ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ತಂದೆ-ತಾಯಿ ಸಮಾಧಿ ಬಳಿ ದುನಿಯಾ ವಿಜಯ್ ಹುಟ್ಟುಹಬ್ಬ; ರಿಲೀಸ್ ಆಯ್ತು ‘ಭೀಮ’ ಫಸ್ಟ್ ಲುಕ್

Twitter
Facebook
LinkedIn
WhatsApp
maxresdefault 1

ಸೆಲೆಬ್ರಿಟಿಗಳು ಬರ್ತ್​​ಡೇನ ಅದ್ದೂರಿಯಾಗಿ ಆಚರಿಸಿಕೊಳ್ಳುತ್ತಾರೆ. ಕೆಲವು ಬಾರಿ ಕುಟುಂಬದ ಜತೆ ಹುಟ್ಟುಹಬ್ಬ ಆಚರಿಸಿದರೆ ಇನ್ನೂ ಕೆಲವು ಸಲ ಅಭಿಮಾನಿಗಳ ಜತೆ ಸಮಯ ಕಳೆಯುತ್ತಾರೆ. ದುನಿಯಾ ವಿಜಯ್ (Duniya Vijay) ಅವರು  ಭಿನ್ನವಾಗಿ ಬರ್ತ್​ಡೇ (ಜನವರಿ 20) ಆಚರಿಸಿಕೊಂಡಿದ್ದಾರೆ. ತಂದೆ-ತಾಯಿ ಸಮಾಧಿ ಬಳಿ ಅವರು ಹುಟ್ಟುಹಬ್ಬ ಮಾಡಿಕೊಂಡಿದ್ದಾರೆ. ಈ ವಿಶೇಷ ದಿನದಂದು ದುನಿಯಾ ವಿಜಯ್​ ಮುಂದಿನ ಸಿನಿಮಾ ‘ಭೀಮ’ದ (Bheema Movie) ಫಸ್ಟ್​ ಲುಕ್ ಟೀಸರ್ ರಿಲೀಸ್ ಆಗಿದೆ.

‘ಸಲಗ’ ಸಿನಿಮಾ ಮೂಲಕ ಡೈರೆಕ್ಟರ್​ ಆಗಿ ದುನಿಯಾ ವಿಜಯ್ ಯಶಸ್ಸು ಕಂಡರು. ಪಕ್ಕಾ ರೌಡಿಸಂ ಕಥೆಯನ್ನು ಈ ಸಿನಿಮಾದಲ್ಲಿ ಹೇಳಲಾಗಿತ್ತು. ಈ ಚಿತ್ರ ಸೂಪರ್ ಹಿಟ್ ಆಯಿತು. ನಿರ್ದೇಶನದ ಜತೆಗೆ ಅವರು ಆ ಸಿನಿಮಾದಲ್ಲಿ ನಟಿಸಿದ್ದರು. ಈಗ ದುನಿಯಾ ವಿಜಯ್ ಅವರು ‘ಭೀಮ’ ಮೂಲಕ ಮತ್ತೆ ಪ್ರೇಕ್ಷಕರ ಎದುರು ಬರುತ್ತಿದ್ದಾರೆ. ಅವರ ನಿರ್ದೇಶನದ ಎರಡನೇ ಸಿನಿಮಾ ಇದು.

ದುನಿಯಾ ವಿಜಯ್ ಬರ್ತ್​ಡೇ ಪ್ರಯುಕ್ತ ‘ಭೀಮ’ ಸಿನಿಮಾದ ಫಸ್ಟ್ ಲುಕ್ ಟೀಸರ್ ರಿಲೀಸ್ ಮಾಡಲಾಗಿದೆ. ಈ ಟೀಸರ್​​ನಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ಮಚ್ಚುಗಳು ಝಳಪಿಸಿವೆ. ಇದು ಕೂಡ ರೌಡಿಸಂ ಕಥೆ ಎಂಬುದು ಟೀಸರ್​ನಲ್ಲಿ ಸ್ಪಷ್ಟವಾಗುತ್ತದೆ. ಟೀಸರ್ ನೋಡಿದವರು ಇಷ್ಪಟ್ಟಿದ್ದಾರೆ. ಈ ಸಿನಿಮಾ ಯಶಸ್ಸು ಕಾಣಲಿ ಎಂದು ಹಾರೈಸುತ್ತಿದ್ದಾರೆ.

ವಿಶೇಷವಾಗಿ ಬರ್ತ್​ಡೇ ಆಚರಿಸಿದ ದುನಿಯಾ ವಿಜಯ್

ದುನಿಯಾ ವಿಜಯ್ ಅವರು ಈ ಬಾರಿ ಬೆಂಗಳೂರು ಬಿಟ್ಟು ಹುಟ್ಟೂರಾದ ಆನೇಕಲ್​ನ ಕುಂಬಾರನಹಳ್ಳಿಗೆ ತೆರಳಿದ್ದಾರೆ. ಅಲ್ಲಿರುವ ಅಪ್ಪ-ಅಮ್ಮನ ಸಮಾಧಿ ಬಳಿ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ. ತಂದೆ-ತಾಯಿ ಮೇಲೆ ದುನಿಯಾ ವಿಜಯ್​ಗೆ ಅಪಾರ ಪ್ರೀತಿ ಇತ್ತು. ಅವರನ್ನು ಕಳೆದುಕೊಂಡ ನಂತರವೂ ಅವರು ಪ್ರೀತಿ ಮಾಡುವುದನ್ನು ನಿಲ್ಲಿಸಿಲ್ಲ ಎಂಬುದಕ್ಕೆ ಈ ಬರ್ತ್​ಡೇ ಆಚರಣೆಯೇ ಸಾಕ್ಷಿ.

‘ತಂದೆ ತಾಯಿ ಇಲ್ಲದೇ ಇರುವುದಕ್ಕೆ ನೋವಿದೆ. ಅವರಿಗೆ ನಾನು ಕಟ್ಟಿರುವ ಸಣ್ಣ ದೇವಸ್ಥಾನ ಇದು. ಆ ಜಾಗದಲ್ಲಿ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುತ್ತಿರುವುದು ಖುಷಿ ಇದೆ. ಇಲ್ಲಿ ಅಭಿಮಾನಿಗಳು ಬಂದಿದ್ದಾರೆ. ಅವರ್ಯಾರಿಗೂ ನೋವಾಗದಂತೆ ನೋಡಿಕೊಳ್ಳುವುದು ನನ್ನ ಜವಾಬ್ದಾರಿ. ಅವರು ನನಗೋಸ್ಕರ ಬರ್ತಾರೆ’ ಎಂದಿದ್ದಾರೆ ದುನಿಯಾ ವಿಜಯ್.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ