ಮಂಗಳವಾರ, ಫೆಬ್ರವರಿ 18, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್ ಖಾನ್ ಜೈಲಿನಲ್ಲೇ ಶಿರಚ್ಛೇದ..!

Twitter
Facebook
LinkedIn
WhatsApp
ಮುಂಬೈ ಸರಣಿ ಸ್ಫೋಟದ ಆರೋಪಿ ಮೊಹಮ್ಮದ್ ಖಾನ್ ಜೈಲಿನಲ್ಲೇ ಶಿರಚ್ಛೇದ..!

1993ರ ಮುಂಬೈ ಬಾಂಬ್ ಸ್ಫೋಟ(Bomb Blast)ದ ಆರೋಪಿ ಮೊಹಮ್ಮದ್ ಅಲಿ ಖಾನ್​ರನ್ನು ಕೊಲ್ಲಾಪುರ ಜೈಲಿನಲ್ಲಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಪೊಲೀಸರ ಪ್ರಕಾರ, ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳು ಭಾನುವಾರ (ಜೂನ್ 2) ಈ ಕೊಲೆ ಮಾಡಿದ್ದಾರೆ. ಈ ಆರೋಪಿಗಳು ಮೊಹಮ್ಮದ್ ಅಲಿ ಖಾನ್ ಅವರ ಶಿರಚ್ಛೇದ ಮಾಡಿದ್ದು, ನಂತರ ಆತ ಸಾವನ್ನಪ್ಪಿದ್ದಾನೆ ಎಂದು ಹೇಳಲಾಗಿದೆ.

1993ರ ಮುಂಬೈ ಸ್ಫೋಟದ ನಾಲ್ವರು ಅಪರಾಧಿಗಳನ್ನು ಕೊಲ್ಲಾಪುರ ಜೈಲಿನಲ್ಲಿ ಇರಿಸಲಾಗಿದ್ದು, ಒಬ್ಬ ಅಪರಾಧಿಯ ಹೆಸರು ಮೊಹಮ್ಮದ್ ಅಲಿ ಖಾನ್. ಇನ್ನೊಂದು ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಐವರು ಆರೋಪಿಗಳನ್ನು ಮೊಹಮ್ಮದ್ ಅಲಿ ಖಾನ್ ಎಂಬುವವರ ಬ್ಯಾರಕ್‌ನಲ್ಲಿ ಇರಿಸಲಾಗಿತ್ತು.

ಕೊಲೆ ಮಾಡಿದ ಆರೋಪಿಗಳ ಹೆಸರು ಪ್ರತೀಕ್ ಪಾಟೀಲ್, ದೀಪಕ್ ಖೋಟ್, ಸಂದೀಪ್ ಚವ್ಹಾಣ್, ರಿತುರಾಜ್ ಇನಾಮದಾರ್ ಮತ್ತು ಸೌರಭ್ ಸಿದ್ಧ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಲು ಇಲಾಖೆಯ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಸ್ವಾತಿ ಸಾಠೆ ಪ್ರಕಾರ, ಮೃತ ಮೊಹಮ್ಮದ್ ಅಲಿ ಖಾನ್ ಸೇರಿದಂತೆ ಈ ಎಲ್ಲಾ ಆರೋಪಿಗಳು ಒಂದೇ ಬ್ಯಾರಕ್‌ನಲ್ಲಿ ಇದ್ದರು. ಇದರಿಂದಾಗಿ ಅವರ ನಡುವೆ ಏನಾದರೂ ಜಗಳವಾಗಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದರು.

ಕೊಲ್ಲಾಪುರ ಜೈಲಿನಲ್ಲಿರುವ ಮುಂಬೈ ಸ್ಫೋಟದ ಇತರ ಆರೋಪಿಗಳ ಭದ್ರತೆಯನ್ನು ಜೈಲು ಇಲಾಖೆ ಹೆಚ್ಚಿಸಿದೆ. ಜೈಲಿನೊಳಗೆ ನಡೆದ ಈ ಹತ್ಯೆಗೆ ಪ್ರಮುಖ ಕಾರಣ ಏನು ಎಂಬ ಬಗ್ಗೆ ತನಿಖೆ ಆರಂಭಿಸಲಾಗಿದೆ.ಮುಂಬೈ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮೊಹಮ್ಮದ್ ಅಲಿ ಖಾನ್ ಅಲಿಯಾಸ್ ಮುನ್ನಾ ಅಲಿಯಾಸ್ ಮನೋಜ್ ಕುಮಾರ್ ಭನ್ವರ್‌ಲಾಲ್ ಗುಪ್ತಾ ಕೋಲ್ಹಾಪುರ ಜೈಲಿನಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ. ಐವರು ಆರೋಪಿಗಳ ವಿರುದ್ಧ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಾರ್ಚ್ 12, 1993 ರಂದು, ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್‌ನ 28 ಅಂತಸ್ತಿನ ಕಟ್ಟಡದ ನೆಲಮಾಳಿಗೆಯಲ್ಲಿ ಸಂಭವಿಸಿದ ಬೃಹತ್ ಸ್ಫೋಟದಲ್ಲಿ 50 ಜನರು ಸಾವನ್ನಪ್ಪಿದರು. ಅರ್ಧ ಗಂಟೆಯ ನಂತರ, ಕಾರಿನಲ್ಲಿ ಎರಡನೇ ಸ್ಫೋಟ ಸಂಭವಿಸಿತು ಮತ್ತು ನಂತರ ಒಂದರ ನಂತರ ಒಂದರಂತೆ ಸರಣಿ ಸ್ಫೋಟಗಳು ಪ್ರಾರಂಭವಾದವು. ಎರಡು ಗಂಟೆಗಳಲ್ಲಿ ಮುಂಬೈನ 12 ಸ್ಥಳಗಳಲ್ಲಿ 13 ಸ್ಫೋಟಗಳು ಸಂಭವಿಸಿವೆ. ಈ ಸರಣಿ ಸ್ಫೋಟಗಳಲ್ಲಿ 257 ಜನರು ಸಾವನ್ನಪ್ಪಿದ್ದರು ಮತ್ತು 713 ಜನರು ಗಾಯಗೊಂಡಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist