ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ದೇವಸ್ಥಾನದಲ್ಲಿ ಮಹಿಳೆ ಮೇಲೆ ಹಲ್ಲೆ ಪ್ರಕರಣ: ಧರ್ಮದರ್ಶಿ ಮುನಿಕೃಷ್ಣ ಅರೆಸ್ಟ್

Twitter
Facebook
LinkedIn
WhatsApp
New Project 2023 01 08T065326.783

ಬೆಂಗಳೂರು: ದೇವಸ್ಥಾನದಲ್ಲಿ ಮಹಿಳೆ ಮೇಲೆ ಧರ್ಮದರ್ಶಿಯಿಂದ ಹಲ್ಲೆ ನಡೆದ ಪ್ರಕರಣ ಸಂಬಂಧ ಆರೋಪಿ ಮುನಿಕೃಷ್ಣನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಗರದ ಅಮೃತಹಳ್ಳಿಯ ಲಕ್ಷ್ಮಿ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ಕಳೆದ ಡಿ.21 ರಂದು ಪೂಜೆಗೆ ಹೋಗಿದ್ದ ಹೇಮಾವತಿ ಎಂಬ ಮಹಿಳೆಯ ಮೇಲೆ ಆಡಳಿತ ಮಂಡಳಿಯವರು ದೇವರೆದುರೇ ಮಹಿಳೆಗೆ ಹಿಗ್ಗಾ ಮುಗ್ಗ ಥಳಿಸಿ, ಜಡೆ ಹಿಡಿದು ಹೊರೆಗೆ ಎಳೆದೊಯ್ದಿದ್ದ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿತ್ತು. ಈ ಪ್ರಕರಣ ತಡವಾಗಿ ಬೆಳಕಿಗೆ ಬಂದಿತ್ತು. ನನ್ನನ್ನು ದೇವಸ್ಥಾನದ ಒಳಗೆ ಬಿಡಲು ನಿರಾಕರಿಸಿ ಹಲ್ಲೆ ಮಾಡಿದ್ದು, ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದರು, ಈ ವಿಚಾರ ತಡವಾಗಿ ಪತಿಗೆ ತಿಳಿಸಿದ್ದ ಹೇಮಾವತಿ ಅಮೃತಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಪ್ರಕರಣ ಬೆಳಕಿಗೆ ಬಂದು ಠಾಣೆ ಮೆಟ್ಟಿಲೇರುತ್ತಿದ್ದಂತೆ ಧರ್ಮದರ್ಶಿ ಮುನಿಕೃಷ್ಣ ಪೊಲೀರ ಮುಂದೆ ಹೇಳಿದ್ದೇ ಬೇರೆ. ನನ್ನ ಮೇಲೆ ದೇವರು ಬರುತ್ತದೆ. ವೆಂಕಟೇಶ್ವರ ನನ್ನ ಪತಿ ಗರ್ಭಗುಡಿಯಲ್ಲಿ ನಾನು ವೆಂಕಟೇಶ್ವರನ ಪಕ್ಕ ಕುಳಿತುಕೊಳ್ಳಬೇಕು ಎಂದು ದೇವಸ್ಥಾನದಲ್ಲಿ ಪಟ್ಟು ಹಿಡಿದಿದ್ದ ಮಹಿಳೆಗೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ಅರ್ಚಕರ ಮೇಲೆಯೇ ಉಗಿದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾಳೆ ಎಂದು ಆರೋಪಿಸಿದ್ದಾರೆ.

ಎಷ್ಟೇ ಮನವಿ ಮಾಡಿಕೊಂಡರೂ ಮಹಿಳೆಗೆ ಕೇಳದಿದ್ದಾಗ ಆಡಳಿತ ಮಂಡಳಿಯವರು ಸೇರಿ ಥಳಿಸಿದ್ದೇವೆ, ಜೊತೆಗೆ ಘಟನೆ ನಡೆದ ಕೆಲ ದಿನಗಳ ನಂತರ ದೇವಾಲಯಕ್ಕೆ ಬಂದು ಕ್ಷಮೆ ಕೇಳಿದ್ದಳು ಎಂದಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಮುನಿಕೃಷ್ಣನನ್ನು ಬಂಧಿಸಿದ ಅಮೃತಹಳ್ಳಿ ಠಾಣೆ ಪೊಲೀಸರು, ವಿಚಾರಣೆಯನ್ನು ಮುಂದುವಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ