ಗುರುವಾರ, ಫೆಬ್ರವರಿ 6, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೇಕೆ ಕಿವಿ ಮನುಷ್ಯರಿಗೆ ಅಳವಡಿಕೆ

Twitter
Facebook
LinkedIn
WhatsApp
ಮೇಕೆ ಕಿವಿ ಮನುಷ್ಯರಿಗೆ ಅಳವಡಿಕೆ

ಕೋಲ್ಕತ್ತಾದಲ್ಲಿ ವೈದ್ಯಕೀಯ ಲೋಕವನ್ನೇ ವಿಸ್ಮಯಕ್ಕೀಡುಮಾಡುವಂಥ ಶಸ್ತ್ರಚಿಕಿತ್ಸೆಯೊಂದು ನಡೆದಿದೆ. ಮೇಕೆ ಕಿವಿಗಳನ್ನು ಮನುಷ್ಯರಿಗೆ ಅಳವಡಿಸಲಾಗಿದೆ. ವಿಶೇಷ ಅಂದ್ರೆ ಕೋಲ್ಕತ್ತಾದ ಸರ್ಕಾರಿ ಆಸ್ಪತ್ರೆಯಲ್ಲಿ ಈ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಹುಟ್ಟಿದಾಗಿನಿಂದ್ಲೇ ಸೀಳು ತುಟಿಗಳಂತಹ ದೈಹಿಕ ವಿರೂಪಗಳನ್ನೂ ಹೊಂದಿದ್ದ 25 ಜನರಿಗೆ ಶಸ್ತ್ರಚಿಕಿತ್ಸೆ ಮಾಡಲಾಗಿದೆ.

ಆಪರೇಷನ್‌ ಯಶಸ್ವಿಯಾದ ಬಳಿಕ ಅವರ ಮುಖದ ಸೌಂದರ್ಯವೂ ಮರಳಿದೆ. ಕೋಲ್ಕತ್ತಾದ ಆರ್ ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಹಮ್ಮಿಕೊಳ್ಳಲಾಗಿತ್ತು. ಪಶ್ಚಿಮ ಬಂಗಾಳದ ಪ್ರಾಣಿ ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದ ವೈದ್ಯರು ಮತ್ತು ವಿಜ್ಞಾನಿಗಳು ಈ ಯಶಸ್ಸನ್ನು ಸಾಧಿಸಿದ್ದಾರೆ. ಮೇಕೆಯ ಕಿವಿಯ ಕಾರ್ಟಿಲೆಜ್ ಅನ್ನು ಮಾನವ ದೇಹದ ವಿರೂಪಗಳನ್ನು ಸರಿಪಡಿಸಲು ಬಳಸಲಾಗಿದೆ.

ಅನೇಕರು ಸೀಳು ತುಟಿ ಅಥವಾ ಹೊರಕಿವಿಯ ವಿರೂಪತೆಯಿಂದ ಜನಿಸುತ್ತಾರೆ. ಅಪಘಾತಗಳಿಂದ ಅನೇಕ ಬಾರಿ ದೈಹಿಕ ವಿರೂಪಗಳು ಸಂಭವಿಸುತ್ತವೆ. ಇದನ್ನು ಪ್ಲಾಸ್ಟಿಕ್ ಸರ್ಜರಿ ಮೂಲಕ ಚಿಕಿತ್ಸೆ ಸರಿಪಡಿಸಲಾಗುತ್ತದೆ. ಪ್ಲಾಸ್ಟಿಕ್ ಸರ್ಜರಿ ದುಬಾರಿ ಮತ್ತು ಸಂಕೀರ್ಣವಾಗಿದೆ. ಮಾನವ ದೇಹವು ದೀರ್ಘಕಾಲದವರೆಗೆ ಪ್ಲಾಸ್ಟಿಕ್ ಮತ್ತು ಸಿಲಿಕಾನ್ ಅಳವಡಿಸುವಿಕೆಯನ್ನು ಸ್ವೀಕರಿಸುವುದಿಲ್ಲ ಎಂದು ಆಸ್ಪತ್ರೆಯ ಪ್ಲಾಸ್ಟಿಕ್ ಸರ್ಜರಿ ವಿಭಾಗದ ಮುಖ್ಯಸ್ಥ ಡಾ.ರೂಪ್ ನಾರಾಯಣ ಭಟ್ಟಾಚಾರ್ಯ ಮಾಹಿತಿ ನೀಡಿದ್ದಾರೆ.

ಪಶುವೈದ್ಯಕೀಯ ಶಸ್ತ್ರಚಿಕಿತ್ಸಕ ಡಾ.ಶಮಿತ್ ನಂದಿ ಮತ್ತು ಸೂಕ್ಷ್ಮ ಜೀವವಿಜ್ಞಾನಿ ಡಾ.ಸಿದ್ಧಾರ್ಥ ಜೋರ್ಡರ್ ಮಾತನಾಡಿ, 2013 ರಿಂದ ಮಾನವ ದೇಹಕ್ಕೆ ಸೂಕ್ತವಾದ ಸಿಲಿಕಾನ್‌ ಮತ್ತು ಪ್ಲಾಸ್ಟಿಕ್ ಕಸಿಗಳಿಗೆ ಸುಲಭವಾಗಿ ಲಭ್ಯವಿರುವ, ಹೊಂದಿಕೊಳ್ಳುವ ಆದರೆ ದೃಢವಾದ ಪರ್ಯಾಯಕ್ಕಾಗಿ ಹುಡುಕಾಟ ನಡೆಯುತ್ತಿದೆ ಎಂದರು. ಮೇಕೆ ಕಿವಿಗಳನ್ನೇ ಏಕೆ ಆರಿಸಲಾಯ್ತು ಎಂಬ ಪ್ರಶ್ನೆಗೂ ತಜ್ಞರು ಉತ್ತರಿಸಿದ್ದಾರೆ.

ಮೇಕೆ ಕಿವಿಗಳು ಸುಲಭವಾಗಿ ದೊರೆಯುತ್ತವೆ. ಅವುಗಳಿಂದ ಯಾವುದೇ ನಿರ್ದಿಷ್ಟ ಉಪಯೋಗವಿಲ್ಲ. ಇವುಗಳನ್ನು ಎಸೆಯಲಾಗುತ್ತದೆ. ಹಾಗಾಗಿ ಮೇಕೆ ಕಿವಿಗಳನ್ನು ಆಯ್ಕೆ ಮಾಡಲಾಗಿದೆಯಂತೆ. ಈ ಪ್ರಕ್ರಿಯೆಯಲ್ಲಿ ಮೊದಲು ಮೇಕೆಯ ಕಿವಿಯಿಂದ ಕಾರ್ಟಿಲೆಜ್ (ಮೃದು ಮೂಳೆ) ತೆಗೆಯಲಾಗುತ್ತದೆ. ವಿವಿಧ ರಾಸಾಯನಿಕ ಪ್ರಕ್ರಿಯೆಗಳ ಬಳಿಕ ನಂತರವೂ ಕಾರ್ಟಿಲೆಜ್‌ನ ರಚನೆ ಮತ್ತು ಗುಣಮಟ್ಟವು ಹಾಗೆಯೇ ಉಳಿದಿದೆಯಂತೆ. ಮೇಕೆ ಕಿವಿಗಳಿಂದ ಕಾರ್ಟಿಲೆಜ್ ಅನ್ನು ಮಾನವ ದೇಹಕ್ಕೆ ಸೇರಿಸುವ ಮೊದಲು, ಅದನ್ನು ಪ್ರಾಣಿಗಳ ದೇಹಗಳ ಮೇಲೆ ಪರೀಕ್ಷಿಸಲಾಗಿದೆ. ಪರೀಕ್ಷೆ ಯಶಸ್ವಿಯಾದ ನಂತರ ಅದನ್ನು ದೈಹಿಕ ವಿರೂಪಗಳಿಂದ ಬಳಲುತ್ತಿರುವ 25 ರೋಗಿಗಳಿಗೆ ಅಳವಡಿಸಲಾಗಿದೆ.

ಮೇಕೆ ಕಿವಿಯ ಕಾರ್ಟಿಲೆಜ್ ಅನ್ನು ಅತ್ಯಂತ ಕಡಿಮೆ ವೆಚ್ಚದಲ್ಲಿ ರೋಗಿಗಳಿಗೆ ಚಿಕಿತ್ಸೆ ನೀಡಲು ಬಳಸಬಹುದು. ಈ ಯೋಜನೆಗೆ ಕೇಂದ್ರ ಜೈವಿಕ ತಂತ್ರಜ್ಞಾನ ಸಚಿವಾಲಯದಿಂದ ನಿಧಿಯನ್ನು ಸ್ವೀಕರಿಸಲಾಗಿದೆ. ಇನ್ನೂ ಮೂರು-ನಾಲ್ಕು ವರ್ಷಗಳ ಕಾಲ ಈ ಬಗ್ಗೆ ಸಂಶೋಧನೆ ಮುಂದುವರಿಯಲಿದೆ. ಸುಟ್ಟ ಗಾಯಗಳು ಮತ್ತು ಕುಷ್ಠರೋಗದ ಗಾಯಗಳಲ್ಲಿ ಮೇಕೆ ಕಾರ್ಟಿಲೆಜ್ ಅನ್ನು ಬಳಸಬಹುದೇ ಎಂಬ ಬಗ್ಗೆ ತಜ್ಞರು ಕೂಲಂಕುಷ ಪರಿಶೀಲನೆ ನಡೆಸಲಿದ್ದಾರೆ.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್‌ ಚಂಡಮಾರುತದ ಪರಿಣಾಮ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist