ಮಂಗಳವಾರ, ಅಕ್ಟೋಬರ್ 3, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬಿಯರ್ ಬಾಟ್ಲಿಯಿಂದ ಹಲ್ಲೆ- ಉಬರ್ ಚಾಲಕಿಯ ಕುತ್ತಿಗೆಗೆ 10 ಸ್ಟಿಚ್!

Twitter
Facebook
LinkedIn
WhatsApp
pic 1 2

ನವದೆಹಲಿ: ಇಬ್ಬರು ದರೋಡೆಕೋರರು ಉಬರ್ ಚಾಲಕಿ (Uber Driver) ಯ ಕುತ್ತಿಗೆಗೆ ಬಿಯರ್ ಬಾಟ್ಲಿಯಿಂದ ಹಲ್ಲೆಗೈದ ಘಟನೆ ನವದೆಹಲಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಪ್ರಿಯಾಂಕಾ ದೇವಿ (30) ಹಲ್ಲೆಗೊಳಗಾದ ಉಬರ್ ಡ್ರೈವರ್. ಜನವರಿ 9ರಂದು ದೆಹಲಿಯ ಕಾಶ್ಮೀರಿ ಗೇಟ್ ಪ್ರದೇಶದಲ್ಲಿ ಈಕೆಯ ಮೇಲೆ ದಾಳಿಯಾಗಿದೆ.

The verdict is out — Ola or Uber?

ಘಟನೆ ನಡೆದ ತಕ್ಷಣವೇ ನನ್ನ ವಾಹನದಲ್ಲಿರುವ ಪ್ಯಾನಿಕ್ ಬಟನ್ ಒತ್ತಿದ್ದೇನೆ. ಆದರೆ ಕಂಪನಿಯಿಂದ ಯಾವುದೇ ಪ್ರತಿಕ್ರಿಯೆ ಬಂದಿರಲಿಲ್ಲ ಎಂದು ಪ್ರಿಯಾಂಕಾ (Priyanka Devi) ಬೇಸರ ವ್ಯಕ್ತಪಡಿಸಿದ್ದಾರೆ.

ಸೋಮವಾರ ನಸುಕಿನ ಜಾವ 2.45ರ ಸುಮಾರಿಗೆ ಪ್ರಯಾಣಿಕರನ್ನು ಪಿಕಪ್ ಮಾಡಲೆಂದು ತೆರಳಿದೆ. ಸ್ಥಳಕ್ಕೆ ತೆರಳಿದಾಗ ಇಬ್ಬರು ನನ್ನ ಬಳಿ ಬಂದು ಮೊಬೈಲ್ ಫೋನ್, ಹಣ ಹಾಗೂ ಹಣ ಕೊಡುವಂತೆ ಪೀಡಿಸಿದ್ದಾರೆ. ಆದರೆ ಕೊಡಲು ನಿರಾಕರಿಸಿದಾಗ ನನ್ನ ಸ್ವಿಫ್ಟ್ ಡಿಸೈರ್ ಕಾರಿನ ಮೇಲೆ ಇಟ್ಟಿಗೆಯಿಂದ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಅಲ್ಲದೆ ಓರ್ವ ಕೀ ನನ್ನ ಕೈಯಿಂದ ಎಳೆದುಕೊಂಡರೆ ಮತ್ತೊಬ್ಬ ಬಿಯರ್ ಬಾಟ್ಲಿಯಿಂದ ನನ್ನ ಕುತ್ತಿಗೆಗೆ ಹಲ್ಲೆ ಮಾಡಿದ್ದಾನೆ. ನನ್ನ ಕುತ್ತಿಗೆಯಿಂದ ರಕ್ತ ಸುರಿಯಲು ಆರಂಭಿಸಿತ್ತು. ಈ ವೇಳೆ ನಾನು ಜೋರಾಗಿ ಕಿರುಚಿಕೊಂಡಿದ್ದರಿಂದ ಜನ ಸ್ಥಳಕ್ಕಾಗಮಿಸಿದರು. ಕೂಡಲೇ ಆರೋಪಿಗಳು ಪರಾರಿಯಾದರು ಎಂದು ಪ್ರಿಯಾಂಕ ಅಳಲು ತೋಡಿಕೊಂಡಿದ್ದಾರೆ.

Bombay HC Slams Uber, Ola For Operating Without Valid Licences in  Maharashtra; Gives March Deadline

ಬಿಯರ್ ಬಾಟ್ಲಿಯಿಂದ ಹಲ್ಲೆಗೈದ ಪರಿಣಾಮ ನನ್ನ ಕುತ್ತಿಗೆಗೆ 10 ಸ್ಟಿಚ್ ಹಾಕಿದೆ. ಆರೋಪಿಗಳು ನನ್ನಲ್ಲಿದ್ದ ಸುಮಾರು 2 ಸಾವಿರ ರೂ.ಯೊಂದಿಗೆ ಪರಾರಿಯಾಗಿದ್ದಾರೆ ಎಂದು ತಿಳಿಸಿದ್ದಾರೆ.

ಇತ್ತ ಪೊಲೀಸರಿಗೂ ವಿಷಯ ತಿಳಿಸಲಾಯಿತು. ಆದರೆ ಪೊಲೀಸರು ಸ್ಥಳಕ್ಕೆ ಬರಲು 30 ನಿಮಿಷಗಳನ್ನು ತೆಗದುಕೊಂಡರು. ಅವರು ಸ್ಥಳಕ್ಕೆ ಬಂದ ಬಳಿಕ ಅಂಬುಲೆನ್ಸ್‍ಗೆ ಕರೆ ಮಾಡಿದರು. ಅದಾಗಲೇ ನನ್ನ ಬಳಿಯಿದ್ದ ಬಟ್ಟೆಯಿಂದ ರಕ್ತ ಸುರಿಯದಂತೆ ನನ್ನ ಕುತ್ತಿಗೆಯನ್ನು ಕಟ್ಟಿದ್ದೆ. ನಾನು ಮೂರ್ಛೆ ಹೋಗಲಿದ್ದೆ ಆದರೆ ನಾನು ಜಾಗೃತನಾಗಿರಬೇಕಾಗಿತ್ತು. ನನ್ನನ್ನು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು ಎಂದು ವಿವರಿಸಿದ್ದಾರೆ.

ಇಬ್ಬರು ಹೆಣ್ಣು ಮಕ್ಕಳ ಜೊತೆ ವಾಸವಾಗಿರುವ ದೇವಿ ಎಂಟು ವರ್ಷಗಳ ಹಿಂದೆ ಪತಿಯನ್ನು ಕಳೆದುಕೊಂಡಿದ್ದರು. ಅವರು ಕ್ಯಾಬ್‍ಗಳನ್ನು ಓಡಿಸಲು ಪ್ರಾರಂಭಿಸುವ ಮೊದಲು, ಮನೆಕೆಲಸಗಾರರಾಗಿ ಕೆಲಸ ಮಾಡುತ್ತಿದ್ದರು. ಮಹಿಳಾ ಕ್ಯಾಬ್ ಚಾಲಕರು ಎದುರಿಸುತ್ತಿರುವ ದೈನಂದಿನ ಸವಾಲುಗಳು ಮತ್ತು ದೈನಂದಿನ ಲೈಂಗಿಕತೆಯ ಬಗ್ಗೆ ಅವರು ಹೇಳಿದರು, ” ನಾನು ಮಹಿಳಾ ಚಾಲಕಿಯಾಗಿದ್ದರಿಂದ ಕೆಲವೊಮ್ಮೆ ಜನರು ಕ್ಯಾಬ್ ಬುಕ್ಕಿಂಗ್ ಅನ್ನು ರದ್ದುಗೊಳಿಸುತ್ತಾರೆ. ಇತರರು ನಾನು ನಿಧಾನವಾಗಿ ಚಾಲನೆ ಮಾಡುತ್ತಿದ್ದೇನೆ ಎಂದು ವಾದಿಸುತ್ತಾರೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ. ದೇವಿ ಅವರ ಪ್ರಕಾರ, ಪ್ರಸ್ತುತ ದೆಹಲಿಯಲ್ಲಿ ಸುಮಾರು 60-70 ಮಹಿಳಾ ಉಬರ್ ಮತ್ತು ಓಲಾ ಚಾಲಕರಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ