ಭಾನುವಾರ, ಮಾರ್ಚ್ 26, 2023
ಇಂದು ಮಹಿಳಾ ಪ್ರೀಮಿಯರ್ ಲೀಗ್ ಫೈನಲ್; ಮುಂಬೈ vs ಡೆಲ್ಲಿ ಫೈನಲ್ ಫೈಟ್-ಬಂಟ್ವಾಳ: ಸರಕಾರಿ ಬಸ್ಸಿನಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ- ಕಂಡಕ್ಟರ್‌ ಅರೆಸ್ಟ್-ರಾಹುಲ್ ಗಾಂಧಿಯನ್ನು "ಹುತಾತ್ಮನ ಮಗ" ಎಂದು ಕರೆದ ಪ್ರಿಯಾಂಕಾ ಗಾಂಧಿ ವಾದ್ರಾ-ಉತ್ತರಾಖಂಡ್:‌ ಸಿಡಿಲು ಬಡಿದು 350 ಕ್ಕೂ ಹೆಚ್ಚು ಕುರಿ, ಮೇಕೆಗಳು ಮೃತ್ಯು!-Redmi Note 12 Turbo: ಮೊಬೈಲ್ ಪ್ರಿಯರ ನಿದ್ದೆ ಕದ್ದಿರುವ "ರೆಡ್ಮಿ ನೋಟ್ 12 ಟರ್ಬೋ" ಮಾರ್ಚ್ 28 ರಂದು ಬಿಡುಗಡೆ-ಇಸ್ರೋ ಮತ್ತೊಂದು ಮೈಲಿಗಲ್ಲು; 36 ಉಪಗ್ರಹಗಳ ಯಶಸ್ವಿ ಉಡಾವಣೆ-ಭವಿಷ್ಯ ಹೇಳುತ್ತಿದ್ದ ಸ್ನೇಹಿತನಿಗೆ ಕಲ್ಲಿನಿಂದ ಹೊಡೆದು ಹತ್ಯೆ-ಟೀಂ ಇಂಡಿಯಾದಲ್ಲಿ ಮತ್ತೆ `ಸೂರ್ಯʼ ಉದಯಿಸುತ್ತೆ – ಮಿಸ್ಟರ್‌ 360ಗೆ ಯುವರಾಜ್‌ ಸಿಂಗ್‌ ಬೆಂಬಲ-ಪಂತ್ ಬಗ್ಗೆ ಪ್ರಶ್ನಿಸಿದಕ್ಕೆ ಗರಂ ಆದ ನಟಿ ಊರ್ವಶಿ; ವಿಡಿಯೋ ವೈರಲ್-ಕನ್ನಡದಲ್ಲೇ ಮೆಡಿಕಲ್, ಇಂಜಿನಿಯರಿಂಗ್ ಶಿಕ್ಷಣ ಸಿಗಲಿದೆ: ಮೋದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

'ಮುಜ್ಹೇ ಚಲ್ತೇ ಜಾನಾ ಹೈ: ಮೋದಿ ಸರ್ಕಾರದ ಸಾಧನೆಯನ್ನು ತೋರಿಸುವ ಅನಿಮೇಟೆಡ್ ವಿಡಿಯೊ ಟ್ವೀಟ್ ಮಾಡಿದ ಬಿಜೆಪಿ

Twitter
Facebook
LinkedIn
WhatsApp
modi

‘ಸ್ವಚ್ಛ ಭಾರತ್ ಮಿಷನ್’, ‘ಪ್ರಧಾನ ಮಂತ್ರಿ ಮುದ್ರಾ ಯೋಜನೆ’, ‘ಉಜ್ವಲ ಯೋಜನೆ’, ‘ಜನ್ ಧನ್ ಯೋಜನೆ’, ‘ಜೀವನ ಜ್ಯೋತಿ ಬಿಮಾ ಯೋಜನೆ’, ‘ಪಿಎಂ ಆವಾಸ್ ಯೋಜನೆ’ ಮತ್ತು ‘ಫಸಲ್ ಬಿಮಾ ಯೋಜನಾ’ ವನ್ನು ಇಲ್ಲಿ ಹೈಲೈಟ್ ಮಾಡಲಾಗಿದೆ.

ಬಿಜೆಪಿ (BJP) ಮಂಗಳವಾರ 2007 ರಿಂದ ಇಲ್ಲಿಯವರೆಗೆ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಪ್ರಯಾಣವನ್ನು ಚಿತ್ರಿಸುವ ಅನಿಮೇಟೆಡ್ ವಿಡಿಯೊವನ್ನು ಹಂಚಿಕೊಂಡಿದ್ದು ಅದರಲ್ಲಿ ಮೋದಿ (Modi) ಸರ್ಕಾರದ ಎಲ್ಲಾ ಪ್ರಮುಖ ಸಾಧನೆಗಳು ಮತ್ತು ವಿರೋಧ ಪಕ್ಷಗಳ ವಿಫಲ ದಾಳಿಗಳನ್ನು ತೋರಿಸಲಾಗಿದೆ. ಇದರಲ್ಲಿ ವಿಪಕ್ಷಗಳು ಮೋದಿಯನ್ನು ಮೌತ್ ಕಾ ಸೌದಾಗರ್ ಎಂದು ಟೀಕಿಸಿರುವುದು, ಚಾಯ್ ವಾಲಾ ಎಂದು ಲೇವಡಿ ಮಾಡಿರುವುದನ್ನು ತೋರಿಸಲಾಗಿದೆ.

ಗುಜರಾತ್‌ನ ಮುಖ್ಯಮಂತ್ರಿಯಾಗಿದ್ದು 2014 ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರಧಾನಿ ಹುದ್ದೆಯ ಗುರಿಯನ್ನು ಹೊಂದಿರುವ ಮೋದಿ ಅಲ್ಲಿವರೆಗೆ ಹೇಗೆ ತಲುಪಿದರು ಎಂದು ವಿವರಿಸುವ ಅವರು ನಾಲ್ಕು ನಿಮಿಷಗಳ ಅವಧಿಯ ವಿಡಿಯೊ ಇದಾಗಿದೆ. ಅವರು ಪ್ರಧಾನಿ ಕುರ್ಚಿಯತ್ತ ಸಾಗುವ ಮೆಟ್ಟಿಲುಗಳ ಮೇಲೆ ನಡೆಯಲು ಪ್ರಾರಂಭಿಸಿದಾಗ, ಅವರನ್ನು ಸೋನಿಯಾ ಗಾಂಧಿ ಅವರು ‘ಮೌತ್ ಕಾ ಸೌದಾಗರ್’ ಎಂದು ಉಲ್ಲೇಖಿಸುತ್ತಾರೆ. ಎಲ್ಲಾ ದಾಳಿಗಳನ್ನು ವಿರೋಧಿಸಿ, ಮೋದಿ ಅವರು ತಮ್ಮ ನಡಿಗೆಯನ್ನು ಮುಂದುವರಿಸುವುದನ್ನು ಕಾಣಬಹುದು. ‘ಚಾಯ್‌ವಾಲಾ’ ಎಂದು ಕರೆದು ಅಮೆರಿಕ ವೀಸಾ ನಿಷೇಧಕ್ಕಾಗಿ ಲೇವಡಿ ಮಾಡಲಾಗುತ್ತಿದೆ. 2014 ರಲ್ಲಿ ಪ್ರಧಾನಿಯಾದ ನಂತರ, ಆಗಿನ ಅಧ್ಯಕ್ಷ ಬರಾಕ್ ಒಬಾಮಾ ಮೋದಿಗೆ ‘ಯುಎಸ್‌ಗೆ ಆಹ್ವಾನ’ ನೀಡುವುದನ್ನು ಇದರಲ್ಲಿ ಚಿತ್ರಿಸಲಾಗಿದೆ.

‘ಸ್ವಚ್ಛ ಭಾರತ್ ಮಿಷನ್’, ‘ಪ್ರಧಾನ ಮಂತ್ರಿ ಮುದ್ರಾ ಯೋಜನೆ’, ‘ಉಜ್ವಲ ಯೋಜನೆ’, ‘ಜನ್ ಧನ್ ಯೋಜನೆ’, ‘ಜೀವನ ಜ್ಯೋತಿ ಬಿಮಾ ಯೋಜನೆ’, ‘ಪಿಎಂ ಆವಾಸ್ ಯೋಜನೆ’ ಮತ್ತು ‘ಫಸಲ್ ಬಿಮಾ ಯೋಜನಾ’ ವನ್ನು ಇಲ್ಲಿ ಹೈಲೈಟ್ ಮಾಡಲಾಗಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ರಫೇಲ್ ಆರೋಪ ಮಾಡಿದ್ದು ಕೂಡಾ ಇದರಲ್ಲಿದೆ. ತನ್ನ ಎರಡನೇ ಅವಧಿಯ ಅಧಿಕಾರದ ಅವಧಿಯಲ್ಲಿ, ಯುಎಸ್ ನಿರ್ಮಿತ ಫೈಜರ್ ಮತ್ತು ಮಾಡರ್ನಾ ಲಸಿಕೆಗಳ ಮೇಲೆ ಕೋವಿಡ್ ಸಾಂಕ್ರಾಮಿಕ ರೋಗವನ್ನು ಎದುರಿಸಲು ಮೋದಿ ‘ಭಾರತೀಯ ಲಸಿಕೆ’ ಅನ್ನು ಆಯ್ಕೆ ಮಾಡುತ್ತಾರೆ.

ಕೊನೆಗೆ, ‘ಗೌತಮ್ ದಾಸ್’, ‘ಮೋದಿ ತೇರಿ ಖಬರ್ ಕೂದೇಗಿ’ ಮತ್ತು ‘ನೀಚ್’ ಸೇರಿದಂತೆ ಇತರ ದೂಷಣೆಗಳಿಂದ ಪ್ರಭಾವಿತವಾಗದೆ, ಅವರು ‘5 ಟ್ರಿಲಿಯನ್ ಡಾಲರ್ ಆರ್ಥಿಕತೆ’ ಗುರಿಯತ್ತ ಸಾಗುತ್ತಿರುವುದನ್ನು ತೋರಿಸಿ ವಿಡಿಯೊ ಮುಕ್ತಾಯಗೊಳ್ಳುತ್ತದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ