ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ನೆರೆ ರಾಜ್ಯದಲ್ಲಿ ನಂದಿನಿಗೆ ವಿರೋಧ: ಕರ್ನಾಟಕದಲ್ಲಿ ಅಮುಲ್ ಪರ - ವಿರೋಧ ಚರ್ಚೆ ವೇಳೆ ಕೇರಳ ಕ್ಯಾತೆ

Twitter
Facebook
LinkedIn
WhatsApp
Homogenised Toned Milk 500ml 0

ತಿರುವನಂತಪುರ (ಏಪ್ರಿಲ್ 15, 2023): ಗುಜರಾತ್‌ ಮೂಲದ ಅಮುಲ್‌ ಸಂಸ್ಥೆಗೆ ತನ್ನ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ನೀಡಿದ್ದಕ್ಕೆ ಕರ್ನಾಟಕದಲ್ಲಿ ಭಾರೀ ವಿರೋಧ ವ್ಯಕ್ತವಾಗಿರುವ ಹೊತ್ತಿನಲ್ಲೇ, ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಒಕ್ಕೂಟ (ಕೆಎಂಎಫ್‌) ತನ್ನ ನಂದಿನ ಉತ್ಪನ್ನವನ್ನು ಕೇರಳದಲ್ಲಿ ಮಾರಾಟ ಮಾಡಲು ಮುಂದಾಗಿರುವುದಕ್ಕೆ ಸ್ಥಳೀಯ ಹಾಲು ಒಕ್ಕೂಟ ತೀವ್ರ ವಿರೋಧ ವ್ಯಕ್ತಪಡಿಸಿದೆ.

ಕೆಎಂಎಫ್‌ (KMF) ಕೆಲ ತಿಂಗಳ ಹಿಂದೆ ಮಲಪ್ಪುರಂ (Malappuram) ಜಿಲ್ಲೆಯ ಮಂಜೇರಿ ಮತ್ತು ಕೊಚ್ಚಿಯ ವ್ಯಿಟ್ಟಿಲ್ಲದಲ್ಲಿ ಎರಡು ಹಾಲು, ಡೈರಿ ಉತ್ಪನ್ನಗಳ ಮಾರಾಟ ಮಳಿಗೆ ತೆರೆದಿದೆ. ಜೊತೆಗೆ ಇನ್ನೂ 100 ಫ್ರಾಂಚೈಸಿಗಳನ್ನು ತೆರೆಯಲು ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.

ಇದಕ್ಕೆ ವಿರೋಧ ವ್ಯಕ್ತಪಡಿಸಿರುವ ಮಿಲ್ಮಾ (Milma) ಹೆಸರಲ್ಲಿ ಕೇರಳದಲ್ಲಿ (Kerala) ಹಾಲು ಮಾರಾಟ ಮಾಡುವ ‘ಕೇರಳ ಸಹಕಾರ ಹಾಲು ಮಾರುಕಟ್ಟೆ ಒಕ್ಕೂಟ’(ಕೆಸಿಎಂಎಂಎಫ್‌) (Kerala Co -operative Milk Marketing Federation) ಅಧ್ಯಕ್ಷ ಕೆ.ಎಸ್‌.ಮಣಿ, ‘ಅನಾರೋಗ್ಯಕರ ಸ್ಪರ್ಧೆ ಏರ್ಪಡುತ್ತದೆ ಎಂಬ ಕಾರಣಕ್ಕಾಗಿಯೇ ಒಂದು ರಾಜ್ಯದ ಹಾಲು ಸಹಕಾರಿ ಒಕ್ಕೂಟಗಳು ಇನ್ನೊಂದು ರಾಜ್ಯಕ್ಕೆ ಪ್ರವೇಶ ಮಾಡಬಾರದು ಎಂಬ ಅಲಿಖಿತ ನಿಯಮವನ್ನು ಹಿಂದಿನಿಂದಲೂ ಪಾಲಿಸಿಕೊಂಡು ಬರಲಾಗುತ್ತಿದೆ. ಹೀಗಾಗಿಯೇ ನಮ್ಮ ಬಳಿ ಹೆಚ್ಚುವರಿ ಹಾಲು ಇದ್ದರೂ ನಾವು ನೆರೆ ರಾಜ್ಯವನ್ನು ಪ್ರವೇಶ ಮಾಡಿರಲಿಲ್ಲ. ಹೀಗಿರುವಾಗ ಕೇರಳದಲ್ಲಿ ತನ್ನ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಮಾರಾಟ ಮಾಡುವ ಕೆಎಂಫ್‌ನ ನಿರ್ಧಾರ ಅನೈತಿಕ ಮತ್ತು ಸಹಕಾರ ತತ್ವಗಳಿಗೆ ವಿರುದ್ಧವಾದುದು’ ಎಂದು ಕಿಡಿಕಾರಿದ್ದಾರೆ.

ಜೊತೆಗೆ ‘ಇತರೆ ರಾಜ್ಯಗಳು ಕೇರಳದಲ್ಲಿ ಮಾರಾಟ ಮಾಡುವುದು ಸ್ಥಳೀಯರಿಗೆ ತಾಜಾ ಹಾಲಿನ ಅವಕಾಶವನ್ನು ನಿರಾಕರಿಸುತ್ತದೆ. ಈ ಕುರಿತು ಕೆಎಂಎಫ್‌ ಮುಖ್ಯಸ್ಥರಿಗೆ ನಾನು ಈಗಾಗಲೇ ಪತ್ರ ಬರೆದಿರುವೆನಾದರೂ ಅದಕ್ಕೆ ಉತ್ತರ ಬಂದಿಲ್ಲ’ ಎಂದು ಮಣಿ ಹೇಳಿದ್ದಾರೆ. ಇದೇ ವೇಳೆ, ‘ರಾಜ್ಯದಲ್ಲಿ ಹಲವು ಸಮಯಗಳಿಂದ ತನ್ನ ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವ ಅಮುಲ್‌ಗೆ ನಾವು ವಿರೋಧವೇನೂ ಮಾಡಿಲ್ಲ’ ಎಂದೂ ಮಣಿ ಹೇಳಿದ್ದಾರೆ.

ಕೇರಳದ ತಕರಾರೇನು..?

  • ಕೆಲ ತಿಂಗಳ ಹಿಂದೆ ಮಲಪ್ಪುರಂ, ಕೊಚ್ಚಿಯಲ್ಲಿ ಎರಡು ನಂದಿನಿ ಬೂತ್‌ ಸ್ಥಾಪನೆ
  • ಕೇರಳದಲ್ಲಿ ಇನ್ನೂ 100 ಬೂತ್‌ ಸ್ಥಾಪನೆಗೆ ಫ್ರಾಂಚೈಸಿ ಆಹ್ವಾನಿಸಿದ ಕೆಎಂಎಫ್‌
  • ಕೇರಳದಲ್ಲಿ ಈಗಾಗಲೇ ಸಹಕಾರಿ ಒಕ್ಕೂಟದ ಮಿಲ್ಮಾ ಹಾಲು ಮಾರಾಟವಾಗುತ್ತಿದೆ
  • ಹೀಗಾಗಿ ಕೆಎಂಎಫ್‌ ಕೇರಳಕ್ಕೆ ಪ್ರವೇಶಿಸಿರುವುದು ಸಹಕಾರ ತತ್ವಗಳಿಗೆ ವಿರುದ್ಧ 
  • ಕರ್ನಾಟಕದಲ್ಲಿ ಅಮುಲ್‌ ವಿರೋಧಿಸಿ, ಕೇರಳಕ್ಕೆ ಕೆಎಂಎಫ್‌ ಬಂದಿರುವುದು ಏಕೆ
  • ನಮ್ಮಲ್ಲಿ ಹೆಚ್ಚುವರಿ ಹಾಲು ಇದ್ದರೂ ನಾವು ಬೇರೆ ರಾಜ್ಯಕ್ಕೆ ಹೋಗಿಲ್ಲ: ಕೆಎಂಎಂಎಫ್‌

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist