ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಮ್ಮೂರಿಗೆ ಬಾರ್ ಬೇಡವೆಂದು, ಬಾರನ್ನೇ ಪುಡಿಪುಡಿ ಮಾಡಿದ ಮಹಿಳೆಯರು!

Twitter
Facebook
LinkedIn
WhatsApp
ನಮ್ಮೂರಿಗೆ ಬಾರ್ ಬೇಡವೆಂದು, ಬಾರನ್ನೇ ಪುಡಿಪುಡಿ ಮಾಡಿದ ಮಹಿಳೆಯರು!

ಚಿಕ್ಕಮಗಳೂರು: ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಹತ್ತಾರು ಮಹಿಳೆಯರು ಬಾರ್​​ಗೆ ನುಗ್ಗಿ ಅಲ್ಲಿದ್ದ ಕುರ್ಚಿಗಳನ್ನು ಪುಡಿ, ಪುಡಿ ಮಾಡಿ ಧ್ವಂಸ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಮ್ಮೆದೊಡ್ಡಿ ಸಮೀಪದ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ.
ನಮ್ಮೂರಿಗೆ ಬಾರ್ ಬೇಡ ಅಂತ ಮುಸ್ಲಾಪುರ ಗ್ರಾಮದಲ್ಲಿ ಕಳೆದ ಒಂದೂವರೆ ತಿಂಗಳಿಂದ ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದರು. 

ಬಾರ್ ಓಪನ್ ವಿರುದ್ಧ ಹಳ್ಳಿ ಹೆಂಗಸರೆಲ್ಲಾ ಒಂದಾಗಿ ಗಾಡಿ ಮಾಡಿಕೊಂಡು ಬಂದು ಜಿಲ್ಲಾಧಿಕಾರಿಯವರಲ್ಲಿ, ನಮ್ಮೂರಿಗೆ ಬಾರ್ ಬೇಡ ಅಂತ ಮನವಿ ಮಾಡಿದ್ದರು. ಆದ್ರೆ, ಹಳ್ಳಿ ಹೆಂಗಸರ ಮಾತನ್ನು ಯಾರೂ ಕೇಳಲಿಲ್ಲ. ಈ ಮಧ್ಯೆಯೂ ಬಾರ್ ಓಪನ್ ಮಾಡಲು ಮಾಲೀಕ ಮುಂದಾದ ಹಿನ್ನೆಲೆ ಬಾರ್ ಓಪನ್ ಮಾಡದಂತೆ ಗ್ರಾಮ ಪಂಚಾಯತ್ ನೋಟಿಸ್ ನೀಡಿತ್ತು. ಪೊಲೀಸರು ಬಾರ್ ಓಪನ್ ಮಾಡುವಂತಿಲ್ಲ ಎಂದು ಸೂಚಿಸಿದ್ದರು. ಈ ಮಧ್ಯೆಯೂ ಕಳೆದ ನಾಲ್ಕೈದು ದಿನಗಳಿಂದ ಬಾರ್ ಓಪನ್ ಸಿದ್ಧತೆ ನಡೆದಿತ್ತು. ಬಾಗಿಲು ತೆಗೆಯದೆ ಬಂದವರಿಂದ ಹಣ ಪಡೆದುಕೊಂಡು ಎಣ್ಣೆ ನೀಡುತ್ತಿದ್ದರು. ಸದ್ಯದಲ್ಲೇ ಬಾರ್ ಓಪನ್‍ಗೆ ಮಾಲೀಕ ಕೂಡ ಸಿದ್ಧತೆ ನಡೆಸಿಕೊಂಡಿದ್ದರು. ಹಾಗಾಗಿ, ಹಳ್ಳಿ ಹೆಂಗಸರು ಬಾರ್‍ಗೆ ನುಗ್ಗಿ ಧ್ವಂಸ ಮಾಡಿದ್ದಾರೆ. 

ಕೈಗೆ ಸಿಕ್ಕ ವಸ್ತುಗಳನ್ನ ಪುಡಿ, ಪುಡಿ ಮಾಡಿದ್ದಾರೆ. ಬಾರ್ ಆರಂಭದ ಬಗ್ಗೆ ಪ್ರಶ್ನಿಸಲು ಹೋದ ಮಹಿಳೆಯರ ಮೇಲೆ ಹಲ್ಲೆ ಕೂಡ ಮಾಡಿದ್ದರಂತೆ. ಅವರೇ ಹೊಡೆದು ಅವರೇ ಹೋಗಿ ದೂರು ನೀಡಿದ್ದರಂತೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದವರನ್ನು ಪೊಲೀಸರು ಏಕಾಏಕಿ ಜೀಪ್‍ನಲ್ಲಿ ತುಂಬಿಕೊಂಡು ಹೋಗಿದ್ದಾರೆಂದು ಸ್ಥಳಿಯರು ಆರೋಪಿಸಿದ್ದಾರೆ. ಬಾರ್ ವಿರುದ್ಧ ಮಹಿಳೆಯರು ರೆಬಲ್ ಆಗಿದ್ದು, ಗಂಡಂದಿರಿಗಾಗಿ, ಮಕ್ಕಳಿಗಾಗಿ, ಭವಿಷ್ಯಕ್ಕಾಗಿ ಬಾರ್ ಬೇಡ ಎಂದು ಉಗ್ರಸ್ವರೂಪ ತಾಳಿದ ಮಹಿಳೆಯರು ಬಾರ್ ಧ್ವಂಸ ಮಾಡಿ ಮತ್ತೆ ಓಪನ್ ಮಾಡಿದ್ರೆ ಬೆಂಕಿ ಇಡ್ತೀವಿ ಅಂತ ಎಚ್ಚರಿಸಿದ್ದಾರೆ.

ನಮಗೆ ಯಾರೂ ಸಪೋರ್ಟ್ ಮಾಡುತ್ತಿಲ್ಲ. ಪೊಲೀಸರು, ರಾಜಕಾರಣಿಗಳು ಎಲ್ಲಾ ಅವರಿಗೆ ಸಪೋರ್ಟ್ ಮಾಡುತ್ತಿದ್ದಾರೆ ನಮಗೆ ನ್ಯಾಯ ಕೊಡಿಸಿ ಅಂತ ಸ್ಥಳೀಯರು ಮನವಿ ಮಾಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು