ಮಂಗಳವಾರ, ಅಕ್ಟೋಬರ್ 3, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಚಾಮುಂಡಿಬೆಟ್ಟದ ಸಮೀಪ 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್‍ನಲ್ಲಿ ಬೆಂಕಿ!

Twitter
Facebook
LinkedIn
WhatsApp
Twitter data breach 2022 2

ಮೈಸೂರು: ಅರಮನೆ ನಗರಿ ಮೈಸೂರಿನಲ್ಲಿ ಬೆಳ್ಳಂಬೆಳಗ್ಗೆ ಭಾರೀ ಅನಾಹುತವೊಂದು ತಪ್ಪಿದ್ದು, ನಿಟ್ಟುಸಿರು ಬಿಡುವಂತಾಗಿದೆ.

ಹೌದು. ಚಾಮುಂಡಿಬೆಟ್ಟ (Chamundi Hills) ದ ಬಸ್‌ ನಿಲ್ದಾಣದ ಸಮೀಪ ಸುಮಾರು 50ಕ್ಕೂ ಹೆಚ್ಚು ಮಂದಿ ಪ್ರವಾಸಿಗರಿದ್ದ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಚಾಲಕನ ಸಮಯಪ್ರಜ್ಞೆಯಿಂದ ಅವಘಡ ತಪ್ಪಿದೆ. 

ಗುಜರಾತ್ (Gujrat) ನಿಂದ ಬಸ್‍ನಲ್ಲಿ ಪ್ರವಾಸಿಗರು ಚಾಮುಂಡಿಬೆಟ್ಟಕ್ಕೆ ಬಂದಿದ್ದರು. ಆದರೆ ಬೆಟ್ಟದ ಸಮೀಪ ಇರುವ ಬಸ್ (Bus Fire) ನಿಲ್ದಾಣದಲ್ಲಿ ಡಿಸೇಲ್ ಲೀಕೇಜ್ ನಿಂದ ಬಸ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಸ್ಸಿನ ಸೈಲೆನ್ಸರ್ ಪೈಪ್ ನಿಂದ ಇದ್ದಕ್ಕಿದ್ದ ಹಾಗೆ ಹೊಗೆ ಬರಲಾರಂಭಿಸಿದೆ. ಬಳಿಕ ಪೈಪ್ ನಿಂದ ಬೆಂಕಿ ಕಾಣಿಸಿಕೊಂಡಿದೆ.

ಇದನ್ನು ಗಮನಿಸಿದ ಚಾಲಕ ಕೂಡಲೇ ಬೆಂಕಿಯ ಸಂಪರ್ಕದ ವಯರ್ ಗಳನ್ನು ಕಟ್ ಮಾಡಿದ್ದಾರೆ. ಇತ್ತ ಪ್ರವಾಸಿಗರನ್ನು ತಕ್ಷಣವೇ ಬಸ್ಸಿನಿಂದ ಕೆಳಗಿಳಿಸಿದ್ದಾರೆ. ಪರಿಣಾಮ ಪ್ರಯಾಣಿಕರು ದೊಡ್ಡ ಅವಘಡದಿಂದ ಪಾರಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ