ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನಾನಿದ್ದಿದ್ದರೆ ಉಕ್ರೇನ್‌ ಯುದ್ಧ ಆಗುತ್ತಲೇ ಇರಲಿಲ್ಲ. ನಾನು ಯುದ್ಧ ಆಗಲು ಬಿಡುತ್ತಿರಲಿಲ್ಲ ಎಂದು ಹೇಳಿಕೆ ನೀಡಿದ ಡೊನಾಲ್ಡ್ ಟ್ರಂಪ್

Twitter
Facebook
LinkedIn
WhatsApp
ನಾನಿದ್ದಿದ್ದರೆ ಉಕ್ರೇನ್‌ ಯುದ್ಧ ಆಗುತ್ತಲೇ ಇರಲಿಲ್ಲ. ನಾನು ಯುದ್ಧ ಆಗಲು ಬಿಡುತ್ತಿರಲಿಲ್ಲ ಎಂದು ಹೇಳಿಕೆ ನೀಡಿದ ಡೊನಾಲ್ಡ್ ಟ್ರಂಪ್

ವಾಷಿಂಗ್ಟನ್‌ (ಫೆ. 28): ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಪರಾಭವಗೊಂಡ ಬಳಿಕ ತೆರೆಮರೆಗೆ ಸರಿದಿದ್ದ ಮಾಜಿ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ (Donald Trump) ಪ್ರತ್ಯಕ್ಷರಾಗಿದ್ದು, ಉಕ್ರೇನ್‌ ಯುದ್ಧವನ್ನು ಮುಂದಿಟ್ಟುಕೊಂಡು ಹಾಲಿ ಅಧ್ಯಕ್ಷ ಜೋ ಬೈಡೆನ್‌ ವಿರುದ್ಧ ಹಿಗ್ಗಾಮುಗ್ಗಾ ವಾಕ್‌ ಪ್ರಹಾರ ನಡೆಸಿದ್ದಾರೆ. ನಾನು ಸ್ಪರ್ಧಿಸಿದ್ದ ಚುನಾವಣೆಯಲ್ಲಿ ಅಕ್ರಮ ನಡೆಯದೆ ಹೋಗಿದ್ದರೆ ಉಕ್ರೇನ್‌ನಲ್ಲಿ ನಡೆಯುತ್ತಿರುವ ಭಯಾನಕ ದುರ್ಘಟನೆ ಎಂದಿಗೂ ಘಟಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಫ್ಲೋರಿಡಾದ ಒರ್ಲಾಂಡೋದಲ್ಲಿ ಶನಿವಾರ ನಡೆದ ರಿಪಬ್ಲಿಕನ್‌ ಪಕ್ಷದ ಸಮ್ಮೇಳನದಲ್ಲಿ ಮಾತನಾಡಿದ ಅವರು, ಉಕ್ರೇನ್‌ ಮೇಲೆ ರಷ್ಯಾ ಆಕ್ರಮಣ ಮಾಡಿದ್ದಕ್ಕೆ ಜೋ ಬೈಡೆನ್‌ ನಾಯಕತ್ವ ದುರ್ಬಲವಾಗಿರುವುದೇ ಕಾರಣ ಎಂದರು.
ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಬುದ್ಧಿವಂತ. ಅದು ಸಮಸ್ಯೆ ಅಲ್ಲ. ಆದರೆ ಸಮಸ್ಯೆ ಇರುವುದು ನಮ್ಮ ನಾಯಕರು ಪೆದ್ದರಾಗಿರುವುದರಿಂದ. ರಷ್ಯಾವನ್ನು ಕಡೆ ಪಕ್ಷ ಮಾನಸಿಕವಾಗಿಯಾದರೂ ತುಂಡು ತುಂಡು ಮಾಡುವ ಬದಲಿಗೆ ನ್ಯಾಟೋ ಪಡೆಗಳು ಬುದ್ಧಿವಂತನ ಎದುರಿಗಿರುವ ವ್ಯಕ್ತಿಯತ್ತ ನೋಡಿ ನಿರ್ಬಂಧಗಳನ್ನು ಹೇರುತ್ತಿವೆ ಎಂದು ಲೇವಡಿ ಮಾಡಿದರು. ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝೆಲೆನ್‌ಸ್ಕಿ ಅವರನ್ನು ಧೈರ್ಯಶಾಲಿ ವ್ಯಕ್ತಿ ಎಂದು ಬಣ್ಣಿಸಿದರು.

 

ರಷ್ಯಾ ಮೇಲೆ ಮತ್ತಷ್ಟುಆರ್ಥಿಕ ನಿರ್ಬಂಧಕ್ಕೆ ಸಿದ್ಧತೆ: ಉಕ್ರೇನ್‌ ಮೇಲೆ ಅಪ್ರಚೋದಿತ ದಾಳಿ ನಡೆಸಿರುವ ರಷ್ಯಾದ ಹಣಕಾಸು ವ್ಯವಸ್ಥೆಗೆ ದೊಡ್ಡ ಮಟ್ಟಿನ ಹೊಡೆತ ನೀಡಲು, ಜಾಗತಿಕ ಸಮುದಾಯ ಸಮ್ಮತಿ ಸೂಚಿಸಿವೆ. ಹೀಗಾಗಿ ಮುಂದಿನ ದಿನಗಳಲ್ಲಿ ರಷ್ಯಾದ ಕೇಂದ್ರೀಯ ಬ್ಯಾಂಕ್‌ ಮತ್ತು ಈಗಾಗಲೇ ನಿರ್ಬಂಧಕ್ಕೆ ಒಳಗಾಗಿರುವ ಹಲವು ಬ್ಯಾಂಕ್‌ಗಳು ದೊಡ್ಡ ಸಮಸ್ಯೆ ಎದುರಿಸಬೇಕಾಗಿ ಬರಲಿದೆ. ಅಲ್ಲದೆ ಈ ಬೆಳವಣಿಗೆ ರಷ್ಯಾದ ಆಮದು ಮತ್ತು ರಫ್ತು ವಲಯಕ್ಕೂ ಭಾರೀ ಪೆಟ್ಟು ನೀಡಲಿದೆ ಎನ್ನಲಾಗಿದೆ.
ಸ್ವಿಫ್ಟ್‌ ಶಾಕ್‌: ಭಾರತ ಸೇರಿದಂತೆ ವಿಶ್ವದ 200 ದೇಶಗಳ 11000ಕ್ಕೂ ಹೆಚ್ಚು ಬ್ಯಾಂಕ್‌ಗಳು ಸ್ವಿಫ್ಟ್‌ (ಸೊಸೈಟಿ ಫಾರ್‌ ವಲ್ಡ್‌ರ್‍ವೈಡ್‌ ಇಂಟರ್‌ಬ್ಯಾಂಕ್‌ ಪೈನಾನ್ಷಿಯಲ್‌ ಟೆಲಿಕಮ್ಯುನಿಕೇಷನ್‌) ಎಂಬ ಹಣಕಾಸು ವ್ಯವಸ್ಥೆಯನ್ನು ಬಳಸುತ್ತಿವೆ. ಈ ವ್ಯವಸ್ಥೆಯು ಎಲ್ಲಾ ಬ್ಯಾಂಕ್‌ಗಳಿಗೆ ದೇಶದಿಂದ ದೇಶಕ್ಕೆ ಹಣ ವರ್ಗಾವಣೆ ಕುರಿತು ತ್ವರಿತ ಸಂದೇಶ ನೀಡುವ ಮೂಲಕ, ಹಣ ವರ್ಗಾವಣೆ ಪ್ರಕ್ರಿಯೆ ಸುಲಲಿತವಾಗಿರುವಂತೆ ನೋಡಿಕೊಳ್ಳುತ್ತದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist