ಮಂಗಳವಾರ, ಅಕ್ಟೋಬರ್ 3, 2023
ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!-ರಸ್ತೆ ಬದಿ ಮಲಗಿದ್ದ 10 ಮಂದಿ ಕಾರ್ಮಿಕರ ಮೇಲೆ ಹರಿದ ಟ್ರಕ್ ; 5 ಮಂದಿ ಮೃತ್ಯು - ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ಗಾಯಕಿ ಮಂಗ್ಲಿ

Twitter
Facebook
LinkedIn
WhatsApp
1 2

ತೆಲುಗು, ಕನ್ನಡ ಸೇರಿದಂತೆ ಹಲವು ಭಾಷೆಗಳಲ್ಲಿ ಸೂಪರ್ ಹಿಟ್ ಹಾಡುಗಳನ್ನು ಹೇಳಿರುವ ಮಂಗ್ಲಿ, ಇದೀಗ ನಾಯಕಿಯಾಗಿ ಬಣ್ಣ ಹಚ್ಚುತ್ತಿದ್ದಾರೆ. ಗಾಯಕಿಯಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಈ ಗಾಯಕಿ, ಮೊದಲ ಬಾರಿಗೆ ನಾಯಕಿಯಾಗಿ ಪ್ರವೇಶ ಮಾಡುತ್ತಿದ್ದಾರೆ. ಪತ್ರಕರ್ತ, ನಿರ್ದೇಶಕ ಚಕ್ರವರ್ತಿ ಚಂದ್ರಚೂಡ ನಿರ್ದೇಶನದಲ್ಲಿ ಮೂಡಿ ಬರಲಿರುವ ಪಾದರಾಯ ಚಿತ್ರಕ್ಕೆ ಇವರು ನಾಯಕಿಯಾಗಿ ಆಯ್ಕೆಯಾಗಿದ್ದಾರೆ.

No photo description available.

ಸದ್ಯ ವೇದ ಸಿನಿಮಾದ ‘ಗಿಲ್ಲಕ್ಕೋ’ ಹಾಡಿನ ಮೂಲಕ ಮನೆಮಾತಾಗಿರುವ ಮಂಗ್ಲಿ, ತ್ರಿಬಲ್ ರೈಡಿಂಗ್, ವಿಕ್ರಾಂತ್ ರೋಣ, ದಿಪ್ ಪಸಂದ್, ರಾಬರ್ಟ್ ಸೇರಿದಂತೆ ಹಲವಾರು ಕನ್ನಡ ಸಿನಿಮಾಗಳ ಹಾಡಿಗೆ ದನಿಯಾಗಿದ್ದಾರೆ. ಅಷ್ಟೂ ಹಾಡುಗಳು ಸೂಪರ್ ಹಿಟ್ ಎನ್ನುವುದು ವಿಶೇಷ. ಇದೇ ಮೊದಲ ಬಾರಿಗೆ ಅವರು ನಾಯಕಿಯಾಗಿ ನಟಿಸುತ್ತಿದ್ದು, ನಾಗಶೇಖರ್ ಈ ಸಿನಿಮಾದ ನಾಯಕ. 

May be an image of 1 person, standing, sunglasses, outdoors and text that says 'DK'

ಇದೊಂದು ನೈಜ ಘಟನೆಯನ್ನು ಆಧರಿಸಿದ ಸಿನಿಮಾವಾಗಿದ್ದು, 2013-14ರಲ್ಲಿ ನಡೆದ ಘಟನೆಯನ್ನು ಚಿತ್ರವಾಗಿಸುತ್ತಿದ್ದಾರೆ ನಿರ್ದೇಶಕ ಚಕ್ರವರ್ತಿ ಚಂದ್ರಚೂಡ. ಈ ಘಟನೆಯು ಆರು ರಾಜ್ಯಗಳಿಗೆ ಸಂಬಂಧಿಸಿದ್ದಾಗಿದ್ದು, ಅದನ್ನು ಹೊಸ ರೀತಿಯಲ್ಲಿ ಹೇಳುವ ಪ್ರಯತ್ನ ಮಾಡುತ್ತಿದ್ದಾರಂತೆ. ಚಿತ್ರಕಥೆ, ಸಂಭಾಷಣೆ ಜೊತೆಗೆ ನಿರ್ದೇಶನವನ್ನೂ ಮಾಡುತ್ತಿರುವ ಅವರು, ಈ ಚಿತ್ರಕ್ಕೆ ಪಾದರಾಯ ಎಂದು ಹೆಸರಿಡುವುದಕ್ಕೂ ಕಾರಣವಿದೆಯಂತೆ. ಅದನ್ನು ಸಿನಿಮಾದಲ್ಲಿಯೇ ನೋಡಿ ಎನ್ನುತ್ತಾರೆ.

No photo description available.

ಈಗಾಗಲೇ ಪಾತ್ರಕ್ಕಾಗಿ ನಾಗಶೇಖರ್ ತಯಾರಿ ಮಾಡಿಕೊಳ್ಳುತ್ತಿದ್ದಾರೆ. ತಯಾರಿಗಾಗಿಯೇ ಅವರು ಹಲವು ದಿನಗಳಿಂದ ಅಂಜನಾದ್ರಿ ಬೆಟ್ಟದಲ್ಲಿ ಬೀಡುಬಿಟ್ಟಿದ್ದಾರಂತೆ. ಈ ಬೆಟ್ಟದಲ್ಲಿ ನಡೆಯುವ ಪೂಜ ಪುನಸ್ಕಾರಗಳಲ್ಲೂ ಅವರು ಭಾಗಿಯಾಗಿದ್ದಾರೆ. ಅಲ್ಲದೇ, ಹನುಮನ ಮಾಲೆಯನ್ನೂ ಧರಿಸಿ, ಅಲ್ಲಿನ ಆಚಾರ ವಿಚಾರಗಳನ್ನು ತಿಳಿದುಕೊಳ್ಳುತ್ತಿದ್ದಾರಂತೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ