ಮಂಗಳವಾರ, ಅಕ್ಟೋಬರ್ 3, 2023
ರೊಚಿಗೆದ್ದ ಕಾಮಿಡಿ ಕಿಲಾಡಿ ಖ್ಯಾತಿಯ ನಯನಾ ;ನಿಮ್ಮ ತೆವಲಿಗೋಸ್ಕರ ಫಾಲೋವರ್ಸ್ ಬೇಕು ಅಂತ ನ್ಯೂಸ್ ಹಾಕಬೇಡಿ!-ಹ್ಯುಂಡೈನ ಎಲ್ಲ ಮಾದರಿಯ ಕಾರುಗಳಲ್ಲಿ ಇನ್ನು ಮುಂದೆ ಆರು ಏರ್​ಬ್ಯಾಗ್​ಗಳು ನೀಡುವುದಾಗಿ ಘೋಷಿಸಿದ ಹ್ಯುಂಡ್ಯೆ!-ಉಳ್ಳಾಲ: ಅಬ್ಬಕ್ಕ ಪ್ರತಿಮೆ ಎದುರು ಪುಂಡಾಟ; ಯುವಕರಿಗೆ ನೋಟಿಸ್-ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚಿನ್ನ ಸೀಝ್ ; ಚಿನ್ನವನ್ನು ಎಲ್ಲೆಲ್ಲಿ ಬಚ್ಚಿಟ್ಟು ತಂದಿದ್ದಾರೆ ಗೊತ್ತೆ..!-ನನ್ನ ಮೇಲೆ ಹೈಕಮಾಂಡ್ ಗೆ ಪ್ರೀತಿ ಜಾಸ್ತಿ; ಅದಕ್ಕೆ ನಾನೇನು ಮಾತನಾಡಿದರೆ ನೋಟಿಸ್ ಕೊಡುತ್ತಾರೆ !-ಕೇರಳ : ಚರ್ಚ್ ಪಾದ್ರಿ ಬಿಜೆಪಿ ಸೇರ್ಪಡೆ ; ಕರ್ತವ್ಯದಿಂದ ಅಮಾನತು!-ಮಹಾರಾಷ್ಟ್ರ : ಸರ್ಕಾರಿ ಆಸ್ಪತ್ರೆಯಲ್ಲಿ ಒಂದೇ ದಿನ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು!-ಒಂದೇ ಧರ್ಮವಿದೆ; ಅದು ಸನಾತನ ಧರ್ಮ - ಯೋಗಿ ಆದಿತ್ಯನಾಥ್-ಕಾಪು : ಆಲದ ಮರ ಉರುಳಿ ಬಿದ್ದು ಓರ್ವ ಸಾವು ; ಇಬ್ಬರಿಗೆ ಗಾಯ!-Gold Rate : ಇಳಿಕೆ ಕಂಡ ಚಿನ್ನದ ಬೆಲೆ ; 10 ಗ್ರಾಂ ಚಿನ್ನ - ಬೆಳ್ಳಿಯ ದರ ಇವತ್ತೆಷ್ಟಿದೆ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಭಾವನೊಂದಿಗೆ ಅನೈತಿಕ ಸಂಬಂಧ ಶಂಕೆ: ಪತ್ನಿ ಕೊಂದು ಬಾಮೈದನಿಗೆ ಮೆಸೇಜ್ ಕಳುಹಿಸಿ ಆರೋಪಿ ಪರಾರಿ

Twitter
Facebook
LinkedIn
WhatsApp
accident 1671448903 5

ಬೆಂಗಳೂರು: ಆರು ತಿಂಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದ ಪತ್ನಿಯನ್ನು ಅನೈತಿಕ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಕೊಂದು ಬಳಿಕ ಮೃತಳ ಸೋದರನಿಗೆ ಕೊಲೆ ಮಾಡಿರುವುದಾಗಿ ಸಂದೇಶ ಕಳುಹಿಸಿ ಪತಿ ಪರಾರಿ ಆಗಿರುವ ಘಟನೆ ಸದ್ದುಗುಂಟೆ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ತಾವರೆಕೆರೆ ಸಮೀಪದ ಸುಭಾಷ್‌ ನಗರದ ಅಪಾರ್ಚ್‌ಮೆಂಟ್‌ ನಿವಾಸಿ ನಾಜ್‌ ಖಾನಂ (22) ಕೊಲೆಯಾದ ದುರ್ದೈವಿ. ಕೃತ್ಯ ಎಸಗಿ ಪರಾರಿ ಆಗಿರುವ ಮೃತಳ ಪತಿ ನಾಸಿರ್‌ ಹುಸೇನ್‌ (30) ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಕೌಟುಂಬಿಕ ವಿಚಾರವಾಗಿ ದಂಪತಿ ಮಧ್ಯೆ ಭಾನುವಾರ ರಾತ್ರಿ ಜಗಳ ವಿಕೋಪಕ್ಕೆ ಹೋಗಿ ಹುಸೇನ್‌, ಪತ್ನಿಯ ಕತ್ತು ಹಿಸುಕಿ ಕೊಂದು ವಿಮಾನದ ಮೂಲಕ ಕೊಲ್ಕತ್ತಾಗೆ ಸೋಮವಾರ ಪರಾರಿಯಾಗಿದ್ದಾನೆ. ಇದಕ್ಕೂ ಮುನ್ನ ಮೃತಳ ಸೋದರನಿಗೆ ಎಸ್‌ಎಂಎಸ್‌ ಕಳುಹಿಸಿದ್ದ ಎಂದು ಪೊಲೀಸರು ಹೇಳಿದ್ದಾರೆ.

ಕೊಂದಿದ್ದೇನೆ, ಬಾಡಿ ತಗೊಂಡು ಹೋಗಿ: ಆರು ತಿಂಗಳ ಹಿಂದೆ ಪಶ್ಚಿಮ ಬಂಗಾಳದ ಕೋಲ್ಕತ್ತಾ ನಗರದ ನಾಸೀರ್‌ ಹುಸೇನ್‌ ಹಾಗೂ ನಾಜ್‌ ಖಾನಂ ಪ್ರೀತಿಸಿ ವಿವಾಹವಾಗಿದ್ದರು. ಕೆಲಸ ಅರಸಿಕೊಂಡು ನಗರಕ್ಕೆ ಬಂದಿದ್ದ ಆರೋಪಿ, ಮೊದಲು ನಾಜ್‌ ಖಾನಂ ಮನೆ ಪಕ್ಕದಲ್ಲೇ ವಾಸವಾಗಿದ್ದ. ಆಗ ಇಬ್ಬರಿಗೂ ಪರಿಚಯವಾಗಿ ಬಳಿಕ ಪ್ರೇಮವಾಗಿತ್ತು. ಹಾರ್ಡ್‌ವೇರ್‌ ಎಂಜಿನಿಯರ್‌ ಆಗಿದ್ದ ಹುಸೇನ್‌ಗೆ ಕೈ ತುಂಬಾ ಸಂಬಳ ಬರುತ್ತದೆ. ಸ್ಥಿತಿವಂತ ಎಂದು ಭಾವಿಸಿ ನಾಜ್‌ ಖಾನಂ ಕುಟುಂಬ ಮದುವೆ ಸಮ್ಮತಿಸಿತ್ತು. ಆದರೆ ಈ ವಿವಾಹಕ್ಕೆ ಹುಸೇನ್‌ ಕುಟುಂಬ ವಿರೋಧಿಸಿತು. ಕೊನೆಗೆ ತನ್ನ ಪೋಷಕರ ಗೈರು ಹಾಜರಿಯಲ್ಲೇ ನಾಜ್‌ ಖಾನಂ ಜತೆ ಆತ ವಿವಾಹವಾಗಿದ್ದ. ಮದುವೆ ನಂತರ ಸುಭಾಷ್‌ ನಗರದಲ್ಲಿ ಅವರು ನೆಲೆಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.

ಇತ್ತೀಚೆಗೆ ತನ್ನ ಪತ್ನಿ ನಡತೆ ಶಂಕಿಸಿದ ಆರೋಪಿ ಮನೆಯಲ್ಲಿ ಗಲಾಟೆ ಮಾಡುತ್ತಿದ್ದ. ಈ ಜಗಳದ ವಿಚಾರ ತಿಳಿದು ಅಳಿಯನಿಗೆ ನಾಜ್‌ ಕುಟುಂಬದವರು ಬುದ್ಧಿ ಹೇಳಿದ್ದರೂ ಸಹ ಆತ ಬದಲಾಗಲಿಲ್ಲ. ಈ ಕಲಹ ಹಿನ್ನೆಲೆಯಲ್ಲಿ 20 ದಿನಗಳ ಹಿಂದೆ ಸುಭಾಷ್‌ ನಗರಕ್ಕೆ ಅಪಾರ್ಚ್‌ಮೆಂಟ್‌ಗೆ ಆತ ವಾಸ್ತವ್ಯ ಬದಲಾಯಿಸಿದ. ಎಂದಿನಂತೆ ಭಾನುವಾರ ರಾತ್ರಿ ಕೂಡಾ ಪತ್ನಿ ಜತೆ ಆತ ಜಗಳ ಶುರು ಮಾಡಿದ್ದಾನೆ. ಆಗ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಇದರಿಂದ ಕೆರಳಿದ ಆರೋಪಿ, ಪತ್ನಿಯನ್ನು ಕೊಂದಿದ್ದಾನೆ.

ಸೋಮವಾರ ಬೆಳಗ್ಗೆ 10ಕ್ಕೆ ಮೃತಳ ಅಣ್ಣ ಆಯೂಬ್‌ ಖಾನ್‌ ಮೊಬೈಲ್‌ಗೆ ‘ನಿನ್ನ ತಂಗಿಯನ್ನು ಕೊಲೆ ಮಾಡಿದ್ದೇನೆ. ಬಂದು ಮೃತದೇಹವನ್ನು ತೆಗೆದುಕೊಂಡು ಹೋಗಿ’ ಎಂದು ಸಂದೇಶ ಕಳುಹಿಸಿ ಪರಾರಿಯಾಗಿದ್ದಾನೆ. ಈ ಸಂದೇಶ ನೋಡಿದ ಕೂಡಲೇ ಆತಂಕದಿಂದ ತಂಗಿಯ ಮನೆಗೆ ಖಾನ್‌ ಬಂದಿದ್ದಾರೆ. ಆಗ ತಂಗಿಗೆ ಕರೆ ಮಾಡಿದಾಗ ಕರೆ ಸ್ವೀಕರಿಸಿಲ್ಲ. ಕೊನೆಗೆ ಬಾಗಿಲು ಮುರಿದು ಒಳ ಪ್ರವೇಶಿಸಿದ ಮೃತದೇಹ ಪತ್ತೆಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಮೃತಳ ಭಾವನಿಗೂ ಕೊಲ್ಲುವ ಸಂದೇಶ
ತನ್ನ ಪತ್ನಿಯು ಆಕೆಯ ಅಕ್ಕನ ಗಂಡ ಇಲಿಯಾಸ್‌ ಜತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿ ಶಂಕಿಸಿದ್ದ. ಈ ಅನುಮಾನದಿಂದ ಪತ್ನಿ ಕೊಂದ ಬಳಿಕ ಆತ, ಇಲಿಯಾಸ್‌ಗೆ ‘ನಿನ್ನನ್ನು ಕೊಲ್ಲುತ್ತೇನೆ’ ಎಂದು ಸಂದೇಶ ಕಳುಹಿಸಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ