ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬಿಡಿಎ ಅಧ್ಯಕ್ಷರ ಹುದ್ದೆಗೆ IAS ಅಧಿಕಾರಿಯನ್ನೇ ನೇಮಕ ಮಾಡಿದ ಸರ್ಕಾರ ; ಶಾಸಕರಿಗೆ ಬಿಗ್ ಶಾಕ್!

Twitter
Facebook
LinkedIn
WhatsApp
Untitled 21

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ ) ಅಧ್ಯಕ್ಷರನ್ನಾಗಿ ಐಎಎಸ್​ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬಿಡಿಎ ಅಧ್ಯಕ್ಷ ಸ್ಥಾನಕ್ಕೆ ಪೈಪೋಟಿ ಹಿನ್ನೆಲೆಯಲ್ಲಿ ಐಎಎಸ್​ ಅಧಿಕಾರಿಯನ್ನು ನೇಮಕ ಮಾಡಲಾಗಿದೆ. ಕಾಂಗ್ರೆಸ್ ಶಾಸಕರಾದ ಟಿ.ಬಿ.ಜಯಚಂದ್ರ, ಹ್ಯಾರಿಸ್, ಎಂ.ಕೃಷ್ಣಪ್ಪ, ಪ್ರಿಯಾಕೃಷ್ಣ ಸೇರಿದಂತೆ ಹಲವರ ನಡುವೆ ತೀವ್ರ ಪೈಪೋಟಿ ನಡೆದಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ರಾಜಕಾರಣಿಗಳಿಗೆ ಮಣೆಹಾಕದೆ ಬಿಡಿಎ ಅಧ್ಯಕ್ಷ(Bangalore Development Authority)  ಹುದ್ದೆಗೆ IAS ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್​​ನ ಕೆಲ ಶಾಸಕರಿಗೆ ಭಾರೀ ನಿರಾಸೆಯಾಗಿದೆ.

ಬಿಡಿಎ ಸೇರಿದಂತೆ ರಾಮನಗರ ಹಾಗೂ ಗ್ರಾಮಾಂತರ ಮತ್ತು ಕರ್ನಾಟಕದ ಒಟ್ಟು 10 ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರಾಗಿ ರಾಖೇಶ್ ಸಿಂಗ್ ಅವರನ್ನು ನೇಮಕ ಮಾಡಿದ್ದು, ಇದು ಅಚ್ಚರಿಕೆ ಕಾರಣವಾಗಿದೆ. ಸಹಕವಾಗಿ ಬಿಡಿಎ ಹಾಗೂ ಇತರೆ ಯೋಜನಾ ಪ್ರಾಧಿಕಾರ ಅಧ್ಯಕ್ಷರ ಹುದ್ದೆಗೆ ಆಡಳಿತ ಪಕ್ಷದ ನಾಯಕರನ್ನು ನೇಮಕ ಮಾಡುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ. ಆದ್ರೆ, ಇದೀಗ ಅಚ್ಚರಿ ಎಂಬಂತೆ ಸರ್ಕಾರ ಪಕ್ಷದ ನಾಯಕರನ್ನು ಬಿಟ್ಟು ಐಎಎಸ್​ ಅಧಿಕಾರಿಯನ್ನು ನೇಮಕ ಮಾಡಿ ಅಚ್ಚರಿ ಮೂಡಿಸಿದೆ.

ಸಚಿವ ಸ್ಥಾನ ವಂಚಿತ ಶಾಸಕರು ಈಗ ಪ್ರಮುಖ ನಿಗಮ ಹಾಗೂ ಮಂಡಳಿಗಳ ಮೇಲೆ ಕಣ್ಣಿಟ್ಟಿದ್ದಾರೆ. ಅದರಲ್ಲೂ ಮುಖ್ಯವಾಗಿ ಬಿಡಿಎ ಚೇರ್ಮನ್ ಹುದ್ದೆಗೆ ಭಾರೀ ಪೈಪೋಟಿ ನಡೆದಿತ್ತು. ಟಿಬಿ ಜಯಚಂದ್ರ ಜೊತೆಗೆ ಬೆಂಗಳೂರಿನ ವಿಜಯನಗರ ಶಾಸಕ ಪ್ರಿಯಾಕೃಷ್ಣ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ ಎನ್​ಎ ಹ್ಯಾರಿಸ್ ಸಹ ಬಿಡಿಎ ಚೇರ್ಮನ್ ​ ಬೇಕೆಂದು ಪಟ್ಟು ಹಿಡಿದಿದ್ದರು. ಬಿಡಿಎ ಚೇರ್ಮನ್ ಹುದ್ದೆಯನ್ನು ಸ್ಥಳೀಯ ಶಾಸಕರಿಗೇ ನೀಡಿ ಎಂದು ಬೆಂಗಳೂರು ಶಾಸಕರು ಡಿಕೆಶಿವಕುಮಾರ್ ಮೇಲೆ ಒತ್ತಡ ಹಾಕಿದ್ದರು. ಆದ್ರೆ, ಅಂತಿಮವಾಗಿ ರಾಜ್ಯ ಸರ್ಕಾರ ರಾಜಕಾರಣಿಗಳನ್ನು ಬಿಟ್ಟು ಐಎಎಸ್ ಅಧಿಕಾರಿಯನ್ನು ನೇಮಿಸಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist