ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಡತನದಲ್ಲಿ ಬೆ೦ದು ಹೋಗಿದ್ದ ಟಿಕೆಟ್ ಕಲೆಕ್ಟರ್ ರೇವತಿ ಒಲಿಂಪಿಕ್ಸ್ ಗೆ ಆಯ್ಕೆ!!

Twitter
Facebook
LinkedIn
WhatsApp
ಬಡತನದಲ್ಲಿ ಬೆ೦ದು ಹೋಗಿದ್ದ ಟಿಕೆಟ್ ಕಲೆಕ್ಟರ್ ರೇವತಿ ಒಲಿಂಪಿಕ್ಸ್ ಗೆ ಆಯ್ಕೆ!!

ತಮಿಳುನಾಡು:ಬಡತನ ಮೆಟ್ಟಿ ನಿಂತು ಟೋಕಿಯೋ ಒಲಿಂಪಿಕ್ಸ್ ಗೆ ಟಿಕೆಟ್ ಕಲೆಕ್ಟರ್​ ತಮಿಳುನಾಡಿನ ಮಧುರೈ ನಿವಾಸಿ ರೇವತಿ ವೀರಮಣಿ ಆಯ್ಕೆಯಾಗುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಜುಲೈ 23ರಿಂದ ನಡೆಯಲಿರುವ ಜಪಾನ್​ನ ಟೋಕಿಯೋದಲ್ಲಿ ಒಲಿಂಪಿಕ್ಸ್​ ಗೆ ಭಾರತದಿಂದ ನೂರಾರು ಅಥ್ಲೀಟ್​ಗಳು ಪ್ರಯಾಣ ಬೆಳೆಸಲು ಸಜ್ಜಾಗಿದ್ದಾರೆ. ಇದೀಗ ದಕ್ಷಿಣ ರೈಲ್ವೇ ಟಿಕೆಟ್​ ಕಲೆಕ್ಟರ್ ರೇವತಿ ವೀರಮಣಿ ಆಯ್ಕೆಯಾಗಿದ್ದು ಭಾರತವನ್ನು ಪ್ರತಿನಿಧಿಸಲಿದ್ದಾರೆಂದು ರೈಲ್ವೆ ಇಲಾಖೆ ಟ್ವೀಟ್ ಮಾಡಿದೆ.

ತಮ್ಮ ಚಿಕ್ಕ ವಯಸ್ಸಿನಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ ರೇವತಿ ವೀರಮಣಿ ಅಜ್ಜಿ ಮನೆಯಲ್ಲಿ ಬೆಳೆದಿದ್ದಾರೆ. ದಿನದ ಒಂದು ಹೊತ್ತು ಊಟಕ್ಕೂ ಕಷ್ಟ ಪಟ್ಟಿದ್ದಾರೆ.  ಶಾಲೆಯಲ್ಲಿ ಕ್ರೀಡೆಯ ಬಗ್ಗೆ ಹೆಚ್ಚು ಒಲವು ಹೊಂದಿದ್ದ ರೇವತಿ ವೀರಮಣಿ ಅವರು ಅನೇಕ ಸ್ಪರ್ಧೆಗಳಲ್ಲಿ ಭಾಗವಹಿಸಿ ಪ್ರಶಸ್ತಿಗಳನ್ನು ಗೆಲ್ಲುತ್ತಿದ್ದರು. 12ನೇ ತರಗತಿಯಲ್ಲಿದ್ದಾಗ ರಾಜ್ಯ ಮಟ್ಟದ 100 ಮೀಟರ್​ ರೇಸ್​ನಲ್ಲಿ ಭಾಗಿಯಾಗಿದ್ದರು.

ಇವರ ಪ್ರತಿಭೆ ಗುರುತಿಸಿದ ಕೋಚ್​ ಕೆ. ಕಣ್ಣನ್​ ಇವರಿಗೆ ಸಲಹೆ ನೀಡುವ ಜೊತೆಗೆ ಆರ್ಥಿಕವಾಗಿ ಸಹಾಯ ಮಾಡುತ್ತಾರೆ. ಇದರ ಫಲವಾಗಿ 2016ರಲ್ಲಿ ನಡೆದ ಜೂನಿಯರ್​​ ರಾಷ್ಟ್ರೀಯ ಓಟದಲ್ಲಿ 100 ಹಾಗೂ 200 ಮೀಟರ್​ನಲ್ಲಿ ಬೆಳ್ಳಿ ಪದಕ ಗೆಲ್ಲುತ್ತಾರೆ. ಇದಾದ ಬಳಿಕ 2019ರಲ್ಲಿ ಏಷ್ಯನ್​ ಚಾಂಪಿಯನ್ಸ್​​ನಲ್ಲಿ 4X100 ಮೀಟರ್​ ರಿಲೇಯಲ್ಲಿ 4ನೇ ಸ್ಥಾನ ಪಡೆದುಕೊಳ್ಳುತ್ತಾರೆ.

ಇದಾದ ಬಳಿಕ 2019ರಲ್ಲೇ ರೈಲ್ವೇ ಇಲಾಖೆಯಲ್ಲಿ ಕೆಲಸ ಪಡೆದುಕೊಂಡು ಅಭ್ಯಾಸ ಆರಂಭಿಸಿರುವ ರೇವತಿ ಸದ್ಯ ಟೋಕಿಯೋ ಒಲಿಂಪಿಕ್ಸ್​ನಲ್ಲಿ ಅವಕಾಶ ಪಡೆದುಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಸ್ಟಾರ್​ ಆಟಗಾರ್ತಿ ಹಿಮಾದಾಸ್​ ಒಲಿಂಪಿಕ್ಸ್​ನಿಂದ ಹೊರಬಿದ್ದಿದ್ದಾರೆ.

ರೇವತಿ ವೀರಮಣಿ ಅವರೊಂದಿಗೆ ಸುಭಾ ವೆಂಕಟೇಶನ್ ಮತ್ತು ಎಸ್. ಶ್ರೀಮತಿ ರೇವತಿ ದಕ್ಷಿಣ ರೈಲ್ವೆಯ ಮಧುರೈ ವಿಭಾಗದಲ್ಲಿ ವಾಣಿಜ್ಯ ಗುಮಾಸ್ತ-ಕಮ್-ಟಿಕೆಟ್ ಸಂಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮಂಗಳವಾರ ಐದು ಕ್ರೀಡಾಪಟುಗಳಿಗೆ 5 ಲಕ್ಷ ರೂ. ಪ್ರೋತ್ಸಾಹ ಧನ ಘೋಷಿಸಿ ಪ್ರೋತ್ಸಾಹ ನೀಡಿದ್ದಾರೆ.
“ಮೊದಲ ಬಾರಿಗೆ, ತಮಿಳುನಾಡಿನ ಕ್ರೀಡಾಪಟು ಒಲಿಂಪಿಕ್ಸ್ಗೆ ಅರ್ಹತೆ ಪಡೆದಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು