ಮಂಗಳವಾರ, ಫೆಬ್ರವರಿ 18, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಟೀಂ ಇಂಡಿಯಾ ತಂಡದ ಕೋಚ್ ಹುದ್ದೆಗಾಗಿ ಗೌತಮ್ ಗಂಭೀರ್ ಹೆಸರು ಮುಂಚೂಣಿಯಲ್ಲಿ; ಕೆಕೆಆರ್ ಮೆಂಟರ್ ಹುದ್ದೆಗೆ ಗುಡ್ ಬೈ ಹೇಳ್ತಾರಾ ಗಂಭೀರ್.?

Twitter
Facebook
LinkedIn
WhatsApp
ಟೀಂ ಇಂಡಿಯಾ ತಂಡದ ಕೋಚ್ ಹುದ್ದೆಗಾಗಿ ಗೌತಮ್ ಗಂಭೀರ್ ಹೆಸರು ಮುಂಚೂಣಿಯಲ್ಲಿ; ಕೆಕೆಆರ್ ಮೆಂಟರ್ ಹುದ್ದೆಗೆ ಗುಡ್ ಬೈ ಹೇಳ್ತಾರಾ ಗಂಭೀರ್.?

ನವದೆಹಲಿ: ಐಪಿಎಲ್‌ನಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ಚಾಂಪಿಯನ್‌ ಆದ ಬಳಿಕ ತಂಡದ ಮೆಂಟರ್​ ಆಗಿರುವ ಗೌತಮ್‌ ಗಂಭೀರ್‌ ಅವರ ಬೇಡಿಕೆಯ ರೇಟಿಂಗ್​ ಏರಿದೆ. ಭಾರತದ ಮಾಜಿ ಆಟಗಾರನ ಮಾರ್ಗದರ್ಶನ ಕೆಕೆಆರ್​ ಮೂರನೇ ಐಪಿಎಲ್​ ಟ್ರೋಫಿ ಗೆಲ್ಲಲು ಪ್ರಮುಖ ಪಾತ್ರ ವಹಿಸಿತು ಎಂಬುದು ಸದ್ಯದ ವಿಶ್ಲೇಷಣೆ.

ಗಂಭೀರ್​ ಅವರು ಈ ಹಿಂದೆ ತಂಡದ ನಾಯಕರಾಗಿದ್ದಾಗ ಎರಡು ಟ್ರೋಫಿಗಳನ್ನು ಗೆದ್ದಿದ್ದರು. ಇದೀಗ ಮೆಂಟರ್ ಆದ ಬಳಿಕ ದಶಕದ ನಂತರ ತಂಡ ಟ್ರೋಫಿ ಗೆಲ್ಲುವಂತೆ ಮಾಡಿದ್ದಾರೆ. ಈ ಗೆಲುವಿನ ನಂತರ ಅವರು ಟೀಂ ಇಂಡಿಯಾದ ಮುಖ್ಯ ತರಬೇತುದಾರ ಆಗಲಿದ್ದಾರೆ ಎಂಬ ಸುದ್ದಿ ಜೋರಾಗಿದೆ.

ರಾಹುಲ್​ ದ್ರಾವಿಡ್​ ಅವರು ಭಾರತ ತಂಡದ ಮುಖ್ಯ ಕೋಚ್ ಹುದ್ದೆಯಿಂದ ಕೆಳಗಿಳಿಯುತ್ತಿದ್ದು, ಅವರ ಜಾಗಕ್ಕೆ ಹೊಸ ಕೋಚ್​ಗಾಗಿ ಬಿಸಿಸಿಐ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಹಲವರು ಹೆಸರುಗಳು ಕೇಳಿಬಂದಿವೆ. ಈ ರೇಸ್​ನಲ್ಲಿ ಗಂಭೀರ್ ಮುಂಚೂಣಿಯಲ್ಲಿದ್ದಾರೆ ಎಂದು ಹೇಳಲಾಗಿದೆ. ಆದರೆ, ಐಪಿಎಲ್​ನ 17ನೇ ಋತುವಿನಲ್ಲಿ ಕೆಕೆಆರ್​ ಮೆಂಟರ್ ಆಗಿರುವ ಗಂಭೀರ್, ಭಾರತ ತಂಡದ ಮುಖ್ಯ ಕೋಚ್ ಆಗಲು ಫ್ರಾಂಚೈಸಿ ತೊರೆಯುತ್ತಾರೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಖಾಲಿ ಚೆಕ್​ ನೀಡಿ ಸ್ವಾಗತಿಸಿದ್ದ ಶಾರೂಖ್​?: ದಶಕದಿಂದ ಪ್ರಶಸ್ತಿ ಬರ ಎದುರಿಸುತ್ತಿದ್ದ ಕೆಕೆಆರ್ ತಂಡಕ್ಕೆ ಗೌತಮ್​ ಗಂಭೀರ್​ ಅವರನ್ನು ಮಾಲೀಕ ಶಾರೂಖ್​ ಖಾನ್ ಖಾಲಿ ಚೆಕ್​ ನೀಡಿ ಬರ ಮಾಡಿಕೊಂಡಿದ್ದರು ಎಂದು ವರದಿಯಾಗಿದೆ. ತಂಡದ ಜೊತೆ 10 ವರ್ಷ ಉಳಿಯಬೇಕು ಎಂದು ಖಾನ್​ ಮನವಿ ಮಾಡಿದ್ದರು ಎನ್ನಲಾಗಿದೆ. ಇದೀಗ ತಂಡ ಪ್ರಶಸ್ತಿ ಗೆದ್ದ ಸಂಭ್ರಮದಲ್ಲಿದೆ. ಇಂತಿಪ್ಪ ಗಂಭೀರ್​ ಅವರು ಭಾರತ ತಂಡಕ್ಕಾಗಿ ಫ್ರಾಂಚೈಸಿ ಬಿಡುವ ನಿರ್ಧಾರ ತಳೆಯಲಿದ್ದಾರೆ ಎಂಬುದು ಮಿಲಿಯನ್​ ಡಾಲರ್​ ಪ್ರಶ್ನೆಯಾಗಿದೆ.

2012, 2014 ರಲ್ಲಿ ಕೆಕೆಆರ್​ ತಂಡದ ನಾಯಕರಾಗಿ ಎರಡು ಐಪಿಎಲ್​ ಟ್ರೋಫಿಗಳನ್ನು ಗಂಭೀರ್​ ಗೆಲ್ಲಿಸಿಕೊಟ್ಟಿದ್ದಾರೆ. ಇದೀಗ ಮೆಂಟರ್​ ಆಗಿಯೂ ಸಕ್ಸಸ್​ ಕಂಡಿದ್ದಾರೆ. ಕೋಲ್ಕತ್ತಾ ಅಭಿಮಾನಿಗಳು ಕೂಡ ಮಾಜಿ ಕ್ರಿಕೆಟಿಗನ ಮೇಲೆ ಅಪಾರ ಭರವಸೆ ಇಟ್ಟುಕೊಂಡಿದ್ದಾರೆ. ಹೀಗಾಗಿ ಅವರು ತಂಡ ತೊರೆಯದಿರಲಿ ಎಂದು ಒತ್ತಾಯಿಸಿದ್ದಾರೆ.

ಈ ಮಧ್ಯೆ, ಐಪಿಎಲ್​ ಫೈನಲ್​ ಪಂದ್ಯದ ನಂತರ ಗೌತಮ್​ ಗಂಭೀರ್ ಅವರನ್ನು ಬಿಸಿಸಿಐ ಅಧಿಕಾರಿಗಳು ಚೆನ್ನೈನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಅಂದಹಾಗೆ ಭಾರತ ತಂಡದ ಮುಖ್ಯ ಕೋಚ್ ಹುದ್ದೆಗೆ ಅರ್ಜಿ ಸಲ್ಲಿಸಲು ಸೋಮವಾರ ಕೊನೆಯ ದಿನವಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist