ಸೋಮವಾರ, ಅಕ್ಟೋಬರ್ 2, 2023
Galaxy S23 FE: ಸ್ಯಾಮ್ಸಂಗ್ ಗ್ಯಾಲಕ್ಸಿ S23 ಎಫ್​ಇ ಸ್ಮಾರ್ಟ್​ಫೋನ್ ಅ.4 ರಂದು ಬಿಡುಗಡೆ!-ಜಿಂಬಾಬ್ವೆಯಲ್ಲಿ ವಿಮಾನ ಪತನ ; ಭಾರತದ ಕೋಟ್ಯದೀಶ್ವರ ಹಾಗೂ ಗಣಿ ಉದ್ಯಮಿ ಮತ್ತು ಅವರ ಪುತ್ರ ದುರ್ಮರಣ!-ಸಂಕ್ರಾಂತಿ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ; ಸಿಪಿ ಯೋಗೇಶ್ವರ್ ಬಾಂಬ್-ದಿಗ್ಗಜ ಮಾಜಿ ಓಟಗಾರ್ತಿ ಪಿ.ಟಿ ಉಷಾರವರ ರಾಷ್ಟ್ರೀಯ ದಾಖಲೆ ಸರಿಗಟ್ಟಿ ಪದಕ ಸುತ್ತಿಗೇರಿದ ವಿತ್ಯಾ!-ನೀವು ಹೆದರಿಸದರೆ ಮಾತ್ರಕ್ಕೆ ನಾನು ಹೆದರಲ್ಲ ದೇವೇಗೌಡರಿಗೆ ಡಿಕೆಶಿ ಟಾಂಗ್!-ಜಿಪಿಎಸ್ ಮ್ಯಾಪ್ ನೋಡಿ ಕಾರನ್ನು ಚಲಿಸುವುತ್ತಿರುವಾಗ ನದಿಗೆ ಬಿದ್ದು ಇಬ್ಬರು ವೈದ್ಯರು ಸಾವು ; ಮೂವರು ಪಾರು!-ಹೃದಯ ವಿದ್ರಾವಕ ಘಟನೆ: ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಸೇರಿ 6 ಮಂದಿ ಹತ್ಯೆ-ಬೆಂಗಳೂರಿನ ಕಂಬಳಕ್ಕೆ ಹೇಗಿದೆ ತಯಾರಿ; ದಕ್ಷಿಣ ಕನ್ನಡ ಭಾಗದ 150 ಫುಡ್ ಸ್ಟಾಲ್ ಏರ್ಪಾಡು..!-ಪಿಯುಸಿಯಲ್ಲಿ ಅಂಕ ಕಡಿಮೆ ಬಂತೆಂದು ಮನನೊಂದು ಅಪಾರ್ಟ್‌ಮೆಂಟ್‌ನಿಂದ ಜಿಗಿದ ಬಾಲಕಿ ; ರಕ್ಷಣೆಗೆ ಧಾವಿಸಿದ ಯುವಕ - ಇಲ್ಲಿದೆ ವಿಡಿಯೋ-ಬರ್ತ್‌ಡೇ ಪಾರ್ಟಿಯಲ್ಲಿ ಡೆಕೋರೇಷನ್‌ಗೆ ಹಾಕಿದ್ದ ಹೀಲಿಯಂ ಬಲೂನ್‌ ಬ್ಲಾಸ್ಟ್‌ ; ಐವರು ಗಂಭೀರ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಂಗಳೂರಿನ ರೈಲ್ವೇ ನಿಲ್ದಾಣದಲ್ಲಿ 23 ವರ್ಷದ ಯುವತಿ ಶವ ಡ್ರಮ್​ನಲ್ಲಿ ಪತ್ತೆ!

Twitter
Facebook
LinkedIn
WhatsApp

ಬೆಂಗಳೂರು: ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದ ಗೂಡ್ಸ್ ಪ್ಲಾಟ್​ಫಾರ್ಮ್​ನ ಬಾಕ್ಸ್​ವೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ 23 ವರ್ಷದ ಅಪರಿಚಿತ ಯುವತಿಯ ಶವ ಪತ್ತೆಯಾಗಿದೆ. ದುಷ್ಕರ್ಮಿಗಳು ಪ್ಲಾಸ್ಟಿಕ್ ಕವರ್​​ನಲ್ಲಿ ಶವ ಇಟ್ಟು ಸೀಲ್ ಮಾಡಿದ್ದಾರೆ. ಇಂದು (ಜ.4) ವಾಸನೆ ಬಂದ ಹಿನ್ನೆಲೆ ಪರಿಶೀಲಿಸಿದಾಗ ಯುವತಿಯ ಶವ ಇರುವುದು ಗೊತ್ತಾಗಿದೆ. ಯಶವಂತಪುರ ರೈಲ್ವೆ ಪೊಲೀಸ್​​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ನಾಲ್ಕೈದು ದಿನಗಳ ಹಿಂದೆ ಶವವನ್ನು ರೇಲ್ವೆ ನಿಲ್ದಾಣದಲ್ಲಿ ತಂದಿಟ್ಟಿರುವ ಶಂಕೆ ವ್ಯಕ್ತವಾಗಿದೆ. ವಾಸನೆ ಬರದಂತೆ ಮೃತದೇಹವನ್ನು ಸೀಲ್ಡ್ ಕವರ್​ನಲ್ಲಿ ಹಾಕಿ, ಬಾಕ್ಸ್ ಮಾಡಿ ಇಡಲಾಗಿದೆ. ಇಂದು ಬೆಳಿಗ್ಗೆ ಕೊಂಚ ಹರಿದ ಕವರ್​ನಿಂದ ವಾಸನೆ ಹೊರಗೆ ಬಂದಿದೆ. ಸಮಯ ಕಳೆದಂತೆ ವಾಸನೆ ಹೆಚ್ಚಾಗಿದೆ. ಆಗ ಸ್ಥಳಿಯರು ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಬಂದು ಪರಿಶೀಲನೆ ನಡೆಸಿದ ವೇಳೆ ಮೃತದೇಹದ ಸಂಗತಿ ಇರುವದು ಬಯಲಾಗಿದೆ. ಯಶವಂತಪುರ ರೈಲ್ವೇ ಪೊಲೀಸರು ಸದ್ಯ ಯುವತಿಯ ಗುರುತು ಪತ್ತೆ ಹಚ್ಚುತ್ತಿದ್ದಾರೆ.

ಕಳೆದ ಡಿಸೆಂಬರ್ 6/2022 ರಂದುನಗರದ ಬೇರೆ ರೈಲು ನಿಲ್ದಾಣದಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿತ್ತು. ಕಳೆದ ಒಂದು ತಿಂಗಳಲ್ಲಿ ಇದು ಸೇರಿ ಎರಡನೇ ಮೃತದೇಹ ಪತ್ತೆಯಾಗಿದೆ. ಕೆಜಿಎಫ್ ನಿಂದ ಬೆಂಗಳೂರಿಗೆ ಬರುತ್ತಿದ್ದ ರೈಲಿನಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ಮಹಿಳೆ ಮೃತದೇಹ ಪತ್ತೆಯಾಗಿತ್ತು. ದೇಹವನ್ನು ಬೆಡ್ ಶೀಟ್, ಬಟ್ಟೆಗಳ ನಡುವೆ ತುರುಕಲಾಗಿತ್ತು. ಮಹಿಳೆಯ ಯಾವುದೇ ಗುರುತುಗಳು ಪತ್ತೆಯಾಗಿರಲಿಲ್ಲ. ರೈಲು ಖಾಲಿ ಅಗಿದ್ದರು ಚೀಲವನ್ನು ಯಾರು ತೆಗೆದುಕೊಳ್ಳದೆ ಇದ್ದಾಗ ಅನುಮಾನ ವ್ಯಕ್ತವಾಗಿತ್ತು.

ಅನುಮಾನ ಬಂದು ಸಿಬ್ಬಂದಿ ರೈಲ್ವೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಬಳಿಕ ಪರಿಶೀಲನೆ ಮಾಡಿದಾಗ ಮೃತ ದೇಹ ಪತ್ತೆಯಾಗಿತ್ತು. ಬೈಯಪ್ಪನಹಳ್ಳಿ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸದ್ಯ ಎರಡು ಪ್ರಕರಣಕ್ಕೆ ಸಾಮ್ಯತೆ ಇದೆ ಎನ್ನಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ