ಶುಕ್ರವಾರ, ಡಿಸೆಂಬರ್ 1, 2023
ಶಿಕ್ಷಕಿ ಅರ್ಪಿತಾ ಅಪಹರಣ ಪ್ರಕರಣ ; ನೆಲ್ಯಾಡಿಯಲ್ಲಿ ಸಿಕ್ಕಿಬಿದ್ದ ಕಿಡ್ನಾಪರ್..!-ಪ್ರಿಯಕರನಿಗಾಗಿ ಪಾಕಿಸ್ತಾನಕ್ಕೆ ಹೋಗಿ ಭಾರತಕ್ಕೆ ವಾಪಸ್ಸಾದ ಅಂಜು; ತಾಯಿ ಬೇಕಾಗಿಲ್ಲ ಎಂದ ಮಕ್ಕಳು..!-ಗೃಹ ಪ್ರವೇಶ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಅಪಘಾತ ; ದಂಪತಿ ಸಾವು!-Gold Rate : ಇಂದು ಚಿನ್ನದ ದರ ಇಳಿಕೆ ; ಇಲ್ಲಿದೆ ಇಂದಿನ ಚಿನ್ನ- ಬೆಳ್ಳಿಯ ದರದ ಅಪ್ಡೇಟ್ಸ್-ವಾಣಿಜ್ಯ ಬಳಕೆಯ ಎಲ್​ಪಿಜಿ ಸಿಲಿಂಡರ್​ ಬೆಲೆ ಏರಿಕೆ!-ಇಂದು ಭಾರತ - ಆಸ್ಟ್ರೇಲಿಯಾ ನಡುವೆ 4 ನೇ ಟಿ-20 ; ಆಸ್ಟ್ರೇಲಿಯದ ಪ್ರಮುಖ ಆಟಗಾರರು ತವರಿಗೆ!-ಮಧು, ಮಂಕಾಲ ವೈದ್ಯ ಕರಾವಳಿಗೆ ಭೇಟಿ- ಹರೀಶ್ ಕುಮಾರ್, ಜಯಪ್ರಕಾಶ್ ಹೆಗ್ಡೆ ಹೆಸರು ಮುಂಚೂಣಿಯಲ್ಲಿ?-ಇಂದಿನಿಂದ ಸಿಮ್ ಕಾರ್ಡ್ ಪಡೆಯಲು ಹೊಸ ನಿಯಮ ; ಟೆಲಿಕಾಂ ಕ್ಷೇತ್ರದಲ್ಲಿ ಬದಲಾವಣೆ!-ಮದುವೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿಯ ಅಪಹರಣ!-ಮಕ್ಕಳ ಮಾರಾಟ ಪ್ರಕರಣ; ತರಕಾರಿ ಮಾರುತ್ತಲೇ ಮಹಿಳೆಯಿಂದ ಡೀಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಮಾನಸಿಕ ಖಿನ್ನತೆ – 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

Twitter
Facebook
LinkedIn
WhatsApp
ಮಾನಸಿಕ ಖಿನ್ನತೆ – 7ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ಮಡಿಕೇರಿ: ಖಿನ್ನತೆಯಿಂದ (Mental Depression) ಬಳಲುತ್ತಿದ್ದ 7ನೇ ತರಗತಿಯ ವಿದ್ಯಾರ್ಥಿನಿ ತಮ್ಮ ಮನೆಯಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆಗೆ (Suicide) ಶರಣಾಗಿರುವ ಘಟನೆ ಕೊಡಗು (Kodagu) ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಹಳ್ಳಿ ಗ್ರಾಮದಲ್ಲಿ ನಡೆದಿದೆ.

ಶಿವರಹಳ್ಳಿ ಗ್ರಾಮದ ಜಿತೇಂದ್ರ-ಅಕ್ಷತಾ ದಂಪತಿಯ ಪುತ್ರಿ ವೈಷ್ಣವಿ (13) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ.

ಶನಿವಾರಸಂತೆ ಪೊಲೀಸ್ ಠಾಣೆಯಲ್ಲಿ (Shanivarasanthe Police Station) ಪ್ರಕರಣ ದಾಖಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶನಿವಾರಸಂತೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ.

ಒಂದು ವಾರದಿಂದ ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿನಿ: ಹಲವು ದಿನಗಳಿಂದ ಖಿನ್ನತೆಗೆ ಒಳಗಾಗಿದ್ದ ವೈಷ್ಣವಿ (13) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಆಗಿದ್ದಾಳೆ. ಈ ಘಟನೆಯು ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಶಿವರಳ್ಳಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಈಕೆ ಜಿತೇಂದ್ರ ಅಕ್ಷತ ದಂಪತಿಯ ಪುತ್ರಿ ಆಗಿದ್ದಳು. ಸೊಮವಾರಪೇಟೆಯ ಖಾಸಗಿ ಶಾಲೆಯಲ್ಲಿ ಮೃತ ವಿದ್ಯಾರ್ಥಿನಿ 7 ತರಗತಿ ಓದುತ್ತಿದ್ದಳು. ಆದರೆ, ಪರೀಕ್ಷೆ ಆರಂಭವಾದ ಒಂದು ವಾರದಿಂದಲೂ ವೈಷ್ಣವಿ ತೀವರ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದಳು. ಈ ಬಗ್ಗೆ ಮನೆಯವರು ಕೇಳಿದ್ದರೂ ಯಾವುದನ್ನೂ ಹೇಳಿಕೊಂಡಿರಲಿಲ್ಲ ಎಂದು ತಿಳಿದುಬಂದಿದೆ.

ಓದಿಕೊಳ್ಳಲು ಬಿಟ್ಟರೆ ಆತ್ಮಹತ್ಯೆ ಮಾಡಿಕೊಂಡ ಮಗಳು: ಇಂದು ಭಾನುವಾರ ರಜಾ ದಿನವಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಒಬ್ಬಳನ್ನೇ ಓದಿಕೊಳ್ಳುವಂತೆ ಬಿಟ್ಟು ಪಾಲಕರು ಹೊರಗೆ ಹೋಗಿದ್ದಾರೆ. ಆದ್ದರಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಈಕೆ ಏಕಾಏಕಿ ಆತ್ಮಹತ್ಯೆ ಮಾಡಿಕೊಳ್ಳುವ ದೃಢ ನಿರ್ಧಾರಕ್ಕೆ ಬಂದಿದ್ದಾಳೆ. ಅದರಂತೆ ತಮ್ಮ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾಳೆ. ಮಗಳ ಸಾವನ್ನು ನೋಡಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ