ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಬೈಂದೂರು: ದಾಖಲಾತಿ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ. ಜಪ್ತಿ

Twitter
Facebook
LinkedIn
WhatsApp
1679026965620 5

ಬೈಂದೂರು, ಮಾ 17: ಸೂಕ್ತ ದಾಖಲೆ ಇಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ 20 ಲಕ್ಷ ರೂ.ಗಳನ್ನು ಬೈಂದೂರು ಠಾಣೆಯ ಪೊಲೀಸರು ಮಾ.16ರಂದು ಜಪ್ತಿ ಮಾಡಿದ್ದಾರೆ.

ಉಡುಪಿ ಜಿಲ್ಲೆಯ ಗಡಿಭಾಗದ ಶಿರೂರು ಚೆಕ್‌ಪೋಸ್ಟ್‌ನಲ್ಲಿ ಮಾ.16ರಂದು ಮಧ್ಯಾಹ್ನ 1.40ರ ಸುಮಾರಿಗೆ ವಾಹನ ತಪಾಸಣೆ ನಡೆಸುತ್ತಿದ್ದ ಎಸ್‌ಐ ನಿರಂಜನಗೌಡ ಮತ್ತು ಸಿಬ್ಬಂದಿ ಭಟ್ಕಳದಿಂದ ಬಂದ ನೋಂದಣಿ ನಂಬರ್ ಪ್ಲೇಟ್ ಇಲ್ಲದ ಕಾರನ್ನು ತಡೆದಿದ್ದಾರೆ. ಈ ವೇಳೆ ಕಾರನ್ನು ಪರಿಶೀಲಿಸಿದಾಗ ಹಿಂಬದಿ ಸೀಟಿನ ಕೆಳಗೆ ಪ್ಲಾಸ್ಟಿಕ್ ಬಂಡಲ್ ಇದ್ದು ಅದರಲ್ಲಿ ನಗದು ಕಂಡುಬಂದಿದೆ.

ಹಣದ ದಾಖಲೆ ಬಗ್ಗೆ ವಿಚಾರಣೆ ನಡೆಸಿದಾಗ ಚಾಲಕ ಯಾವುದೇ ದಾಖಲೆ ನೀಡಲು ವಿಫಲನಾಗಿದ್ದಾನೆ. ಪೊಲೀಸರು ಪರಿಶೀಲಿಸಿದಾಗ 100 ರೂಪಾಯಿ ಮುಖಬೆಲೆಯ 3000 ನೋಟುಗಳು, 200 ರೂಪಾಯಿ ಮುಖಬೆಲೆಯ 1000 ನೋಟುಗಳು ಮತ್ತು 500 ರೂಪಾಯಿ ಮುಖಬೆಲೆಯ 3000 ನೋಟುಗಳು ಪತ್ತೆಯಾಗಿವೆ. ಪತ್ತೆಯಾದ ಒಟ್ಟು ನಗದು 20 ಲಕ್ಷ ರೂ.

ಕಾರು ಚಲಾಯಿಸುತ್ತಿದ್ದ ಬೆಳ್ತಂಗಡಿ ಶಿರ್ಲಾಲು ಮಂಜಿಲಪಲ್ಕೆ ನಿವಾಸಿ ಬಶೀರ್ (42) ಎಂಬಾತನನ್ನು ವಶಕ್ಕೆ ಪಡೆದಿದ್ದು,ಈ ಬಗ್ಗೆ ಬೈಂದೂರು ಪೊಲೀಸ್‌ ಠಾಣೆ ಅಪರಾಧ ಕ್ರಮಾಂಕ 43/2023 ಕಲಂ: 98 KP ACT ರಂತೆ ಪ್ರಕರಣ ದಾಖಲಾಗಿರುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ