ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನಲ್ಲಿ ಹಣದ ಮಳೆ ಸುರಿದ ಅಸಾಮಿ

Twitter
Facebook
LinkedIn
WhatsApp
2 1674544668

ಬೆಂಗಳೂರು: ನಗರದ ಮಾರ್ಕೆಟ್​ ಫ್ಲೈ ಓವರ್​​ ನಲ್ಲಿ ಓರ್ವ ವ್ಯಕ್ತಿ ಹಣದ ಮಳೆಯನ್ನೇ ಸುರಿಸಿದ್ದಾರೆ. ಇಂದು ಮಧ್ಯಾಹ್ನ ಈ ಘಟನೆ ನಡೆದಿದೆ. ಫ್ಲೈ ಓವರ್‌ ಮೇಲೆ ವ್ಯಕ್ತಿಯೋರ್ವ ಬಂದಿದ್ದು ತನ್ನ ಕೈಯಲ್ಲಿದ್ದ ಚೀಲದಿಂದ ಹಣವನ್ನು ತೆಗೆದು ಜನರು ಮೇಲೆ ಎಸೆಯುತ್ತಾ ಹೋಗಿದ್ದಾನೆ. ಅಂದ ಹಾಗೆ ಈ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದ್ದು ಜನ ಹಣ ಸುರಿಯುತ್ತಿರುವ ಹಣದ ಮಳೆಯನ್ನು ಹಿಡಿಯಲು ನಾ ಮುಂದು ತಾ ಮುಂದು ಎಂದು ಮುಗಿಬಿದ್ದಿದ್ದರು. ಕೆಲವೊಂದು ಜನ ಈತನ ವರ್ತನೆಯಿಂದ ಗಾಬರಿಗೊಂಡಿದ್ದೂ ಇದೆ

ಕೆಲವರು ಎಸೆಯಬೇಡಿ ನಮಗೆ ಕೊಡಿ ಎನ್ನುತ್ತಿದ್ದರೆ, ಇನ್ನು ಕೆಲವರು ಈತ ಈ ರೀತಿ ಯಾಕೆ ಮಾಡುತ್ತಿದ್ದಾನೆ ಎಂದು ನೋಡುತ್ತಾ ನಿಂತಿದ್ದರು. ಈತ ತನ್ನ ಹಣ ಎಸೆಯುವ ಕೆಲಸ ಮುಗಿದ ಮೇಲೆ ಆ ಜಾಗದಿಂದ ಕಾಲ್ಕಿತ್ತಿದ್ದಾನೆ.ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ್ ನಿಂಬರಗಿ, ಕೆಆರ್ ಮಾರ್ಕೆಟ್ ಫ್ಲೈ ಓವರ್​​ ಮೇಲೆ ನಿಂತು ಹಣ ಎಸೆದು ವ್ಯಕ್ತಿ ಹೋಗಿದ್ದಾನೆ.

ಹತ್ತು ರೂಪಾಯಿ ನೋಟುಗಳನ್ನ ವ್ಯಕ್ತಿ ಎಸೆದು ಹೋಗಿದ್ದು, ಆದರೆ ಎಷ್ಟು ನೋಟು ಎಸೆದಿದ್ದಾರೆ ಅನ್ನೋ ಬಗ್ಗೆ ಮಾಹಿತಿ ಇಲ್ಲ. ಸ್ಥಳಕ್ಕೆ ಸಿಟಿ ಮಾರ್ಕೆಟ್​ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಣ ಎಸೆದು ಹೋದ ವ್ಯಕ್ತಿ ಪತ್ತೆ ಮಾಡಲು ಮುಂದಾಗಿದ್ದೇವೆ ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ