ಬುಧವಾರ, ಫೆಬ್ರವರಿ 5, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮಂಗಳೂರು ಏರ್‌ಪೋರ್ಟ್‌ಗೆ ಬರ್ತಿದೆ ಕೋಟ್ಯಂತರ ಮೌಲ್ಯದ ಚಿನ್ನ, ಸಾಥ್​ ನೀಡ್ತಿದಾರೆ ಕೇರಳ ಯುವಕರು!

Twitter
Facebook
LinkedIn
WhatsApp
WhatsApp Image 2023 01 24 at 12.07.10 PM 1

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (Mangaluru Airport) ಇತ್ತೀಚೆಗೆ ಹೆಚ್ಚು ಹೆಚ್ಚು ಅಕ್ರಮ ಚಿನ್ನ ಸಾಗಾಟಕ್ಕೆ ಸಾಕ್ಷಿಯಾಗ್ತಿದೆ. ತಿಂಗಳಿಗೆ ನಾಲ್ಕೈದು ಅಕ್ರಮ ಚಿನ್ನ ಸಾಗಾಟದ ಕೇಸ್‌ಗಳು ಪತ್ತೆಯಾಗ್ತಿದ್ದು, ದುಬೈನಿಂದ ಭಾರೀ ಪ್ರಮಾಣದಲ್ಲಿ ಚಿನ್ನವನ್ನ ತರಲಾಗುತ್ತಿದೆ. ಈ ಚಿನ್ನ ಸಾಗಾಟದ ಹಿಂದೆ (Gold smuggling) ಜ್ಯುವೆಲ್ ಮಾಫಿಯಾ ಕೈವಾಡದ ಅನುಮಾನ ಮೂಡಿದೆ. ಹೌದು.. ಅದು ಮಂಗಳೂರು ಇಂಟರ್‌ನ್ಯಾಷನಲ್ ಏರ್‌ಪೋರ್ಟ್. ಪ್ರತಿ ನಿತ್ಯ ಹತ್ತಾರು ವಿದೇಶಿ ವಿಮಾನಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗುತ್ತವೆ. ಕರ್ನಾಟಕದ ಕರಾವಳಿ, ಮಲೆನಾಡು ಭಾಗದ ಪ್ರಯಾಣಿಕರಿಗಿಂತಲೂ ಹೆಚ್ಚಾಗಿ ಕೇರಳ ಭಾಗದ ಕಾಸರಗೋಡು, ಕೊಚ್ಚಿ ಭಾಗದ ಪ್ರಯಾಣಿಕರೇ ಹೆಚ್ಚಾಗಿ ಮಂಗಳೂರಿನಲ್ಲಿ ಇಳಿಯುತ್ತಿದ್ದಾರೆ. ಅದರಲ್ಲೂ ದುಬೈನಿಂದ ನಿತ್ಯ ನೂರಾರು ಕೇರಳ ಪ್ರಯಾಣಿಕರು (Malayalis) ಬರ್ತಾ ಇದ್ದು, ಮಂಗಳೂರು ಏರ್‌ಪೋರ್ಟ್ ಇವರಿಗೆ ಪ್ರಮುಖ ಕೇಂದ್ರ

ಆದ್ರೆ ಹೀಗೆ ದುಬೈನಿಂದ ಬರೋ ಪ್ರಯಾಣಿಕರ ತಪಾಸಣೆಯ ವೇಳೆ ಹಲವು ಪ್ರಯಾಣಿಕರ ಬಳಿ ಅಕ್ರಮ ಚಿನ್ನ ಪತ್ತೆಯಾಗಿದೆ. ಕೇವಲ ಅಕ್ಟೋಬರ್‌ನಿಂದ ಈ ಜನವರಿವರೆಗೆ ಹತ್ತಕ್ಕೂ ಹೆಚ್ಚು ಗೋಲ್ಡ್ ಸ್ಮಗ್ಲಿಂಗ್ ಕೇಸ್‌ಗಳು ಮಂಗಳೂರು ಏರ್‌ಪೋರ್ಟ್ ನಲ್ಲಿ ಪತ್ತೆಯಾಗಿವೆ. ಇದರ ಹಿಂದೆ ಜ್ಯುವೆಲ್ಲರಿ ಮಾಫಿಯಾ ಕೈವಾಡದ ಅನುಮಾನವಿದೆ ಎಂದು ಧರ್ಮೇಂದ್ರ, ರಾಜ್ಯ ಪ್ರಧಾನ ಕಾರ್ಯದರ್ಶಿ, ಅಖಿಲಾ ಭಾರತ ಹಿಂದೂ ಮಹಾಸಭಾ ಅವರು ಹೇಳಿದ್ದಾರೆ.

ಏರ್‌ಪೋರ್ಟ್‌ನ ಕಸ್ಟಮ್ ಅಧಿಕಾರಿಗಳ ತಪಾಸಣೆ ವೇಳೆ ನಾನಾ ವಿಧದಲ್ಲಿ ಚಿನ್ನ ಸಾಗಿಸೋದು ಬೆಳಕಿಗೆ ಬಂದಿದೆ. ಕೆಲವರು ಚಿನ್ನವನ್ನು ಪೇಸ್ಟ್, ಪೌಡರ್ ರೂಪದಲ್ಲಿ ತಂದರೆ, ಇನ್ನು ಕೆಲವರು ಗುದದ್ವಾರ, ಕುಕ್ಕರ್, ಎಲ್.ಇ.ಡಿ ಬಲ್ಬ್, ವಾಚ್, ಕೀಪ್ಯಾಡ್ ಮೊಬೈಲ್ ಫೋನ್, ಅಂಡರ್‌ವೇರ್, ಸಾಕ್ಸ್‌ನ ಒಳಗೆ ಸೇರಿ ಹತ್ತಾರು ವಿಧದಲ್ಲಿ ಚಿನ್ನವನ್ನ ಸಾಗಾಟ ಮಾಡಿರೋದು ಬೆಳಕಿಗೆ ಬಂದಿದೆ.

ಆದ್ರೆ ಹೀಗೆ ಅಕ್ರಮ ಚಿನ್ನ ಸಾಗಾಟದಲ್ಲಿ ಕೇರಳದ ಕಾಸರಗೋಡು ಭಾಗದ ಪ್ರಯಾಣಿಕರೇ ಅರೆಸ್ಟ್ ಆಗ್ತಿದ್ದು, ಲಕ್ಷದಿಂದ ಕೋಟಿ ಮೌಲ್ಯದ ಚಿನ್ನವನ್ನು ಸಾಗಿಸಿ ಸಿಕ್ಕಿ ಹಾಕಿಕೊಳ್ಳುತ್ತಿದ್ದಾರೆ. ಹೀಗೆ ಕಳೆದ ಮೂರೂವರೆ ತಿಂಗಳ ಅವಧಿಯಲ್ಲಿ ಬರೋಬ್ಬರಿ 9 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಅಕ್ರಮ ಚಿನ್ನ ಮಂಗಳೂರು ಏರ್‌ಪೋರ್ಟ್‌‌ನಲ್ಲಿ ಪತ್ತೆಯಾಗಿದೆ. ಅದರಲ್ಲೂ ಜನವರಿ ತಿಂಗಳ ಕೇವಲ 18 ದಿನದಲ್ಲಿ 2 ಕೋಟಿ ಮೌಲ್ಯದ ಚಿನ್ನ ಕಸ್ಟಮ್ಸ್ ಅಧಿಕಾರಿಗಳ ವಶವಾಗಿದೆ.

ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಬಂಧಿತರಾದ ಬಹುತೇಕರು ವರ್ಷಗಳ ಹಿಂದಷ್ಟೇ ದುಬೈಗೆ ಹೋಗಿ ವಾಪಸ್ ಬಂದಿರೋದು ಗೊತ್ತಾಗಿದೆ. ಹೀಗಾಗಿ ಜ್ಯುವೆಲ್ಲರಿಗಳ ಮಾಫಿಯಾದ ಪ್ರಭಾವಕ್ಕೆ ಒಳಗಾಗಿ ಯುವಕರು ಚಿನ್ನ ತರೋದಕ್ಕೆಂದೇ ವಿದೇಶಕ್ಕೆ ಹೋಗ್ತಿದ್ದಾರಾ? ಎಂಬ ಅನುಮಾನ ಮೂಡಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist