ಗುರುವಾರ, ಜುಲೈ 4, 2024
ದರ್ಶನ್​ ಬಂಧನದ ಬಳಿಕ ಮೊದಲ ಬಾರಿ ಮೌನ ಮುರಿದ ಸುಮಲತಾ ಅಂಬರೀಷ್​!-ಬಿಹಾರದಲ್ಲಿ 15 ದಿನಗಳಲ್ಲಿ 10 ಸೇತುವೆ ಕುಸಿತ!-ನಟ ದರ್ಶನ್ ಗೆ ಜು.18 ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ!-ಶಾಸಕ ಡಾ. ಮಂತರ್ ಗೌಡ ಸೂಚನೆ.ಕೊಡಗಿನಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಪ್ರವಾಸಿ ಮಾರ್ಗದರ್ಶಕ ಹುದ್ದೆಗೆ ನೇಮಕ ಕುರಿತಂತೆ ಪ್ರಕಟಣೆ ಹೊರಡಿಸಿದ ಪ್ರವಾಸೋದ್ಯಮ ಇಲಾಖೆ.-ಕನ್ನಡದಲ್ಲಿ ಹವಾ‌ ಎಬ್ಬಿಸಿದೆ ಸಾಂಕೇತ್ ಚಿತ್ರದ ಟೀಸರ್. ಸೂಪರ್ ಅಂದ್ರು ವೀಕ್ಷಕರು!-ಮಾಜಿ ಸಿಎಂ ವೀರಪ್ಪ ಮೊಯ್ಲಿ ಪುತ್ರಿ ನಿಧನ.!-ವಿಶ್ವಕಪ್ ಕಿರೀಟ ಗೆದ್ದ ಬೆನ್ನಲ್ಲೇ ಕ್ರಿಕೆಟ್ ದಂತಕಥೆ ವಿರಾಟ್ ಕೊಹ್ಲಿ T20 ಕ್ರಿಕೆಟ್ ನಿಂದ ನಿವೃತ್ತಿ ಘೋಷಣೆ!-ಬುಮ್ರ, ಹಾರ್ದಿಕ್ ಮ್ಯಾಜಿಕ್ ಬೌಲಿಂಗ್; ಸೂರ್ಯಕುಮಾರ್ ಸಕತ್ ಕ್ಯಾಚ್ - ಭಾರತಕ್ಕೆ ವಿಶ್ವಕಪ್-ಬಹು ವರ್ಷಗಳ ಕನಸು ನನಸು; ಟಿ-20 ವಿಶ್ವಕಪ್ ಕಿರೀಟ ಗೆದ್ದ ಭಾರತ-ಪ್ರವಾಸಿಗರ ಗಮನಕ್ಕೆ; ಕೊಡಗಿನ ಗಾಜಿನ ಸೇತುವೆ ಬಂದ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಬೆಳ್ತಂಗಡಿ: ನೀರಿನಲ್ಲಿ ವಿದ್ಯುತ್ ಪ್ರವಹಿಸಿ ಯುವತಿ ಸಾವು; ದಕ್ಷಿಣ ಕನ್ನಡದಲ್ಲಿ 2 ದಿನದಲ್ಲಿ 7 ಮಂದಿ ದುರ್ಮರಣ.!

Twitter
Facebook
LinkedIn
WhatsApp
ಬೆಳ್ತಂಗಡಿ: ನೀರಿನಲ್ಲಿ ವಿದ್ಯುತ್ ಪ್ರವಹಿಸಿ ಯುವತಿ ಸಾವು; ದಕ್ಷಿಣ ಕನ್ನಡದಲ್ಲಿ 2 ದಿನದಲ್ಲಿ 7 ಮಂದಿ ದುರ್ಮರಣ.!

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ(20) ಮೃತ ಯುವತಿ. ಪಾರ್ಸೆಲ್ ತೆಗೆದುಕೊಳ್ಳಲು ಮನೆಯಿಂದ ಹೊರಗೆ ಬಂದಾಗ ಘಟನೆ ಸಂಭವಿಸಿದೆ. ಮಳೆ ನೀರಿನಲ್ಲಿ ವಿದ್ಯುತ್ ಪ್ರವಹಿಸಿ ಯುವತಿ ಪ್ರತೀಕ್ಷಾ ಮೃತಪಟ್ಟಿದ್ದಾರೆ.

ಕೊಕ್ಕಡದಲ್ಲಿ ಮೆಡಿಕಲ್ ಶಾಪ್‌ನಲ್ಲಿ ಪ್ರತೀಕ್ಷಾ ಕೆಲಸ ಮಾಡುತ್ತಿದ್ದರು. ಸದ್ಯ ಯುವತಿಯ ಮೃತದೇಹ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಪ್ರಕರಣ ನಡೆದಿದೆ.

ಮಂಗಳೂರಿನಲ್ಲಿ ಕಳೆದೆರಡು ದಿನಗಳಿಂದ ವರುಣಾರ್ಭಟ ಜೋರಾಗಿದೆ. ಒಂದಲ್ಲ ಒಂದು ಅವಾಂತರ ಸೃಷ್ಟಿಸುತ್ತಿರುವ ವರುಣ ಉಳ್ಳಾಲದಲ್ಲಿ ಒಂದೇ ಕುಟುಂಬದ ನಾಲ್ವರ ಬಲಿ ಪಡೆದಿತ್ತು. ಆ ಘಟನೆ ಮಾಸುವ ಮುನ್ನ ಆಟೋ ಚಾಲಕರಿಬ್ಬರು ಘೋರ ದುರಂತಕ್ಕೆ ಬಲಿಯಾಗಿದ್ದರು. ಮೂಲತ ಹಾಸನ ಜಿಲ್ಲೆಯ ಅಲೂರಿನವಾರದ ರಾಜು ಹಾಗೂ ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿ ಮೂಲದ ದೇವರಾಜು ಮಂಗಳೂರು ನಗರದ ರೋಸಾರಿಯೊ ಶಾಲೆಯ ಹಿಂಭಾಗದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು.

ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಇವರು ರಾತ್ರಿ ಎಂದಿನಂತೆ ರೂಂ ಗೆ ಬಂದಿದ್ರು. ರಾತ್ರಿ ಒಂಬತ್ತು ಗಂಟೆ ವೇಳೆಗೆ ರಾಜು ತಮ್ಮ ಆಟೋವನ್ನು ತೊಳೆಯೊದಕ್ಕೆ ರೂಂನಿಂದ ಹೊರ ಬಂದಿದ್ರು. ಆದರೆ ಆ ಸಂದರ್ಭ ಜೋರಾದ ಗಾಳಿಗೆ ಆಟೋ ನಿಲ್ಲಿಸಿದ್ದ ರಸ್ತೆಯ ಬದಿಯಲ್ಲಿ ವಿದ್ಯುತ್ ತಂತಿಯೊಂದು ಕೆಳಕ್ಕೆ ಬಿದ್ದಿತ್ತು. ಇದನ್ನು ಗಮನಿಸದ ರಾಜು ಅವರಿಗೆ ವಿದ್ಯುತ್ ತಂತಿ ತಗುಲಿ ವಿದ್ಯುತ್ ಶಾಕ್‌ಗ ಒಳಗಾಗಿದ್ದರು. ರಾಜು ಕಿರುಚಾಟದ ಬೊಬ್ಬೆ ಕೇಳಿ ಹೊರಬಂದ ದೇವರಾಜು ತನ್ನ ಸ್ನೇಹಿತನ ರಕ್ಷಣೆಗೆ ಮುಂದಾಗಿದ್ದಾರೆ. ಈ ಸಂದರ್ಭ ದೇವರಾಜು ಅವರಿಗೂ ವಿದ್ಯುತ್ ತಗುಲಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ