ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ; ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆದ ಎಸ್. ಅಂಗಾರ

Twitter
Facebook
LinkedIn
WhatsApp
ಸಕ್ರೀಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ಹಿಂಪಡೆದ ಸಚಿವ ಅಂಗಾರ ಭಾಗೀರಥಿ ಮುರುಳ್ಯ ಅವರ

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯ ಸುಳ್ಯದ ಮಾಜಿ ಶಾಸಕ ಎಸ್. ಅಂಗಾರ (S Angara) ರಾಜಕೀಯ ನಿವೃತ್ತಿ ಹೇಳಿಕೆಯನ್ನು ಹಿಂಪಡೆದಿದ್ದಾರೆ, ಭಾರೀ ಚರ್ಚೆಗೆ ಗ್ರಾಸವಾಗಿದ್ದ ಈ ಹೇಳಿಕೆ ಮತ್ತು ಈ ಕುರಿತು ವೀಡಿಯೋ ಕೂಡ ವೈರಲ್ ಆಗಿತ್ತು. ಇದೀಗ ಮಾಜಿ ಸಚಿವ ಎಸ್​. ಅಂಗಾರ ರಾಜಕೀಯ ನಿವೃತ್ತಿ ಹೇಳಿಕೆಯನ್ನು ಹಿಂಪಡೆದಿದ್ದಾರೆ ಎಂದು ಹೇಳಲಾಗಿದೆ. ಎಸ್. ಅಂಗಾರ ಬಿಜೆಪಿ ಕಾರ್ಯಕರ್ತರ ಆಕ್ರೋಶದ ಬೆನ್ನಲ್ಲೇ ಈ ನಿರ್ಧಾರವನ್ನು ಹಿಂಪಡೆದಿದ್ದಾರೆ. ತಮಗೆ ಬಿಜೆಪಿ ಟಿಕೆಟ್​​ ಕೈ ತಪ್ಪಿದ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಅಕ್ರೋಶ ವ್ಯಕ್ತಪಡಿಸಿದರು. ಈ ವಿಚಾರವಾಗಿ ಒಂದು ವೀಡಿಯೊ ಕೂಡ ವೈರಲ್ ಆಗಿತ್ತು. ಪ್ರಾಮಾಣಿಕತೆಗೆ ಬೆಲೆ ಇಲ್ಲ, ನಾನು ಏಕೆ ಬಿಜೆಪಿಗೆ ಕೆಲಸ ಮಾಡಬೇಕು ಎಂದು ರಾಜಕೀಯ ನಿವೃತ್ತಿ ಪಡೆಯುತ್ತಿದ್ದೇನೆ ಎಂದು ಎಸ್​, ಅಂಗಾರ ಹೇಳಿದ್ದರು.

ಈಗ ಪ್ರಸ್ತುತ ಬಿಜೆಪಿ ಅಭ್ಯರ್ಥಿಯಾಗಿ ಭಾಗೀರಥಿ ಮುರುಳ್ಯ ಆಯ್ಕೆಯಾಗಿದ್ದು, ಇವರ ಪರವಾಗಿ ಪ್ರಚಾರ ನಡೆಸಲ್ಲ ಎಂದು ಹೇಳಿದ್ದರು. ಆದರೆ ಇದೀಗ ಮಾಜಿ ಶಾಸಕರ ಜತೆಗೆ ಪಕ್ಷದ ಹಿರಿಯ ನಾಯಕರು ಮಾತುಕತೆ ನಡೆಸಿ ತಮ್ಮ ನಿರ್ಧಾರವನ್ನು ಬದಲಿಸುವಂತೆ ಮನವೊಲಿಸಿದ್ದಾರೆ ಎಂದು ಹೇಳಲಾಗಿದೆ.

ಸಕ್ರಿಯ ರಾಜಕಾರಣಕ್ಕೆ ನಿವೃತ್ತಿ ಹೇಳಿಕೆ ನೋವಿನಿಂದ ಹೇಳಿದ್ದೇನೆ. ನಾನು ಮೊದಲಿನಂತೆ ಸಕ್ರಿಯವಾಗಿದ್ದು, ಭಾಗೀರಥಿ ಮುರುಳ್ಯ ಅವರ ಗೆಲುವೊಂದೇ ನಮ್ಮ ಮುಂದಿನ ನಡೆ. ವೈಯಕ್ತಿಕವಾಗಿ ನೀಡಿದ ಆ ಹೇಳಿಕೆ ಹಿಂದಕ್ಕೆ ಪಡೆಯುತ್ತಿದ್ದೇನೆ. ಆಯ್ಕೆ ಮಾಡಿದ ಅಭ್ಯರ್ಥಿ ಬಗ್ಗೆ ಬೇಸರ ಇಲ್ಲ, ಅವರ ಪರ ಕೆಲಸ ಮಾಡೋದು ನನ್ನ ಹೊಣೆಗಾರಿಕೆ. ನನ್ನ ಕಾರ್ಯಕರ್ತರು ಜೊತೆ ನಿಂತಿದ್ದಕ್ಕೆ ಧನ್ಯವಾದಗಳು. ನನಗೆ ಯಾವುದೇ ಅಸಮಾಧಾನ ಮತ್ತು ಭಿನ್ನಾಭಿಪ್ರಾಯ ಇಲ್ಲ. ಪಕ್ಷದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುತ್ತೇನೆ. ನಾನು ಬೇಸರದಲ್ಲಿ, ಉದ್ವೇಗದಲ್ಲಿ ಹೇಳಿದ ಮಾತನ್ನು ವಾಪಸ್ಸು ಪಡೆಯುತ್ತೇನೆ. ಮುಂದೆ ಪಕ್ಷದ ಅಭ್ಯರ್ಥಿಯ ಪರವಾಗಿ ಕೆಲಸ ಮಾಡಿ ಗೆಲ್ಲಿಸುವುದು ನನ್ನ ಗುರಿ ಎಂದು ಎಸ್​​ ಅಂಗಾರ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist