ಮಂಗಳವಾರ, ಫೆಬ್ರವರಿ 4, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಮೇ ತಿಂಗಳಲ್ಲಿ 4 ದಿನ ಎಣ್ಣೆ ಅಂಗಡಿ ಬಂದ್.. !

Twitter
Facebook
LinkedIn
WhatsApp
download 1

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯ ಬಿಸಿ ಮದ್ಯ ಪ್ರಿಯರಿಗೆ ಈ ಬಾರಿ ಭರ್ಜರಿಯಾಗಿ ತಟ್ಟಲಿದೆ. ಏಕೆಂದರೆ ರಾಜ್ಯದಲ್ಲಿ ಒಂದೇ ಹಂತದಲ್ಲಿ ಮತದಾನ ಇದೆ. ಜೊತೆಗೆ ಮತದಾನ ನಡೆದ ಮೂರೇ ದಿನಕ್ಕೆ ಫಲಿತಾಂಶವೂ ಪ್ರಕಟವಾಗುವ ಹಿನ್ನೆಲೆಯಲ್ಲಿ ಈ ಎರಡೂ ಮಹತ್ವದ ದಿನಗಳ ಆಸುಪಾಸಿನಲ್ಲಿ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ನಿಷೇಧ ಇರಲಿದೆ.

ರಾಜ್ಯದಲ್ಲಿ ಮೇ 10 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಇನ್ನು ಮೇ 13 ರಂದು ರಾಜ್ಯಾದ್ಯಂತ ಮತ ಎಣಿಕೆ ನಡೆಯಲಿದ್ದು, ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ. ಈ ಹಿನ್ನೆಲೆಯಲ್ಲಿ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮದ್ಯ ಮಾರಾಟ ಹಾಗೂ ಸಾಗಾಟದ ಮೇಲೆ ನಿರ್ಬಂಧ ಹೇರಲಾಗಿದೆ. ಮುಕ್ತ ಹಾಗೂ ನ್ಯಾಯ ಸಮ್ಮತ ಚುನಾವಣೆ ದೃಷ್ಟಿಯಿಂದಲೂ ಮದ್ಯ ಮಾರಾಟದ ಮೇಲೆ ನಿಷೇಧ ಹೇರೋದು ಅತ್ಯಗತ್ಯವಾಗಿದೆ.

ಯಾವತ್ತು ಮದ್ಯ ಸಿಗೋದಿಲ್ಲ?


ಮೇ 10 ರಂದು ಮತದಾನ ಇರುವ ಹಿನ್ನೆಲೆಯಲ್ಲಿ ಮೇ 8 ರಂದು ಸಂಜೆ 5 ಗಂಟೆಯಿಂದ ಮೇ 10 ರಂದು ಮಧ್ಯರಾತ್ರಿ 12ರ ವರೆಗೆ ಮದ್ಯ ಮಾರಾಟಕ್ಕೆ ರಾಜ್ಯಾದ್ಯಂತ ನಿರ್ಬಂಧ ಇರಲಿದೆ. ಜೊತೆಯಲ್ಲೇ ಮೇ 13 ರಂದು ಫಲಿತಾಂಶ ಇರುವ ಕಾರಣ ಮೇ 12ರ ಮಧ್ಯರಾತ್ರಿ 12 ಗಂಟೆಯಿಂದ ಮೇ 13ರ ಮಧ್ಯರಾತ್ರಿ 12 ಗಂಟೆವರೆಗೆ ರಾಜ್ಯಾದ್ಯಂತ ಮದ್ಯ ಮಾರಾಟಕ್ಕೆ ನಿರ್ಬಂಧ ಇರಲಿದೆ. ಈ ನಿರ್ಬಂಧವು ಮದ್ಯ ಮಾರಾಟ ಮಳಿಗೆ, ಬಾರ್ ಮತ್ತು ರೆಸ್ಟೋರೆಂಟ್, ಮದ್ಯ ತಯಾರಿಸುವ ಡಿಸ್ಟಲರಿ, ಸ್ಟಾರ್ ಹೊಟೇಲ್‌ಗಳು ಹಾಗೂ ಶೇಂದಿ ಅಂಗಡಿಗಳಿಗೂ ಅನ್ವಯ ಆಗಲಿದೆ. ಹೋಟೆಲ್, ಕ್ಲಬ್‌ಗಳಲ್ಲೂ ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವಂತಿಲ್ಲ!

ಗಡಿ ಭಾಗದಲ್ಲಿ 4 ದಿನ ‘ಡ್ರೈ ಡೇ’..!


ರಾಜ್ಯದ ಗಡಿ ಭಾಗದ ಜಿಲ್ಲೆಗಳಲ್ಲಿ ಮದ್ಯ ಮಾರಾಟಕ್ಕೆ ಇರುವ ನಿರ್ಬಂಧ ಸ್ವಲ್ಪ ಹೆಚ್ಚಾಗಿಯೇ ತಟ್ಟಲಿದೆ. ಅಕ್ಕ ಪಕ್ಕದ ರಾಜ್ಯಗಳಲ್ಲಿ ಚುನಾವಣೆ ಇಲ್ಲದ ಕಾರಣ ನೆರೆ ರಾಜ್ಯಗಳಿಂದ ಮದ್ಯ ಅಕ್ರಮವಾಗಿ ಸರಬರಾಜಾಗುವ ಸಾಧ್ಯತೆ ಇರುವ ಕಾರಣ ಅಬಕಾರಿ ಇಲಾಖೆ ಹಾಗೂ ಪೊಲೀಸರು ಹೆಚ್ಚಿನ ನಿಗಾ ವಹಿಸಿದ್ದಾರೆ.

ಕರ್ನಾಟಕ ರಾಜ್ಯದ ಗಡಿ ಭಾಗದಲ್ಲಿ ಇರುವ ಅನ್ಯ ರಾಜ್ಯಗಳ ಕನಿಷ್ಟ 5 ಕಿ. ಮೀ. ಅಂತರದ ಗ್ರಾಮಗಳು, ನಗರ, ಪಟ್ಟಣಗಳಲ್ಲೂ ಮದ್ಯ ಮಾರಾಟಕ್ಕೆ ನಿರ್ಬಂದ ಹೇರಲಾಗಿದೆ. ಕರ್ನಾಟಕ ಗಡಿ ಭಾಗದ ಮಹಾರಾಷ್ಟ್ರದ ಲಾತೂರ್ ಜಿಲ್ಲೆಯಲ್ಲಿ ಇರುವ ನಿಲಂಗಾ, ದೇವಾನಿ ಹಾಗೂ ಉದ್ಗಿರ್ ತಾಲ್ಲೂಕುಗಳಲ್ಲಿ ಮದ್ಯ ನಿಷೇಧ ನಿಯಮ ಅನ್ವಯ ಆಗಲಿದೆ. ಇದೇ ನಿಯಮ ತೆಲಂಗಾಣ, ಆಂಧ್ರ ಪ್ರದೇಶ, ಗೋವಾ, ತಮಿಳುನಾಡು ಹಾಗೂ ಕೇರಳ ರಾಜ್ಯಗಳ ಗಡಿ ಭಾಗದ ಗ್ರಾಮಗಳಲ್ಲೂ ಅನ್ವಯ ಆಗಲಿದೆ.


ಕರ್ನಾಟಕದ ಗಡಿಯಿಂದ 5 ಕಿ. ಮೀ. ಅಂತರದಲ್ಲಿ ಅನ್ಯ ರಾಜ್ಯಗಳ ಗ್ರಾಮ, ನಗರ, ಪಟ್ಟಣಗಳಲ್ಲಿ ಮದ್ಯ ಮಾರಾಟ ಮಾಡುವಂತಿಲ್ಲ. ಈ ನಿಯಮವು ಮೇ ತಿಂಗಳ 8ನೇ ತಾರೀಕಿನ ಸಂಜೆ 6 ಗಂಟೆಯಿಂದ ಮೇ 10ರ ಸಂಜೆ 6 ಗಂಟೆವರೆಗೆ ಅನ್ವಯ ಆಗಲಿದೆ. ಮೇ 13 ಫಲಿತಾಂಶದ ದಿನ ಕೂಡಾ ಇದೇ ನಿಯಮ ದಿನವಿಡೀ ಅನ್ವಯ ಆಗಲಿದೆ. ಹೀಗಾಗಿ, ನೆರೆ ರಾಜ್ಯಗಳ ಗಡಿ ದಾಟಿ ಮದ್ಯ ಸೇವನೆ ಮಾಡಬಹುದು ಎಂಬ ಗಡಿ ಭಾಗದ ಕರ್ನಾಟಕ ಜನರ ಆಸೆಗೆ ಸರ್ಕಾರ ತಣ್ಣೀರು ಎರಚಿದೆ. 1951ರ ಪ್ರಜಾಪ್ರತಿನಿಧಿ ಕಾಯ್ದೆ ಅನ್ವಯ ಚುನಾವಣಾ ಆಯೋಗ ಈ ಕ್ರಮ ಕೈಗೊಂಡಿದೆ. ಮದ್ಯ ನಿಷೇಧವು ಬ್ರಾಂಡೆಡ್ ಮದ್ಯ ಮಾತ್ರವಲ್ಲ, ಹೆಂಡ ಸೇರಿದಂತೆ ಎಲ್ಲ ರೀತಿಯ ದೇಸೀ ಮದ್ಯಕ್ಕೂ ಅನ್ವಯ ಆಗಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist