದ ಮೇಲೆ ವ್ಯತ್ಯಯ ಬೀರಿದೆ. ಮಂಜು ಮುಸುಕಿದ ವಾತಾವರಣವಿರುವುದರಿಂದ ಗೋಚರತೆ ಪ್ರಮಾಣ ಭಾರೀ ಇಳಿಕೆಯಾಗಿತ್ತು. ಉತ್ತರ ಪ್ರದೇಶದ ಆಗ್ರಾ, ಪಂಜಾಬ್‌ನ ಭಠಿಂಡಾದಲ್ಲಿ ಗೋಚರತೆಯು ಶೂನ್ಯಕ್ಕೆ ತಲುಪಿತ್ತು. ಪರಿಣಾಮ ಭಾನುವಾರ 480ಕ್ಕೂ ಹೆಚ್ಚು ರೈಲುಗಳು ಓಡಾಟದಲ್ಲಿ ಏರುಪೇರಾಗಿದೆ. ಜೊತೆಗೆ 25 ವಿಮಾನಗಳ ಸಂಚಾರದಲ್ಲೂ ವ್ಯತ್ಯಯವಾಗಿದೆ.

ಕುಸಿತ ಉಷ್ಣಾಂಶ:
ಭಾನುವಾರ ಕಾಶ್ಮೀರದ ಗುಲ್ಮಾರ್ಗ್‌ನಲ್ಲಿ ಮೈನಸ್‌ 3.4 ಡಿಗ್ರಿ ಸೆಲ್ಶಿಯಸ್., ಪಹಲ್ಗಾಮ್‌ನಲ್ಲಿ ಮೈನಸ್‌ 2.8 ಡಿಗ್ರಿ ಸೆಲ್ಶಿಯಸ್, ಶ್ರೀನಗರದಲ್ಲಿ ಮೈನಸ್‌ 1 ಡಿಗ್ರಿ ಸೆಲ್ಶಿಯಸ್, ಖಾಸಿಗುಂಡ್‌ನಲ್ಲಿ ಮೈನಸ್‌ 1.3 ಡಿಗ್ರಿ ಸೆಲ್ಶಿಯಸ್, ಕೊಕರ್‌ನಾಗ್‌ನಲ್ಲಿ ಮೈಸನ್‌ 1.6 ಡಿಗ್ರಿ ಸೆಲ್ಶಿಯಸ್, ಕುಪ್ವಾರದಲ್ಲಿ ಮೈನಸ್‌ 0.4 ಡಿಗ್ರಿ ಸೆಲ್ಶಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಇನ್ನು ಹರ್ಯಾಣದ ಹಿಸ್ಸಾರ್‌ನಲ್ಲಿ 1.4 ಡಿಗ್ರಿ ಸೆಲ್ಶಿಯಸ್ ಪಂಜಾಬಿನ ಅದಮ್‌ಪುರದಲ್ಲಿ 2.8 ಡಿಗ್ರಿ ಸೆಲ್ಶಿಯಸ್, ರಾಜಸ್ಥಾನದ ಚುರುನಲ್ಲಿ ಮೈನಸ್‌ 0.5 ಡಿಗ್ರಿ ಸೆಲ್ಶಿಯಸ್, ಪಿಲಾನಿಯಲ್ಲಿ 1.5 ಡಿಗ್ರಿ ಸೆಲ್ಶಿಯಸ್, ಮಧ್ಯಪ್ರದೇಶದ ನೌಗಾಂಗ್‌ನಲ್ಲಿ ಮೈನಸ್‌ 1 ಡಿಗ್ರಿ ಸೆಲ್ಶಿಯಸ್, ಮತ್ತು ಉಮರಿಯಾದಲ್ಲಿ 1.5 ಡಿಗ್ರಿ ಸೆಲ್ಶಿಯಸ್, ದೆಹಲಿಯಲ್ಲಿ 1.4 ಡಿಗ್ರಿ ಸೆಲ್ಶಿಯಸ್‌ನಷ್ಟು ಉಷ್ಣಾಂಶ ದಾಖಲಾಗಿದೆ.

ಸಾವಿಗೆ ಏನು ಕಾರಣ..?
ತೀವ್ರ ಚಳಿಯಿಂದ ರಕ್ತದೊತ್ತಡದಲ್ಲಿ ಏರುಪೇರಾಗುತ್ತಿದೆ. ರಕ್ತ ಹೆಪ್ಪುಗಟ್ಟಿ ಮಿದುಳು, ಹೃದಯಕ್ಕೆ ಆಘಾತವಾಗಿ ಜನರು ಸಾವಿಗೀಡಾಗುತ್ತಿದ್ದಾರೆ. ವೃದ್ಧರಷ್ಟೇ ಅಲ್ಲದೆ ಮಧ್ಯವಯಸ್ಕರೂ ಹೃದಯಾಘಾತ, ಮೆದುಳಿನ ಸಮಸ್ಯೆಗೆ ಒಳಗಾಗುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ