ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನನಸಾಗಲಿದೆ ಪುನೀತ್ ಕನಸು ಕುರಿತು ಅಶ್ವಿನಿ ಮಹತ್ವದ ಘೋಷಣೆ.

Twitter
Facebook
LinkedIn
WhatsApp
ನನಸಾಗಲಿದೆ ಪುನೀತ್ ಕನಸು ಕುರಿತು ಅಶ್ವಿನಿ ಮಹತ್ವದ ಘೋಷಣೆ.

ಪುನೀತ್ ರಾಜ್ ಕುಮಾರ್ ಸ್ಯಾಂಡಲ್ ವುಡ್ ನ ಕನಸುಗಾರ ಹೀರೋ. ತಮ್ಮ‌ ಕೆರಿಯರ್ ಜೊತೆ ಚಿತ್ರರಂಗದ ಕಿರಿಯರಿಗಾಗಿಯೂ ಹಲವು ಪ್ರಾಜೆಕ್ಟ್ ಸಿದ್ಧಪಡಿಸಿದ್ದರು. ಪ್ರೊಡಕ್ಷನ್ ಹೌಸ್ (PRK) ಮೂಲಕ ಹೊಸಬರಿಗೆ ಆಶ್ರಯತಾಣವಾಗಿದ್ದರು. ಆದರೇ ಎಲ್ಲ ಕನಸುಗಳನ್ನು ಅರ್ಧಕ್ಕೆ ಬಿಟ್ಟು ಎದ್ದು ಹೋಗಿದ್ದಾರೆ. ಈಗ ಈ ಕನಸುಗಳನ್ನು ನನಸಾಗಿಸಲು ಅಶ್ವಿನಿ ಸಿದ್ಧವಾಗಿದ್ದು ಅಭಿಮಾನಿಗಳಿಗೆ ಸಿಹಿಸುದ್ದಿ‌ನೀಡಿದ್ದಾರೆ.

ಪುನೀತ್ ನಿಧನದ ಬಳಿಕ ಅವರ ಎಲ್ಲ ವ್ಯವಹಾರಗಳನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ನೋಡಿಕೊಳ್ಳುತ್ತಿದ್ದಾರೆ. ಇದಕ್ಕೆ ಪಿಆರ್ ಕೆ ಪ್ರೊಡಕ್ಷನ್ ಹೌಸ್ ಕೂಡ ಹೊರತಲ್ಲ. ಪಿಆರ್ ಕೆ ಪ್ರೊಡಕ್ಷನ್ ಹೌಸ್ ಮೂಲಕ ಪುನೀತ್ ಕಂಡಿದ್ದ ಕನಸುಗಳನ್ನು ನನಸಾಗಿಸಲು ಅಶ್ವಿನಿ ಮುಂದಾಗಿದ್ದು ಮಹತ್ವದ ಘೋಷಣೆ ಮಾಡಿದ್ದಾರೆ.

ವೈಲ್ಡ್ ಕರ್ನಾಟಕ ಡಾಕ್ಯುಮೆಂಟರಿ ಮಾಡಿದ್ದ ಅಮೋಘವರ್ಷ ಜೊತೆ ಸೇರಿ ಪುನೀತ್ ರಾಜ್ ಕುಮಾರ್ ಕರ್ನಾಟಕದ ಬಗ್ಗೆ ಸಾಕ್ಷ್ಯಚಿತ್ರವೊಂದನ್ನು ಸಿದ್ಧಪಡಿಸಲು ಮುಂದಾಗಿದ್ದರು. ಈ ಸಾಕ್ಷ್ಯಚಿತ್ರಕ್ಕೆ ಗಂಧದಗುಡಿ ಎಂದು ಹೆಸರಿಡಲಾಗಿತ್ತು. ಈ ಸಾಕ್ಷ್ಯ ಚಿತ್ರವನ್ನು ಪುನೀತ್ ಸ್ವತಃ ರಾಜ್ಯದ ಎಲ್ಲೆಡೆ ಓಡಾಡಿ ಶೂಟ್ ಮಾಡಿಸಿದ್ದರು. ಈ ಸಾಕ್ಷ್ಯ ಚಿತ್ರದಲ್ಲಿ ಪುನೀತ್ ಕೂಡ ಕಾಣಿಸಿಕೊಂಡಿದ್ದರು.

ಎಲ್ಲ ಅಂದುಕೊಂಡಂತೆ ಆಗಿದ್ದರೇ ನವೆಂಬರ್ ೧ ಕನ್ನಡ ರಾಜ್ಯೋತ್ಸವದಂದು ಗಂಧದಗುಡಿಯ ಟೀಸರ್ ಕೂಡಬಿಡುಗಡೆಯಾಗಬೇಕಿತ್ತು. ಆದರೆ ಪುನೀತ್ ಅಗಲಿಕೆ ಈ ಎಲ್ಲ ಕನಸು ಗಳನ್ನು ಅರ್ಧಕ್ಕೆ ಬಿಟ್ಟು ಹೋಗುವಂತೆ ಮಾಡಿತ್ತು. ಗಂಧದಗುಡಿ ಟೀಸರ್ ರಿಲೀಸ್ ಬಗ್ಗೆ ತುಂಬ ಎಕ್ಸೈಟ್ ಆಗಿದ್ದ ಪುನೀತ್ ನಿಧನದ ಕೆಲವು ದಿನ ಮೊದಲು ದಶಕಗಳ ಹಿಂದೆ ಕಥೆಯೊಂದು ಹುಟ್ಟಿತ್ತು.ನಮ್ಮ ಜನ ನಮ್ಮ ನೆಲದ ಹಿರಿಮೆಯನ್ನು ಮೆರೆದಿತ್ತು. ನಮ್ಮ ಅಡವಿಯ ಹಸಿರನ್ನು ಜಗತ್ತಿಗೆ ಹರಡಿತ್ತು. ಪೀಳಿಗೆಗೆ ಸ್ಪೂರ್ತಿ ನೀಡಿ ಅಜರಾಮರವಾಗಿತ್ತು. ಆ ಚರಿತ್ರೆ ಮರಳುವ ಸಮಯವೀಗ ಬಂದಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದರು.

ಅಲ್ಲದೇ ಇದಕ್ಕಾಗಿ‌ ನವೆಂಬರ್ 1 ರವರೆಗೆ ಕಾಯುವಂತೆಯೂ ಹೇಳಿದ್ದರು. ಆದರೆ ನವೆಂಬರ್ 1 ಬೆಳಗಾಗುವ ಹೊತ್ತಿಗೆ ಪುನೀತ್ ನೆನಪಿನ ಬುತ್ತಿ ಸೇರಿದ್ದರು. ಈಗ‌ ಈ ಕನಸಿಗೆ ಮತ್ತೆ ಜೀವ ಬಂದಿದೆ. ಪುನೀತ್ ಪತ್ನಿ ಅಶ್ವಿನಿ, ಈ ಬಗ್ಗೆ ಪಿಆರ್ ಕೆ ಪ್ರೊಡಕ್ಷನ್ ಕಡೆಯಿಂದ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದು, ಅಪ್ಪು ಅವರ ಕನಸೊಂದು 1/11/2021 ರಂದು ಬೆಳಕು ಕಾಣಬೇಕಿತ್ತು. ಆದರೆ ಈ ಕನಸಿಗಿದು ಅಲ್ಪವಿರಾಮವಷ್ಟೇ. ಅದನ್ನು ಅವರಿಷ್ಟದಂತೆ ನನಸಾಗಿಸುವ ಜವಾಬ್ದಾರಿ ನಮ್ಮದು. ಇಲ್ಲಿಯವರೆಗೆ ನೀವು ತೋರಿದ ಸಂಯಮ ಮತ್ತು ಸಹಕಾರಕ್ಕೆ ನಾವು ಆಭಾರಿ ಎಂದು ಅಶ್ವಿನಿ ಟ್ವೀಟ್ ಮಾಡಿದ್ದಾರೆ. ಹೀಗಾಗಿ ಪುನೀತ್ ಗಂಧದಗುಡಿ ಸಾಕ್ಷ್ಯಚಿತ್ರ‌ ಸದ್ಯವೇ ತೆರೆಕಾಣಲಿದೆ ಎಂಬ ಭರವಸೆ ಮೂಡಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು