![ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್](https://urtv24.com/wp-content/uploads/2024/12/WhatsApp-Image-2024-12-12-at-22.37.00-6787e1d3-300x169.jpg)
ದೆಹಲಿ: ಭಾನುವಾರ ಬೆಳಗ್ಗೆ ಬಿಜೆಪಿ ಪಕ್ಷದ ಮುಖ್ಯಸ್ಥ ಜೆಪಿ ನಡ್ಡಾ ಅವರ ಟ್ವಿಟರ್ ಖಾತೆಯನ್ನು ಹ್ಯಾಕ್ ಮಾಡಲಾಗಿದ್ದು, ರಷ್ಯಾ ಮತ್ತು ಉಕ್ರೇನ್ಗೆ ಸಹಾಯ ಮಾಡಲು ಕ್ರಿಪ್ಟೋಕರೆನ್ಸಿಯಲ್ಲಿ ದೇಣಿಗೆಯನ್ನು ಕೇಳುವ ಹಲವಾರು ಟ್ವೀಟ್ಗಳನ್ನು ಮಾಡಲಾಗಿದ್ದು, ಅವು ಈಗ ಡಿಲೀಟ್ ಆಗಿದೆ. ಯುಕ್ರೇನ್ ಜನರ ಪರವಾಗಿ ನಿಲ್ಲಿ. ಕ್ರಿಪ್ಟೋಕರೆನ್ಸಿ ಮೂಲಕ ದೇಣಿಗೆ ನೀಡಿ ಎಂದು ಟ್ವೀಟ್ ಮಾಡಲಾಗಿತ್ತು. ಇನ್ನೊಂದು ಟ್ವೀಟ್ನಲ್ಲಿ ನನ್ನ ಖಾತೆ ಹ್ಯಾಕ್ ಆಗಿಲ್ಲ. ಎಲ್ಲ ದೇಣಿಗೆಯನ್ನು ಉಕ್ರೇನ್ ಸರ್ಕಾರಕ್ಕೆ ನೀಡಲಾಗುವುದು ಎಂದಿದೆ. ಇದೀಗ ನಡ್ಡಾ ಅವರ ಟ್ವಿಟರ್ ಖಾತೆಯನ್ನು ಪುನಸ್ಥಾಪಿಸಲಾಗಿದೆ ಎಂದು ಎಎನ್ಐ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ. ಟ್ವೀಟ್ನಲ್ಲಿ ಹಿಂದಿಯಲ್ಲಿ ಸಂದೇಶವಿದೆ ಮತ್ತು ಬಿಟ್ಕಾಯಿನ್ ಮತ್ತು ಎಥೆರಿಯಮ್ ವ್ಯಾಲೆಟ್ಗಳಿಗೆ ವಿಳಾಸಗಳಿವೆ. ಟ್ವೀಟ್ ಅನ್ನು ಬೆಳಗ್ಗೆ 9:52 ಕ್ಕೆ ಪೋಸ್ಟ್ ಮಾಡಲಾಗಿದೆ. 10 ನಿಮಿಷಗಳಲ್ಲಿ, ಖಾತೆಯನ್ನು ಹ್ಯಾಕ್ ಮಾಡಲಾಗಿದೆ ಎಂದು ಸೂಚಿಸುವ ಮತ್ತೊಂದು ಟ್ವೀಟ್ ಅನ್ನು ಪೋಸ್ಟ್ ಮಾಡಲಾಗಿದ್ದು ಜನರು ರಷ್ಯಾವನ್ನು ಬೆಂಬಲಿಸಬೇಕು ಎಂದು ಹೇಳಿತ್ತು. ನಡ್ಡಾ ಅವರ ಟ್ವಿಟರ್ ಖಾತೆ ಹ್ಯಾಕ್ ಆಗಿರುವ ಬಗ್ಗೆ ಪ್ರತಿಕ್ರಿಯಿಸಿದ ಎಲೆಕ್ಟ್ರಾನಿಕ್ಸ್ ಮತ್ತು ತಂತ್ರಜ್ಞಾನದ ರಾಜ್ಯ ಸಚಿವ ರಾಜೀವ್ ಚಂದ್ರಶೇಖರ್ ಹ್ಯಾಕ್ ಆಗಿರುವ ಬಗ್ಗೆ ಸರ್ಕಾರಕ್ಕೆ ತಿಳಿದಿದೆ ಮತ್ತು ಕಂಪ್ಯೂಟರ್ ತುರ್ತು ಪ್ರತಿಕ್ರಿಯೆ ತಂಡ (CERT) ಇದನ್ನು ಪರಿಶೀಲಿಸುತ್ತಿದೆ ಎಂದು ಹೇಳಿದ್ದಾರೆ .
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist