ಗುರುವಾರ, ಮಾರ್ಚ್ 13, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೆಂಗಳೂರು-ಮುಂಬೈ, ಬೆಂಗಳೂರು-ಚೆನ್ನೈ ಕೈಗಾರಿಕಾ ಟೌನ್‌ಶಿಪ್‌ಗೆ ತಾತ್ವಿಕ ಅನುಮೋದನೆ!

Twitter
Facebook
LinkedIn
WhatsApp
ಬೆಂಗಳೂರು-ಮುಂಬೈ, ಬೆಂಗಳೂರು-ಚೆನ್ನೈ ಕೈಗಾರಿಕಾ ಟೌನ್‌ಶಿಪ್‌ಗೆ ತಾತ್ವಿಕ ಅನುಮೋದನೆ!

ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವ ಬೆಂಗಳೂರು-ಮುಂಬೈ ಮತ್ತು ಬೆಂಗಳೂರು- ಚೆನ್ನೈ ಕೈಗಾರಿಕಾ ಕಾರಿಡಾರ್‌ಗಳಲ್ಲಿ ಕೈಗಾರಿಕಾ ಟೌನ್ ಶಿಪ್‍ಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ತಾತ್ವಿಕ ಅನುಮೋದನೆ ನೀಡಿದೆ.
ಲಭ್ಯವಿರುವ ಅವಕಾಶಗಳನ್ನು ಬಳಸಿಕೊಂಡು ಈ ಎರಡೂ ಕಡೆಗಳಲ್ಲಿ ತಲಾ ಕನಿಷ್ಠ 500 ಎಕರೆ ಜಾಗದಲ್ಲಿ ಮುಖ್ಯಮಂತ್ರಿಗಳ ಮೆಗಾ ಸಂಯೋಜಿತ ಕೈಗಾರಿಕಾ ಟೌನ್‍ಶಿಪ್‍ಗಳನ್ನು ಸ್ಪಾಪಿಸಲಾಗುತ್ತಿದೆ.
ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮಗಳ ವತಿಯಿಂದ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಾಣವಾಗಲಿರುವ ಈ ಟೌನ್‍ಶಿಪ್‍ಗಳಿಂದ ಮುಂದಿನ ಮೂರು ವರ್ಷಗಳಲ್ಲಿ ಅಂದಾಜು 10 ಸಾವಿರ ಕೋಟಿ ರೂ.ಗಳ ಖಾಸಗಿ ಬಂಡವಾಳ ಆಕರ್ಷಿಸುವ ಮೂಲಕ ಐದು ಲಕ್ಷ ಉದ್ಯೋಗಾವಕಾಶ ಸೃಷ್ಟಿಸುವ ನಿರೀಕ್ಷೆ ಇದೆ.

ಮುಖ್ಯಮಂತ್ರಿಗಳ ಮೆಗಾ ಸಂಯೋಜಿತ ಕೈಗಾರಿಕಾ ಟೌನ್‍ಶಿಪ್‍ಗಳನ್ನು ಸ್ಥಾಪಿಸುವ ಬಗ್ಗೆ (MSME), KSSIDC, KSIIDC, KIADB, ಹಾಗೂ ನಿರ್ದೇಶಕರು ಹಾಗೂ ಸಂಬಂಧಿಸಿದ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಭೂಮಿ ಲಭ್ಯತೆ ಕುರಿತಾದ ವಿವರಗಳನ್ನು ಸಲ್ಲಿಸುವಂತೆ ಸೂಚಿಸಲಾಗಿದೆ.
ಈ ಹೊಸ ಯೋಜನೆ ಕಾರ್ಯಗತಗೊಳಿಸುವ ಕುರಿತಂತೆ ಕೆಳಕಂಡ ಅಂಶಗಳಿಗೆ ತಾತ್ವಿಕ ಅನುಮೋದನೆ ನೀಡುವಂತೆ ಆರ್ಥಿಕ ಇಲಾಖೆ ಮತ್ತು ಯೋಜನಾ ಇಲಾಖೆಯನ್ನು ಕೋರಿ ಅನುಮೋದನೆ ಪಡೆಯಲಾಗಿದೆ.
ಈ ಕಾರಿಡಾರ್‍ಗಳ ಕಾರ್ಯ ವ್ಯಾಪ್ತಿಗೆ ಬರುವ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕೈಗಾರಿಕೆಗಳ ಬೇಡಿಕೆ ಸಮೀಕ್ಷೆಯನ್ನು ಕೈಗೊಂಡು ಆದರ ವರದಿಯನ್ನು ಎಂ.ಡಿ, ಕೆಎಸ್‍ಎಸ್‍ಐಡಿಸಿ ಅವರಿಗೆ ಸಲ್ಲಿಸುವುದು. ಕೆಎಸ್‍ಎಸ್‍ಐಡಿಸಿ ಸಂಸ್ಥೆಯು ಸರಳ ಯೋಜನಾ ವರದಿಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸಬೇಕು.
ಎಂ.ಡಿ., ಕೆಎಸ್‍ಐಐಡಿಸಿಯವರು ಈ ಯೋಜನೆಯ ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯ ಪರಿಕಲ್ಪನೆಯನ್ನು ಸರ್ಕಾರಕ್ಕೆ ಸಲ್ಲಿಸಬೇಕು, ಈ ಯೋಜನೆಗೆ ಕೆಎಸ್‍ಐಐ.ಡಿಸಿ ಸಮಾಲೋಚಕರನ್ನು ಕೆಟಿಪಿಪಿ ಕಾಯ್ದೆ ಅನ್ವಯ ನೇಮಿಸಲು ಕ್ರಮ ವಹಿಸಬೇಕು.

ಈ ಯೋಜನೆಯನ್ನು ಜಾರಿಗೆ ತರಲು ಲಭ್ಯವಿರುವ ಲ್ಯಾಂಡ್ ಬ್ಯಾಂಕ್‍ನ ವಿವರವನ್ನು ಕೆ.ಐ.ಎ.ಡಿ.ಬಿ ಅವರು ಸರ್ಕಾರಕ್ಕೆ ಸಲ್ಲಿಸಬೇಕು. ಈ ಎರಡು ಕಾರಿಡಾರ್‍ಗಳಲ್ಲಿ ಯಾವ ಯಾವ ವಿಧದ ಕೈಗಾರಿಕೆಗಳನ್ನು ಸ್ಥಾಪಿಸಬಹುದು ಎಂಬುದರ ಬಗ್ಗೆ ವಿಶ್ಲೇಷಿತ ವಿವರಣೆಯನ್ನು ನಿರ್ದೇಶಕರು (ಎಂ.ಎಸ್.ಎಂ.ಇ.) ರವರು ಸರ್ಕಾರಕ್ಕೆ ಸಲ್ಲಿಸಬೇಕು.
ಈ ಯೋಜನೆಯ ನೋಡಲ್ ಏಜೆನ್ಸಿ – ಉಸ್ತುವಾರಿ ಸಂಸ್ಥೆಯಾಗಿ ಎಂ.ಡಿ., ಕೆ.ಎಸ್.ಎಸ್.ಐ.ಡಿ.ಸಿ ಮೇಲ್ಕಂಡ ಕಾರ್ಯಗಳ ಸಮನ್ವಯ ಸಾಸಿ ಸರ್ಕಾರಕ್ಕೆ ಆಗಿಂದಾಗ್ಗೆ ವರದಿ ಸಲ್ಲಿಸಬೇಕೆಂದು ಸೂಚಿಸಲಾಗಿದೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು