ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಬಾರಿ ಎಡ್ಡೆ ಗೊಬ್ಬಿಯ’ ಸೂರ್ಯ ಎಂದ ರಾಹುಲ್ ; 'ಚೂರ್ ತುಳು ಕಲ್ಪಾವೊಡು ಆರೆಗ್ ನನ' ಎಂದ ದೀವಿಶಾ ಶೆಟ್ಟಿ

Twitter
Facebook
LinkedIn
WhatsApp
SURYAKUMAR YADAV 4 1

ರಾಜ್​ಕೋಟ್​ನ ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ಶನಿವಾರ ಸಿಕ್ಸ್​ಗಳ ಸುರಿಮಳೆಯಾಗಿತ್ತು. ಹೀಗೆ ಸಿಕ್ಸ್​-ಫೋರ್​ಗಳ ಮೂಲಕ ಅಬ್ಬರಿಸಿದ್ದು ಮತ್ಯಾರೂ ಅಲ್ಲ, ಕ್ರಿಕೆಟ್​ ಅಂಗಳದ ಹೊಸ 360 ಡಿಗ್ರಿ ಸೂರ್ಯಕುಮಾರ್ ಯಾದವ್. 4ನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದ ಸೂರ್ಯ ಅಕ್ಷರಶಃ ಅಬ್ಬರಿಸಿ ಶ್ರೀಲಂಕಾ ಬೌಲರ್​ಗಳ ಬೆಂಡೆತ್ತಿದ್ದರು.

ಪರಿಣಾಮ ಕೇವಲ 45 ಎಸೆತಗಳಲ್ಲಿ ಸ್ಪೋಟಕ ಶತಕ ಮೂಡಿಬಂತು. ಈ ಸೆಂಚುರಿ ಬಳಿಕ ಕೂಡ ಆರ್ಭಟ ಮುಂದುವರೆಸಿದ ಸೂರ್ಯಕುಮಾರ್ ಯಾದವ್ ಅಂತಿಮವಾಗಿ 51 ಎಸೆತಗಳಲ್ಲಿ 9 ಸಿಕ್ಸ್​ ಹಾಗೂ 7 ಫೋರ್​ನೊಂದಿಗೆ ಅಜೇಯ 112 ರನ್​ ಚಚ್ಚಿದರು. ಅಷ್ಟೇ ಅಲ್ಲದೆ ಟೀಮ್ ಇಂಡಿಯಾ ಪರ ವೇಗದ ಟಿ20 ಶತಕ ಬಾರಿಸಿದ 2ನೇ ಬ್ಯಾಟರ್​ ಎನಿಸಿಕೊಂಡರು. ಅದು ಕೂಡ ಕೆಎಲ್ ರಾಹುಲ್ ಅವರನ್ನು ಹಿಂದಿಕ್ಕುವ ಮೂಲಕ ಎಂಬುದು ವಿಶೇಷ.

DIVISHA SHETTY

ಸೂರ್ಯನ ಈ ಸಿಡಿಲಬ್ಬರನ್ನು ಕೆಎಲ್ ರಾಹುಲ್ ಕೂಡ ಹೊಗಳಿರುವುದು ವಿಶೇಷ. ಅದು ಕೂಡ ಸ್ಥಳೀಯ ಭಾಷೆ ತುಳುವಿನಲ್ಲೇ ಶ್ಲಾಘಿಸುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.

ಮಂಗಳೂರು ಮೂಲದ ಕೆ.ಎಲ್ ರಾಹುಲ್ ಬಾರಿ ಎಡ್ಡೆ ಗೊಬ್ಬಿಯ ಸೂರ್ಯ (ತುಂಬಾ ಚೆನ್ನಾಗಿ ಆಟವಾಡಿದೆ) ಎಂದು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಮೂಲಭಾಷೆ ತುಳುವಿನಲ್ಲಿ ಪೋಸ್ಟ್ ಮಾಡಿದ್ದರು. ಇದನ್ನು ಕಂಡ ಸೂರ್ಯಕುಮಾರ್ ಯಾದವ್ ಅವರ ಪತ್ನಿ ಕರಾವಳಿ ಮೂಲದವರಾದ ದೀವಿಶಾ ಶೆಟ್ಟಿ, ಚೂರ್ ತುಳು ಕಲ್ಪಾವೊಡು ಆರೆಗ್ ನನ (ಇನ್ನು ಸ್ವಲ್ಪ ತುಳು ಕಲಿಸಬೇಕು ಅವರಿಗೆ) ಎಂದು ರಾಹುಲ್ ಪೋಸ್ಟ್‌ಗೆ ಕಾಮೆಂಟ್ ಮಾಡಿದ್ದಾರೆ. 

ಈ ಪೋಸ್ಟ್ ಇದೀಗ ತುಳುನಾಡಿನಾದ್ಯಂತ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ರಾಹುಲ್ ಮತ್ತು ದೀವಿಶಾ ಅವರ ತುಳು ಪ್ರೇಮಕ್ಕೆ ಅಭಿಮಾನಿಗಳು ಮನಸೋತಿದ್ದಾರೆ. ಈ ಹಿಂದೆ ಸೂರ್ಯಕುಮಾರ್ ಯಾದವ್ ಅವರ ಮಗಳು ತುಳುವಿನಲ್ಲಿ ಮಾತನಾಡುವ ವೀಡಿಯೋ ಒಂದು ವೈರಲ್ ಆಗಿತ್ತು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ