ಟ್ಯೂಷನ್ ಗೆ ತೆರಳಿ ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಕುಮಾರಧಾರ ನದಿಯಲ್ಲಿ ಪತ್ತೆ
Twitter
Facebook
LinkedIn
WhatsApp
![All about coconut tree 34](https://urtv24.com/wp-content/uploads/2023/03/All-about-coconut-tree-34.jpg)
ಕಡಬ: ಟ್ಯೂಷನ್ ಗೆಂದು ತೆರಳಿ ನಾಪತ್ತೆಯಾಗಿದ್ದ ಹತ್ತನೇ ತರಗತಿಯ ಬಾಲಕನ ಮೃತದೇಹವು ಕುಮಾರಧಾರಾ ನದಿಯ ನಾಕೂರು ಗಯ ಎಂಬಲ್ಲಿ ಗುರುವಾರದಂದು ಪತ್ತೆಯಾಗಿದೆ.
ಕೋಡಿಂಬಾಳ ಗ್ರಾಮದ ಗುಂಡಿಮಜಲು ನಿವಾಸಿ ಮಂಜುನಾಥ ಶೆಟ್ಟಿ ಅವರ ಪುತ್ರ, ಕಡಬದ ಖಾಸಗಿ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿ ಅದ್ವೈತ್ ಶೆಟ್ಟಿ (15) ಎಂಬಾತ ಬುಧವಾರದಂದು ಟ್ಯೂಷನ್ ಗೆಂದು ತೆರಳಿ ಆ ಬಳಿಕ ಮನೆಗೆ ಹಿಂತಿರುಗದೆ ನಾಪತ್ತೆಯಾಗಿದ್ದಾನೆ.
ಮನೆಯವರು ಹಾಗೂ ಸ್ಥಳೀಯರು ಹುಡುಕಾಡಿದಾಗ ಬಾಲಕನ ಬ್ಯಾಗ್ ಹಾಗೂ ಐಡಿ ಕಾರ್ಡ್ ಕುಮಾರಧಾರ ನದಿಯ ತಟದಲ್ಲಿ ನಾಕೂರು ಗಯ ಎಂಬಲ್ಲಿ ಕಂಡುಬಂದಿತ್ತು.