ಶುಕ್ರವಾರ, ಜೂನ್ 9, 2023
ಸೈಕ್ಲೋನ್‌ ಎಫೆಕ್ಟ್‌; ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಭಾರೀ ಮಳೆ ಸಾಧ್ಯತೆ-ಬಾಬಾಬುಡನಗಿರಿಯಲ್ಲಿ ಶೌಚಾಲಯ ಸಮಸ್ಯೆ; ರಾಷ್ಟ್ರಪತಿಗೆ ಪತ್ರ ಬರೆದ ಮಹಿಳೆ-ಕಾರ್ಕಳ: ದ್ವಿಚಕ್ರ ವಾಹನ ಹಾಗೂ ಬಸ್ ಮಧ್ಯೆ ಅಪಘಾತ ಬೈಕ್ ಸವಾರ ಕಾರ್ತಿಕ್ ಸ್ಥಳದಲ್ಲೇ ಸಾವು-ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ದುಬೈನಲ್ಲಿ ಇಳಿಕೆ ಕಂಡ ಚಿನ್ನದ ದರ; ದೇಶ ವಿದೇಶದಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಹೇಗಿದೆ ನೋಡಿ-ಆಸೀಸ್‌ ವೇಗದ ದಾಳಿಗೆ ಕಂಗಾಲಾದ ಭಾರತಕ್ಕೆ ಇನ್ನಿಂಗ್ಸ್ ಹಿನ್ನಡೆ ಭೀತಿ; ಅಜಿಂಕ್ಯ ರಹಾನೆ ಆಸರೆ!-ಭಯಾನಕ ಮರ್ಡರ್; ಸಂಗಾತಿಯ ಶರೀರವನ್ನು ಪೀಸ್ ಪೀಸ್ ಮಾಡಿ ಕುಕ್ಕರ್ ನಲ್ಲಿ ಬೇಯಿಸಿದ ಕ್ರೂರಿ ಪ್ರೇಮಿ..!-ಕಾಂಗ್ರೆಸ್ ಸರ್ಕಾರಕ್ಕೆ 18 ಸಲಹೆಗಳನ್ನ ಕೊಟ್ಟ ಶಿಕ್ಷಣ ತಜ್ಞ ಪ್ರೊ ಎಂಆರ್ ​ದೊರೆಸ್ವಾಮಿ-ಸುಧಾಕರ್​​ನಿಂದಲೇ ನಾನು ಸೋತಿದ್ದು; ಎಂಟಿಬಿ ನಾಗರಾಜ್ ನೇರ ಆರೋಪ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಆರೋಪಿ ಆತ್ಮಹತ್ಯೆ; ನಾಲ್ವರು ಪೊಲೀಸರು ಅಮಾನತು!

Twitter
Facebook
LinkedIn
WhatsApp
ಪೊಲೀಸ್‌ ಠಾಣೆಯಲ್ಲಿ ಅತ್ಯಾಚಾರ ಆರೋಪಿ ಆತ್ಮಹತ್ಯೆ; ನಾಲ್ವರು ಪೊಲೀಸರು ಅಮಾನತು!

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯೊಬ್ಬ ಸಿಂದಗಿ ಪೊಲೀಸ್‌ ಠಾಣೆಯ ಶೌಚಾಲಯದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.
ಸಿಂದಗಿ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಸಂಗಮೇಶ್ ಹೊಸಮನಿ ಹಾಗೂ ಪೇದಗಳಾದ ಹೆಚ್.ಸಿ.ಮಂತ್ರಿ, ಗುರುರಾಜ ಮಶಿಹಾಳ ಮತ್ತು ಆನಂದ ಪಾಟೀಲ್ ಎಂಬ ಅಧಿಕಾರಿಗಳನ್ನು ರಾಷ್ಟ್ರೀಯ ಮಾನವ ಹಕ್ಕುಗಳ ನಿಯಮಗಳ ಅಡಿಯಲ್ಲಿ ಅಮಾನತುಗೊಳಿಸಲಾಗಿದೆ ಎಂದು ವಿಜಯಪುರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆನಂದ್ ಕುಮಾರ್ ತಿಳಿಸಿದ್ದಾರೆ.
ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪದಲ್ಲಿ ದೇವೇಂದ್ರ ಸಂಗೋಗಿ ಎಂಬಾತನನ್ನು ಆಗಸ್ಟ್ 28ರಂದು ಸಿಂದಗಿ ಠಾಣೆಯ ಪೊಲೀಸರು ಬಂಧಿಸಿದ್ದರು. ಆರೋಪಿ ಆಗಸ್ಟ್‌ 29ರಂದು ಪೊಲೀಸ್‌ ಠಾಣೆಯ ಶೌಚಾಲಯದಲ್ಲಿ ತನ್ನ ಪ್ಯಾಂಟ್‌ನಿಂದ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ.
ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಆತ ಸಾವನ್ನಪ್ಪಿದ್ದಾನೆ. ಈ ಪ್ರಕರಣವನ್ನು ಲಾಕಪ್ ಡೆತ್ ಎಂಬ ಆರೋಪಗಳು ಕೇಳಿಬಂದಿದ್ದವು. ಇದೀಗ ಈ ಪ್ರಕರಣ ಸಂಬಂಧ ನಾಲ್ವರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು